ಬೆಂಗಳೂರು : ಮೈಸೂರು ವಿಶ್ವವಿದ್ಯಾಲಯದಲ್ಲಿ ಸಂವಿಧಾನ ಪೀಠ ಮತ್ತು ಬೆಂಗಳೂರಿನಲ್ಲೂ ಆಂಧ್ರದ ಮಾದರಿಯನ್ನೂ ಮೀರಿದ ದೇಶದಲ್ಲೇ ಅತ್ಯಂತ ಎತ್ತರದ ಅಂಬೇಡ್ಕರ್ ಪ್ರತಿಮೆ ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.
ವಿಧಾನಸೌಧದ ಮೆಟ್ಟಿಲುಗಳ ಮೇಲೆ ಆಯೋಜಿಸಿದ್ದ ಸಂವಿಧಾನ ಶಿಲ್ಪಿ, ಮಹಾ ಮಾನವತಾವಾದಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜನ್ಮದಿನೋತ್ಸವವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸಂವಿಧಾನದ ಆಶಯ ಈಡೇರಬೇಕಾದರೆ ಅಸಮಾನತೆ, ಅಸ್ಪ್ರಶ್ಯತೆ ಅಳಿಯಬೇಕು. ಜಾತಿ ವ್ಯವಸ್ಥೆ ಇರುವವರೆಗೆ ಸಮಾನತೆ ಬರುವುದಿಲ್ಲ, ಅಸ್ಪೃಶ್ಯತೆ ಅಳಿಯುವುದಿಲ್ಲ ಎಂದು ಅಂಬೇಡ್ಕರ್ ಹೇಳಿದ್ದಾರೆ. ಅಂಬೇಡ್ಕರ್ ಇಲ್ಲದೇ ಹೋಗಿದ್ದರೆ ಎಲ್ಲರಿಗೂ ಶಿಕ್ಷಣ ದೊರೆಯುತ್ತಿರಲಿಲ್ಲ ಎಂದರು.
ಬಜೆಟ್ ಗಾತ್ರ ಹೆಚ್ಚಾದಂತೆ scp/ tsp ಹಣ ಹೆಚ್ಚಾಗಬೇಕು. ಆದರೆ ಬಿಜೆಪಿ ಸರ್ಕಾರ ಕಡಿಮೆ ಮಾಡಿತು. ಆದರೆ ನಾವು ಅಧಿಕಾರಕ್ಕೆ ಬಂದ ಬಳಿಕ ಮತ್ತೆ ಯೋಜನಾ ಗಾತ್ರಕ್ಕೆ ತಕ್ಕಂತೆ ಹೆಚ್ಚಿಸಿದ್ದೀವಿ. ಈ ಬಾರಿ 42018 ಕೋಟಿ ರೂಪಯಿಯನ್ನು ನಾವು ತೆಗೆದಿಟ್ಟಿದ್ದೀವಿ ಎಂದು ಹೇಳಿದರು.
8300 ಕೋಟಿ scsp/tsp ಹಣ ದುರುಪಯೋಗ ಪಡಿಸಿಕೊಂಡಿದ್ದು ಬಿಜೆಪಿ. ಇವರು ನಾಚಿಕೆ ಇಲ್ಲದೆ ನಮ್ಮ ಮೇಲೆ ಆರೋಪ ಮಾಡುತ್ತಿದ್ದಾರೆ. ಅಂಬೇಡ್ಕರ್ ಅವರ ಆಶಯಗಳ ಜಾರಿಗಾಗಿ ನಾವು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು ನಮ್ಮ ಜನರ ಕೊಳ್ಳುವ ಶಕ್ತಿಯನ್ನು ಹೆಚ್ಚಿಸಿದ್ದೇವೆ ಎಂದರು.
ವಿದ್ಯಾವಂತರೇ ಹೆಚ್ಚು ಜಾತಿವಾದಿಗಳಾಗುತ್ತಿರುವುದು ಸರಿಯಲ್ಲ. ಶಿಕ್ಷಣದ ಉದ್ದೇಶ ಜಾತಿವಾದಿಗಳಾಗುವುದಲ್ಲ. ಬಾಬಾ ಸಾಹೇಬ್ ಒಬ್ಬ ವ್ಯಕ್ತಿ ಇಡೀ ದೇಶದ ಶಿಕ್ಷಣ ವಂಚಿತ ನೂರಾರು ಜಾತಿ ಸಮುದಾಯಗಳಿಗೆ ಶಿಕ್ಷಣ ಸಿಗಲು ಕಾರಣಕರ್ತರಾದರು. ಮುಸಲ್ಮಾನರು ಶಿಕ್ಷಣದಿಂದ ವಂಚಿತರಾಗಬಾರದು, ಅವಕಾಶಗಳಿಂದ ವಂಚಿತರಾಗಬಾರದು, ಹೀಗಾಗಿ ಸಂವಿಧಾನ ಹೇಳಿದಂತೆ ನಾವು ಎಲ್ಲಾ ಜಾತಿ, ಎಲ್ಲಾ ಧರ್ಮದ ಬಡವರಿಗೆ ಅವಕಾಶ ಕಲ್ಪಿಸುತ್ತಿದ್ದೇವೆ. ಇಷ್ಟಕ್ಕೇ ಕಾಂಗ್ರೆಸ್ ಬರೀ ಮುಸಲ್ಮಾನರನ್ನು ಓಲೈಸುತ್ತಿದೆ ಎಂದು ಅಪಪ್ರಚಾರ ಮಾಡುತ್ತಿದ್ದಾರೆ ಎಂದರು.
ಬಹುತ್ವದ ದೇಶ ನಿರ್ಮಾಣಕ್ಕೆ, ಬ್ರಾತೃತ್ವದ ಸಮಾಜ ನಿರ್ಮಾಣಕ್ಕೆ ಅಂಬೇಡ್ಕರ್ ಅವರು ಕೊಟ್ಟ ಮಾರ್ಗದಲ್ಲಿ ನಮ್ಮ ಸರ್ಕಾರ ನಡೆಯುತ್ತಿದೆ. ಸರಾಯಿ ಬೇಡ, ಶಾಲೆ ಬೇಕು ಎನ್ನುವುದು ದಲಿತ ಸಂಘರ್ಷ ಸಮಿತಿ ಹೋರಾಟದ ಘೋಷಣೆಯಾಗಿತ್ತು. ನಾನು ಉಪಮುಖ್ಯಮಂತ್ರಿ ಆದ ತಕ್ಷಣ ಊರು ಊರಲ್ಲಿ ವಸತಿ ಶಾಲೆ ಆರಂಭಿಸಿದೆ. ಮುಂದಿನ ಆರ್ಥಿಕ ವರ್ಷದ ಕೊನೆಯ ವೇಳೆಗೆ ರಾಜ್ಯದ ಎಲ್ಲಾ ಹೋಬಳಿಗಳಲ್ಲೂ ವಸತಿ ಶಾಲೆ ತೆರೆದಿರುತ್ತವೆ ಎಂದು ಭರವಸೆ ನೀಡಿದರು.
ಬೆಂಗಳೂರು : ನಾಳೆಯಿಂದ ಐಪಿಎಲ್ ಪಂದ್ಯಾವಳಿಗಳು ಆರಂಭವಾಗಲಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಸಂಬಂಧಪಟ್ಟ…
ಮದ್ದೂರು : ಖಾಸಗಿ ಶಾಲೆ ಬಸ್ ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿ, 14 ವಿದ್ಯಾರ್ಥಿಗಳ ಜತೆಗೆ 6…
ಹನೂರು : ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ…
ಎಚ್.ಡಿ.ಕೋಟೆ : ರಾಜ್ಯದಲ್ಲಿ ಜಾತ್ಯತೀತ ಜನತಾದಳ-ಬಿಜೆಪಿಯ ಮೈತ್ರಿಯ ಸರ್ಕಾರ ಅಧಿಕಾರಕ್ಕೆ ಬಂದು ಜನಪರ ಆಡಳಿತ ನೀಡುವ ದಿನಗಳು ಹತ್ತಿರವಾಗುತ್ತಿವೆ ಎಂದು…
ಬೆಂಗಳೂರು : ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ತಾವು ಕಣದಿಂದ ಹಿಂದೆ ಸರಿದಿರುವುದಾಗಿ ಘೋಷಿಸಿದ್ದಾರೆ.…
ಬೆಂಗಳೂರು : ಕರ್ನಾಟಕದ ಶೈಕ್ಷಣಿಕ ಇತಿಹಾಸದಲ್ಲಿ ರಾಜ್ಯ ಸರ್ಕಾರವು ಅತ್ಯಂತ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದ್ದು, ಎಸ್ಎಸ್ಎಲ್ಸಿ ಪರೀಕ್ಷಾ ಪದ್ಧತಿಯಲ್ಲಿ ಆಮೂಲಾಗ್ರ…