ಬೆಳಗಾವಿ: ರಾಜ್ಯದಲ್ಲಿ 15 ಕಡೆ ರೋಪ್ ವೇಗಳ ನಿರ್ಮಾಣಕ್ಕೆ ಸರ್ಕಾರ ತೀರ್ಮಾನ ಕೈಗೊಂಡಿದ್ದು, ನಿರ್ಮಾಣ ಹಾಗೂ ಕಾರ್ಯ ನಿರ್ವಹಣೆಯನ್ನು ಅಧಿಕೃತಗೊಳಿಸುವ ಸಲುವಾಗಿ 2024ನೇ ಸಾಲಿನ ವಿಧೇಯಕವನ್ನು ಜಾರಿಗೊಳಿಸಲಾಗುತ್ತಿದೆ ಎಂದು ಸಚಿವ ಎಚ್.ಕೆ.ಪಾಟೀಲ್ ಮಾಹಿತಿ ನೀಡಿದ್ದಾರೆ.
ಸುವರ್ಣಸೌಧದಲ್ಲಿ ಇಂದು(ಡಿಸೆಂಬರ್.17) ಈ ಕುರಿತು ಸದನದ ಕಲಾಪದಲ್ಲಿ ಮಾತನಾಡಿದ ಅವರು, ಸಾರ್ವಜನಿಕರ ಹಿತದೃಷ್ಟಿಯಿಂದ ವಿಧೇಯಕವನ್ನು ಮಂಡಿಸಲಾಗುತ್ತಿದ್ದು, ರೋಪ್ ವೇಗಳ ಸಹಾಯದಿಂದ ರಾಜ್ಯದಲ್ಲಿ ಪ್ರವಾಸೋದ್ಯಮಕ್ಕೆ ಉತ್ತೇಜನ ದೊರಕಲಿದೆ. ಹೀಗಾಗಿ ಸದನ ವಿಧೇಯಕ ಮಂಡನೆ ಅನುಮತಿ ನೀಡಬೇಕು ಎಂದು ಕೋರಿದ್ದಾರೆ.
ಈ ವೇಳೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಮಾತನಾಡಿ, ವಿಧೇಯಕದ ಅಡಿ ರಚಿಸಲಾಗುವ ಸಲಹಾ ಪ್ರಾಧಿಕಾರದಲ್ಲಿ ಸರ್ಕಾರದ ಅರಣ್ಯ ಇಲಾಖೆ ಕಾರ್ಯದರ್ಶಿಗಳನ್ನು ಸಹ ಸದಸ್ಯರನ್ನಾಗಿ ನೇಮಿಸಬೇಕು. ರೋಪ್ ವೇ ನಿರ್ಮಿಸಲು ಉದ್ದೇಶಿಸಿದ ಹಲವು ಸ್ಥಳಗಳು ಅರಣ್ಯ ಇಲಾಖೆ ವ್ಯಾಪ್ತಿಗೆ ಬರುತ್ತವೆ. ಅದಕ್ಕೆ ಶೀಘ್ರವೇ ಅವುಗಳಿಂದ ಅನುಮತಿ ಪಡೆಯಬೇಕು ಎಂದು ಹೇಳಿದ್ದಾರೆ.
ಬಿಜೆಪಿ ಶಾಸಕ ಡಾ.ಸಿ.ಎನ್.ಅಶ್ವಥ್ ನಾರಾಯಣ್ ಮಾತನಾಡಿ, ರೋಪ್ ವೇಗಳು ಮಲೆನಾಡು ಭಾಗದಲ್ಲಿ ಗುಡ್ಡದ ಮೇಲೆ ಕಾಲುದಾರಿಗಳ ನಿರ್ಮಾಣದಿಂದ ಉಂಟಾಗುವ ಭೂ ಕುಸಿತ ತಡೆಯಲು ಸಹಾಯಕವಾಗಿವೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಶಾಸಕ ಅರಗ ಜ್ಞಾನೇಂದ್ರ ಮಾತನಾಡಿ, ರೋಪ್ ವೇಗಳ ಸುರಕ್ಷತೆ ಮತ್ತು ಗುಣಮಟ್ಟ ಪರಿಶೀಲನೆಗೆ ಸರ್ಕಾರ ವಿಧೇಯಕದಲ್ಲಿ ಅಧಿಕ ಮಹತ್ವ ನೀಡಬೇಕು ಎಂದಿದ್ದಾರೆ.
ಇನ್ನು ಶಾಸಕ ಎಚ್.ಸಿ.ಬಾಲಕೃಷ್ಣ ಮಾತನಾಡಿ, ಶ್ರವಣಬೆಳಗೊಳದಲ್ಲಿ ರೋಪ್ ವೇ ನಿರ್ಮಿಸಲು ಭಾರತೀಯ ಪುರಾತತ್ವ ಇಲಾಖೆ ಅನುಮತಿ ನೀಡುತ್ತಿಲ್ಲ. ಅದನ್ನು ಗಮನದಲ್ಲಿಟ್ಟುಕೊಂಡು ರೋಪ್ ವೇ ಅನ್ನು ನಿರ್ಮಿಸಲು ಸಲಹಾ ಪ್ರಾಧಿಕಾರದಲ್ಲಿ ಪುರಾತತ್ವ ಇಲಾಖೆಯ ಅಧಿಕಾರಿಗಳನ್ನು ಸದಸ್ಯರನ್ನಾಗಿ ನೇಮಿಸಬೇಕು ಎಂದು ಸಲಹೆ ನೀಡಿದ್ದಾರೆ.
ಈ ಎಲ್ಲಾ ಶಾಸಕರು ನೀಡಿದ ಸಲಹೆ ಮತ್ತು ಸೂಚನೆಗಳನ್ನು ಆಧಾರಿಸಿ ಸದನದಲ್ಲಿ ಧ್ವನಿ ಮತದೊಂದಿಗೆ ತಿದ್ದುಪಡಿ ವಿಧೇಯಕವನ್ನು ಅಂಗೀಕಾರ ಮಾಡಲಾಗಿದೆ.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…