ರಾಜ್ಯ

ಅರ್ಜುನನ ಸ್ಮಾರಕ ನಿರ್ಮಾಣ: ಸಚಿವ ಈಶ್ವರ್‌ ಖಂಡ್ರೆ

ಮೈಸೂರು: ನಾಡಹಬ್ಬ ದಸರಾದಲ್ಲಿ 8 ಬಾರಿ ಅಂಬಾರಿಯನ್ನು ಹೊತ್ತ ಆನೆ ಅರ್ಜುನ ಕಾಡಾನೆ ದಾಳಿಯಲ್ಲಿ ವೀರ ಮರಣ ಹೊಂದಿದ್ದಾನೆ. ಇದೀಗ ಆತನ ಹೆಸರಿನಲ್ಲಿ ವಿಶೇಷ ಸ್ಮಾರಕ ಒಂದನ್ನು ನಿರ್ಮಾಣ ಮಾಡಲಾಗುವುದ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್‌ ಖಂಡ್ರೆ ತಿಳಿಸಿದ್ದಾರೆ.

ಈ ಬಗ್ಗೆ ಬೆಳಗಾವಿ ಸುವರ್ಣಸೌಧದಲ್ಲಿ ನಡೆಯುತ್ತಿರುವ ವಿಧಾನಮಂಡಲ ಚಳಿಗಾಲದ ಅಧಿವೇಶನದಲ್ಲಿ ತಿಳಿಸಿರುವ ಸಚಿವರು, ಹಾಸನದ ಸಕಲೇಶ್‌ಪುರದ ಬಳಿ ಕಾಡಾನೆ, ಒಂಟಿಸಲಗ ಸೆರೆಹಿಡಿಯುವ ಕಾರ್ಯಾಚರಣೆ ವೇಳೆ ಪುಂಡಾನೆಯೊಂದಿಗೆ ಕಾದಾಡಿ ವೀರ ಮರಣ ಹೊಂದಿದ್ದಾನೆ ಎಂದರು.

ಅರ್ಜುನನ ಸಾವು ನಾಡಿನ ಜನತೆಗೆ ಅತೀವ ನೋವುಂಟು ಮಾಡಿದೆ. ಅರ್ಜುನ ಕೇವಲ ಆನೆಯಲ್ಲ, ನಾಡಿನ ಜನತೆಯೊಂದಿಗಿನ ಭಾವನಾತ್ಮಕ ಸಂಬಂಧ. ಅರ್ಜುನನ ಸೇವೆಯನ್ನು ನಾಡಿನ ಜನತೆ ಸಧಾ ಸ್ಮರಿಸುವಂತೆ ಹಾಸನ ಮತ್ತು ಮೈಸೂರಿನಲ್ಲಿ ಅರ್ಜುನನ ಸ್ಮಾರಕ ನಿರ್ಮಾಣ ಮಾಡಲಾಗುವುದು ಎಂದು ತಿಳಿಸಿದರು.

ಅರಣ್ಯ ಸಿಬ್ಬಂಧಿಗೆ ಸೂಕ್ತ ತರಬೇತಿ ನೀಡಿ:
ಕಾಡು ಪ್ರಾಣಿಗಳು ಹೆಚ್ಚಿನ ಸಂಖ್ಯೆಯಲ್ಲಿ ನಾಡಿಗೆ ಬರುತ್ತಿವೆ. ಅವುಗಳನ್ನು ಸೆರೆ ಹಿಡಿಯುವ ಕಾರ್ಯಾಚರಣೆಯಲ್ಲಿ ಅರಣ್ಯಾಧೀಕಾರಿಗಳು ಮತ್ತು ಸಿಬ್ಬಂಧಿಗಳು ತೊಡಗಿದ್ದಾರೆ. ಈ ವೇಳೆ ಆನೆಗಳು ಮತ್ತು ಅರಣ್ಯ ಸಿಬ್ಬಂಧಿಳು ಸಾವನ್ನಪ್ಪುತ್ತಿದ್ದಾರೆ. ಇದಕ್ಕೆ ಸೂಕ್ತ ತರಬೇತಿ ಇಲ್ಲದಿರುವುದೇ ಮುಖ್ಯ ಕಾರಣವಾಗಿದೆ. ಇದನ್ನು ತಡೆಯಲು ಅರಣ್ಯಾಧಿಕಾರಿಗಳಿಗೆ ಸೂಕ್ತ ತರಬೇತಿ ನೀಡುವಂತೆ ಅಧಿಕಾರಿಗಳಿಗೆ ತಿಳಿಸಿದರು.

andolanait

Recent Posts

ಕಾವೇರಿ ನದಿಯಲ್ಲಿ ಆರು ಜನ ಸಾವು ; ಸಾವಿಗೀಡಾದವರೆಲ್ಲರೂ ಒಂದೇ ಕುಟುಂಬದವರು

ಕೆ.ಆರ್.ನಗರ : ತಾಲ್ಲೂಕಿನ ಹೊರವಲಯದ ಅರ್ಕೇಶ್ವರ ದೇಗುಲ ಬಳಿಯ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ಸಾವನ್ನಪ್ಪಿದ ಆರು ಮಂದಿಯೂ ಒಂದೇ…

2 hours ago

ಚಾ.ನಗರ ಆಕ್ಸಿಜನ್‌ ದುರಂತ : ಸಂತ್ರಸ್ಥರಿಗೆ ಕೊನೆಗೂ ಒಲಿದ ಸರ್ಕಾರಿ ನೌಕರಿ

ಚಾಮರಾಜನಗರ : ಕೋವಿಡ್ ವೇಳೆಯಲ್ಲಿ ನಗರದ ಜಿಲ್ಲಾಸ್ಪತ್ರೆಯಲ್ಲಿ (ಈಗ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ) ಸಂಭವಿಸಿದ್ದ ಆಕ್ಸಿಜನ್ ದುರಂತದಲ್ಲಿ 36…

3 hours ago

ಏ.20, 21 ರಂದು ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ.20 ಹಾಗೂ 21ರಂದು ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. 20ರಂದು…

3 hours ago

6 ಮಂದಿ ಸಾವು ಪ್ರಕರಣ ; ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

ಮೈಸೂರು : ಜಿಲ್ಲೆಯ ಕೆ.ಆರ್.ನಗರದ ಅರ್ಕೇಶ್ವರ ದೇಗುಲದ ಬಳಿ ಕಾವೇರಿ ನದಿಯಲ್ಲಿ ಈಜಲು ತೆರಳಿ ಮೃತಪಟ್ಟವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ…

3 hours ago

ದೇವರನ್ನು ನಂಬಿ, ಮೂಢನಂಬಿಕೆಗಳನ್ನು ತ್ಯಜಿಸಿ : ಸಿಎಂ ಸಿದ್ದರಾಮಯ್ಯ ಕರೆ

ರಾಣೇಬೆನ್ನೂರ : ಮಾನವ ಸಮಾಜ ನಿರ್ಮಾಣದಲ್ಲಿ ಎಲ್ಲರೂ ಪಾಲುದಾರರಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಅವರು ಇಂದು ರಾಣಿಬೆನ್ನೂರಿನ ನಿಟ್ಟೂರು…

3 hours ago

IPL 2026 | ಸೋಲಿನ ಸರಪಳಿ ಕಳಚಿದ ಕೆಕೆಆರ್‌ ; ರಾಜಸ್ಥಾನ ವಿರುದ್ಧ ಜಯ

ಕೊಲ್ಕತ್ತಾ : ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026ರ 28ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡವು ರಾಜಸ್ಥಾನ…

3 hours ago