ರಾಜ್ಯ

ರಾಜ್ಯದ 15 ಕಡೆ ರೋಪ್‌ ವೇ ನಿರ್ಮಾಣ: ಎಚ್‌.ಕೆ.ಪಾಟೀಲ್‌ ಮಾಹಿತಿ

ಬೆಳಗಾವಿ: ರಾಜ್ಯದಲ್ಲಿ 15 ಕಡೆ ರೋಪ್‌ ವೇಗಳ ನಿರ್ಮಾಣಕ್ಕೆ ಸರ್ಕಾರ ತೀರ್ಮಾನ ಕೈಗೊಂಡಿದ್ದು, ನಿರ್ಮಾಣ ಹಾಗೂ ಕಾರ್ಯ ನಿರ್ವಹಣೆಯನ್ನು ಅಧಿಕೃತಗೊಳಿಸುವ ಸಲುವಾಗಿ 2024ನೇ ಸಾಲಿನ ವಿಧೇಯಕವನ್ನು ಜಾರಿಗೊಳಿಸಲಾಗುತ್ತಿದೆ ಎಂದು ಸಚಿವ ಎಚ್‌.ಕೆ.ಪಾಟೀಲ್‌ ಮಾಹಿತಿ ನೀಡಿದ್ದಾರೆ.

ಸುವರ್ಣಸೌಧದಲ್ಲಿ ಇಂದು(ಡಿಸೆಂಬರ್‌.17) ಈ ಕುರಿತು ಸದನದ ಕಲಾಪದಲ್ಲಿ ಮಾತನಾಡಿದ ಅವರು, ಸಾರ್ವಜನಿಕರ ಹಿತದೃಷ್ಟಿಯಿಂದ ವಿಧೇಯಕವನ್ನು ಮಂಡಿಸಲಾಗುತ್ತಿದ್ದು, ರೋಪ್‌ ವೇಗಳ ಸಹಾಯದಿಂದ ರಾಜ್ಯದಲ್ಲಿ ಪ್ರವಾಸೋದ್ಯಮಕ್ಕೆ ಉತ್ತೇಜನ ದೊರಕಲಿದೆ. ಹೀಗಾಗಿ ಸದನ ವಿಧೇಯಕ ಮಂಡನೆ ಅನುಮತಿ ನೀಡಬೇಕು ಎಂದು ಕೋರಿದ್ದಾರೆ.

ಈ ವೇಳೆ ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ಮಾತನಾಡಿ, ವಿಧೇಯಕದ ಅಡಿ ರಚಿಸಲಾಗುವ ಸಲಹಾ ಪ್ರಾಧಿಕಾರದಲ್ಲಿ ಸರ್ಕಾರದ ಅರಣ್ಯ ಇಲಾಖೆ ಕಾರ್ಯದರ್ಶಿಗಳನ್ನು ಸಹ ಸದಸ್ಯರನ್ನಾಗಿ ನೇಮಿಸಬೇಕು. ರೋಪ್‌ ವೇ ನಿರ್ಮಿಸಲು ಉದ್ದೇಶಿಸಿದ ಹಲವು ಸ್ಥಳಗಳು ಅರಣ್ಯ ಇಲಾಖೆ ವ್ಯಾಪ್ತಿಗೆ ಬರುತ್ತವೆ. ಅದಕ್ಕೆ ಶೀಘ್ರವೇ ಅವುಗಳಿಂದ ಅನುಮತಿ ಪಡೆಯಬೇಕು ಎಂದು ಹೇಳಿದ್ದಾರೆ.

ಬಿಜೆಪಿ ಶಾಸಕ ಡಾ.ಸಿ.ಎನ್‌.ಅಶ್ವಥ್‌ ನಾರಾಯಣ್‌ ಮಾತನಾಡಿ, ರೋಪ್‌ ವೇಗಳು ಮಲೆನಾಡು ಭಾಗದಲ್ಲಿ ಗುಡ್ಡದ ಮೇಲೆ ಕಾಲುದಾರಿಗಳ ನಿರ್ಮಾಣದಿಂದ ಉಂಟಾಗುವ ಭೂ ಕುಸಿತ ತಡೆಯಲು ಸಹಾಯಕವಾಗಿವೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಶಾಸಕ ಅರಗ ಜ್ಞಾನೇಂದ್ರ ಮಾತನಾಡಿ, ರೋಪ್‌ ವೇಗಳ ಸುರಕ್ಷತೆ ಮತ್ತು ಗುಣಮಟ್ಟ ಪರಿಶೀಲನೆಗೆ ಸರ್ಕಾರ ವಿಧೇಯಕದಲ್ಲಿ ಅಧಿಕ ಮಹತ್ವ ನೀಡಬೇಕು ಎಂದಿದ್ದಾರೆ.

ಇನ್ನು ಶಾಸಕ ಎಚ್‌.ಸಿ.ಬಾಲಕೃಷ್ಣ ಮಾತನಾಡಿ, ಶ್ರವಣಬೆಳಗೊಳದಲ್ಲಿ ರೋಪ್‌ ವೇ ನಿರ್ಮಿಸಲು ಭಾರತೀಯ ಪುರಾತತ್ವ ಇಲಾಖೆ ಅನುಮತಿ ನೀಡುತ್ತಿಲ್ಲ. ಅದನ್ನು ಗಮನದಲ್ಲಿಟ್ಟುಕೊಂಡು ರೋಪ್‌ ವೇ ಅನ್ನು ನಿರ್ಮಿಸಲು ಸಲಹಾ ಪ್ರಾಧಿಕಾರದಲ್ಲಿ ಪುರಾತತ್ವ ಇಲಾಖೆಯ ಅಧಿಕಾರಿಗಳನ್ನು ಸದಸ್ಯರನ್ನಾಗಿ ನೇಮಿಸಬೇಕು ಎಂದು ಸಲಹೆ ನೀಡಿದ್ದಾರೆ.

ಈ ಎಲ್ಲಾ ಶಾಸಕರು ನೀಡಿದ ಸಲಹೆ ಮತ್ತು ಸೂಚನೆಗಳನ್ನು ಆಧಾರಿಸಿ ಸದನದಲ್ಲಿ ಧ್ವನಿ ಮತದೊಂದಿಗೆ ತಿದ್ದುಪಡಿ ವಿಧೇಯಕವನ್ನು ಅಂಗೀಕಾರ ಮಾಡಲಾಗಿದೆ.

ಅರ್ಚನ ಎಸ್‌ ಎಸ್

Recent Posts

ಟಿವಿಕೆ ಗೆಲುವು : ಹನೂರಲ್ಲಿ ಸಂಭ್ರಮಾಚರಣೆ

ಹನೂರು : ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಹೆಚ್ಚಿನ ಸಂಖ್ಯೆಯಲ್ಲಿ ಜಯಗಳಿಸಿರುವುದಕ್ಕೆ ಕೆಂಪಯ್ಯನಹಟ್ಟಿ ಗ್ರಾಮದಲ್ಲಿ…

1 hour ago

ಪ.ಬಂಗಾಳ | ವಿಟೋ ಅಧಿಕಾರ ಬಳಸಿ ಮಂತ್ರಿಮಂಡಳ ವಿಸರ್ಜಿಸಿದ ರಾಜ್ಯಪಾಲ ; ದೀದಿಗೆ ಹಿನ್ನೆಡೆ

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನ ಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಬಹು ಮತ ಗಳಿಸದೇ ಸೋಲನ್ನು ಅನುಭವಿಸಿದರೂ ಮುಖ್ಯಮಂತ್ರಿ…

1 hour ago

ಹನೂರು | ಕಾಡು ಹಂದಿ ದಾಳಿ ; ರೈತನಿಗೆ ಗಂಭೀರ ಗಾಯ

ಹನೂರು : ತಾಲ್ಲೂಕಿನ ದಿನ್ನಳ್ಳಿ ರಸ್ತೆಯ ಸಮೀಪದ ಜಮೀನೊಂದರಲ್ಲಿ ಕಾಡು ಹಂದಿ ದಾಳಿ ನಡೆಸಿ ರೈತನಿಗೆ ಗಂಭೀರ ಗಾಯಗೊಳಿಸಿರುವ ಘಟನೆ…

2 hours ago

ಡಿಎಂಕೆ-ಎಐಎಡಿಎಂಕೆ ಮೈತ್ರಿ ವದಂತಿ ; ಸ್ಟಾಲಿನ್‌ ಹೇಳಿದ್ದೇನು?

ಚೆನ್ನೆ : ತಮಿಳುನಾಡಿನಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾದ ಬೆನ್ನಲ್ಲೇ ಸರ್ಕಾರ ರಚನೆಯ ಕಸರತ್ತು ಜೋರಾಗಿದೆ. 108 ಸ್ಥಾನಗಳೊಂದಿಗೆ ಅತಿ ದೊಡ್ಡ…

2 hours ago

ಮೇಲು-ಕೀಳು ಕಳೆಯಲಿ ; ಸರ್ವರೂ ಒಂದೇ ಎಂಬ ಮನೋಭಾವ ಮೂಡಲಿ : ಮೋಹನ್‌ ಭಾಗವತ್‌

ಮೈಸೂರು : ಮೇಲು-ಕೀಳು ಎಂಬ ಮನೋಭಾವ ಕಳೆದು ಸರ್ವರೂ ಒಂದೇ ಎಂಬ ಏಕ ಭಾವ ಭಾರತೀಯರಲ್ಲಿ ಮೂಡಬೇಕು ಎಂದು ರಾಷ್ಟ್ರೀಯ…

2 hours ago

ಬೆಂಗಳೂರು ಕೈತಪ್ಪಿದ ಐಪಿಎಲ್‌ ಫೈನಲ್‌ ಪಂದ್ಯ : ಕೆಎಸ್‌ಸಿಎ ಹೇಳಿದ್ದೇನು?

ಬೆಂಗಳೂರು : ಇಂಡಿಯನ್‌ ಪ್ರೀಮಿಯರ್‌ ಲೀಗ್‌(ಐಪಿಎಲ್) 2026ರ ಫೈನಲ್ ಪಂದ್ಯವನ್ನು ಬೆಂಗಳೂರಿನಿಂದ ಅಧಿಕೃತವಾಗಿ ಸ್ಥಳಾಂತರಿಸಿದ ಕುರಿತು ಕರ್ನಾಟಕ ರಾಜ್ಯ ಕ್ರಿಕೆಟ್…

2 hours ago