ರಾಜ್ಯ

ಮೈಸೂರಲ್ಲಿ ಎಸ್.ಎಲ್.ಬೈರಪ್ಪ ಸ್ಮಾರಕ ನಿರ್ಮಾಣ : ಸಿಎಂ ಘೋಷಣೆ

ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.

ಸೋಮವಾರ ಆರಂಭವಾದ ವಿಧಾನಸಭೆ ಕಲಾಪದಲ್ಲಿ ಅಗಲಿದ ಗಣ್ಯರಿಗೆ ಸಂತಾಪ ಸೂಚನಾ ನಿರ್ಣಯ ಬೆಂಬಲಿಸಿ ಮಾತನಾಡಿದ ಅವರು, ಭೈರಪ್ಪ ಅವರ ಸ್ಮಾರಕ ನಿರ್ಮಿಸಲು ನಿರ್ಧರಿಸಲಾಗಿದೆ. ಅಲ್ಲದೆ, ಸಾಲುಮರದ ತಿಮ್ಮಕ್ಕ ಅವರ ಹೆಸರಿನಲ್ಲಿ ಮುಂದಿನ ವರ್ಷದಿಂದ ಪರಿಸರ ಪ್ರಶಸ್ತಿ ನೀಡಲಾಗುವುದು ಎಂದರು.

ಸಾಲುಮರದ ತಿಮ್ಮಕ್ಕ ಅವರ ಗುಣಗಾನ ಮಾಡಿದ ಮುಖ್ಯಮಂತ್ರಿಯವರು, ಬೇಲೂರಿನಲ್ಲಿ ತಿಮಕ್ಕ ಅವರ ವಸ್ತು ಸಂಗ್ರಹಾಲಯ ಸ್ಥಾಪಿಸಲಾಗುವುದು ಮತ್ತು ಮುಂದಿನ ವರ್ಷದಿಂದ ಸಾಲುಮರದ ತಿಮ್ಮಕ್ಕ ಹೆಸರಿನಲ್ಲಿ ಪರಿಸರ ಪ್ರಶಸ್ತಿ ಕೂಡ ನೀಡಲು ತೀರ್ಮಾನಿಸಲಾಗದೆ ಎಂದು ಹೇಳಿದರು.

ಇದನ್ನು ಓದಿ :ಸುವರ್ಣಸೌಧದಲ್ಲಿ ನಾಟಿ ಕೋಳಿ ಬಗ್ಗೆ ಸ್ವಾರಸ್ಯಕರ ಚರ್ಚೆ..!

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಮಾತನಾಡಿ, ಸಾಲುಮರದ ತಿಮ್ಮಕ್ಕ ನಮ್ಮ ಜೊತೆ ಇಲ್ಲದೇ ಇರಬಹುದು. ಆದರೆ ಅವರು ಬೆಳೆಸಿದ ಮರಗಳು ನಮ್ಮ ನಡುವೆ ಸಾಕ್ಷಿ ಗುಡ್ಡೆಗಳಾಗಿವೆ. ಸರ್ಕಾರ ಅವರ ಹೆಸರಿನಲ್ಲಿ ಪ್ರಶಸ್ತಿ ಸ್ಥಾಪಿಸುವುದು ಸ್ವಾಗತಾರ್ಹ. ಬೇಲೂರಿನಲ್ಲಿ ವಸ್ತು ಸಂಗ್ರಹಾಲಯ ಸ್ಥಾಪಿಸಬೇಕು ಎಂದು ಒತ್ತಾಯಿಸಿದರು.

ಸಾಹಿತಿ ಎಸ್.ಎಲ್.ಭೈರಪ್ಪ ಕಡ್ಡಿ ಮುರಿದಂತೆ ಮಾತನಾಡುವ ನಿಷ್ಠುರವಾದಿಯಾಗಿದ್ದರು. ಅವರು ಬರೆದ ಸಾಹಿತ್ಯ ಇಂದು ಸಜ್ಜನಿಕೆ ಮತ್ತು ಸೃಜನಶೀಲತೆಗೆ ಹೆಸರುವಾಸಿಯಾಗಿವೆ. ಸಮಾಜದ ಆತ್ಮವಿಮರ್ಶೆಗೆ ಪ್ರೇರೇಪಣೆಯಾಗಿವೆ ಎಂದು ವಿವರಿಸಿದರು.

ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಎಚ್.ವೈ.ಮೇಟಿ ಅವರ ನಿಷ್ಠೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಆರ್.ವಿ.ದೇವರಾಜ್ ಬೆಂಗಳೂರಿನಲ್ಲಿ ಕೆಲವು ಕ್ಷೇತ್ರಗಳ ಮೇಲೆ ಬಲವಾದ ಹಿಡಿತ ಹೊಂದಿದ್ದರು. ೨೦೦೪ರಲ್ಲಿ ಎಸ್.ಎಂ.ಕೃಷ್ಣ ಅವರಿಗೆ ತಾವು ಪ್ರತಿನಿಧಿಸಿದ್ದ ಚಾಮರಾಜಪೇಟೆ ಕ್ಷೇತ್ರವನ್ನು ಬಿಟ್ಟುಕೊಟ್ಟಿದ್ದರು. ಪಕ್ಷದ ನಿಷ್ಠಾವಂತ ಕಾರ್ಯಕರ್ತ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಮಾಗಡಿಯ ಎಚ್.ಸಿ.ಬಾಲಕೃಷ್ಣ , ಕಾಂಗ್ರೆಸ್‌ನ ಜಿ.ಟಿ.ಪಾಟೀಲ್, ಸಿ.ಎಸ್.ಪಾಟೀಲ್, ಪಿ.ಎಂ.ನರೇಂದ್ರ ಸ್ವಾಮಿ, ಎನ್.ಟಿ.ಶ್ರೀನಿವಾಸ್, ಬಿಜೆಪಿಯ ಸಿದ್ದು ಸವದಿ, ಜಾತ್ಯತೀತ ಜನತಾದಳದ ಎಂ.ಟಿ.ಕೃಷ್ಣಪ್ಪ, ಬೇಲೂರಿನ ಸುರೇಶ್ ಮತ್ತಿತರರು ಅಗಲಿದ ಗಣ್ಯರ ಗುಣಗಾನ ಮಾಡಿದರು.

ಆಂದೋಲನ ಡೆಸ್ಕ್

Recent Posts

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

6 hours ago

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

8 hours ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

9 hours ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

9 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

12 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

13 hours ago