ರಾಜ್ಯ

ಅರ್ಜುನನ ಸ್ಮಾರಕ ನಿರ್ಮಾಣ: ಸಚಿವ ಈಶ್ವರ್‌ ಖಂಡ್ರೆ

ಮೈಸೂರು: ನಾಡಹಬ್ಬ ದಸರಾದಲ್ಲಿ 8 ಬಾರಿ ಅಂಬಾರಿಯನ್ನು ಹೊತ್ತ ಆನೆ ಅರ್ಜುನ ಕಾಡಾನೆ ದಾಳಿಯಲ್ಲಿ ವೀರ ಮರಣ ಹೊಂದಿದ್ದಾನೆ. ಇದೀಗ ಆತನ ಹೆಸರಿನಲ್ಲಿ ವಿಶೇಷ ಸ್ಮಾರಕ ಒಂದನ್ನು ನಿರ್ಮಾಣ ಮಾಡಲಾಗುವುದ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್‌ ಖಂಡ್ರೆ ತಿಳಿಸಿದ್ದಾರೆ.

ಈ ಬಗ್ಗೆ ಬೆಳಗಾವಿ ಸುವರ್ಣಸೌಧದಲ್ಲಿ ನಡೆಯುತ್ತಿರುವ ವಿಧಾನಮಂಡಲ ಚಳಿಗಾಲದ ಅಧಿವೇಶನದಲ್ಲಿ ತಿಳಿಸಿರುವ ಸಚಿವರು, ಹಾಸನದ ಸಕಲೇಶ್‌ಪುರದ ಬಳಿ ಕಾಡಾನೆ, ಒಂಟಿಸಲಗ ಸೆರೆಹಿಡಿಯುವ ಕಾರ್ಯಾಚರಣೆ ವೇಳೆ ಪುಂಡಾನೆಯೊಂದಿಗೆ ಕಾದಾಡಿ ವೀರ ಮರಣ ಹೊಂದಿದ್ದಾನೆ ಎಂದರು.

ಅರ್ಜುನನ ಸಾವು ನಾಡಿನ ಜನತೆಗೆ ಅತೀವ ನೋವುಂಟು ಮಾಡಿದೆ. ಅರ್ಜುನ ಕೇವಲ ಆನೆಯಲ್ಲ, ನಾಡಿನ ಜನತೆಯೊಂದಿಗಿನ ಭಾವನಾತ್ಮಕ ಸಂಬಂಧ. ಅರ್ಜುನನ ಸೇವೆಯನ್ನು ನಾಡಿನ ಜನತೆ ಸಧಾ ಸ್ಮರಿಸುವಂತೆ ಹಾಸನ ಮತ್ತು ಮೈಸೂರಿನಲ್ಲಿ ಅರ್ಜುನನ ಸ್ಮಾರಕ ನಿರ್ಮಾಣ ಮಾಡಲಾಗುವುದು ಎಂದು ತಿಳಿಸಿದರು.

ಅರಣ್ಯ ಸಿಬ್ಬಂಧಿಗೆ ಸೂಕ್ತ ತರಬೇತಿ ನೀಡಿ:
ಕಾಡು ಪ್ರಾಣಿಗಳು ಹೆಚ್ಚಿನ ಸಂಖ್ಯೆಯಲ್ಲಿ ನಾಡಿಗೆ ಬರುತ್ತಿವೆ. ಅವುಗಳನ್ನು ಸೆರೆ ಹಿಡಿಯುವ ಕಾರ್ಯಾಚರಣೆಯಲ್ಲಿ ಅರಣ್ಯಾಧೀಕಾರಿಗಳು ಮತ್ತು ಸಿಬ್ಬಂಧಿಗಳು ತೊಡಗಿದ್ದಾರೆ. ಈ ವೇಳೆ ಆನೆಗಳು ಮತ್ತು ಅರಣ್ಯ ಸಿಬ್ಬಂಧಿಳು ಸಾವನ್ನಪ್ಪುತ್ತಿದ್ದಾರೆ. ಇದಕ್ಕೆ ಸೂಕ್ತ ತರಬೇತಿ ಇಲ್ಲದಿರುವುದೇ ಮುಖ್ಯ ಕಾರಣವಾಗಿದೆ. ಇದನ್ನು ತಡೆಯಲು ಅರಣ್ಯಾಧಿಕಾರಿಗಳಿಗೆ ಸೂಕ್ತ ತರಬೇತಿ ನೀಡುವಂತೆ ಅಧಿಕಾರಿಗಳಿಗೆ ತಿಳಿಸಿದರು.

andolanait

Recent Posts

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

24 mins ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

2 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

5 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

6 hours ago

ಓದುಗರ ಪತ್ರ: ಶಾಲಾ ಶಿಕ್ಷಣದಲ್ಲಿ ಕೃಷಿ ಬಗ್ಗೆ ಪಠ್ಯ ಅಳವಡಿಸಿ

ಮನುಷ್ಯನಿಗೆ ಅತ್ಯಗತ್ಯವಾಗಿರುವುದು ಆಹಾರ. ಇದಕ್ಕೆ ಕೃಷಿಯೇ ಮೂಲ. ರೈತನ ಪರಿಶ್ರಮದಿಂದ ಜನರು ನೆಮ್ಮದಿಯಿಂದ ಊಟ ಮಾಡಲು ಸಾಧ್ಯವಾಗಿದೆ. ಆಧುನಿಕ ಆವಿಷ್ಕಾರಗಳಿಂದ…

6 hours ago

ಸೌಹಾರ್ದ ಸಮಾಜಕ್ಕಾಗಿ ಮಕ್ಕಳಲ್ಲಿ ಭಾವೈಕ್ಯತೆ ಬಿತ್ತನೆ ಅತ್ಯಗತ್ಯ

ಟಿ.ಕೆ.ಹರೀಶ್ ತಂತ್ರಜ್ಞಾನ ಬಳಕೆ ಅತಿಯಾದರೆ ಮಕ್ಕಳಲ್ಲಿ ಸಹಾನುಭೂತಿ ಕ್ಷೀಣ  ಮಾನವೀಯತೆಯ ಮೂಲ ಮಂತ್ರವೇ ಸೌಹಾರ್ದತೆ. ಇದು ಕೇವಲ ಸಹಬಾಳ್ವೆಯಲ್ಲ, ಬದಲಿಗೆ…

6 hours ago