ರಾಜ್ಯ

ಮೈಸೂರಲ್ಲಿ ಎಸ್.ಎಲ್.ಬೈರಪ್ಪ ಸ್ಮಾರಕ ನಿರ್ಮಾಣ : ಸಿಎಂ ಘೋಷಣೆ

ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.

ಸೋಮವಾರ ಆರಂಭವಾದ ವಿಧಾನಸಭೆ ಕಲಾಪದಲ್ಲಿ ಅಗಲಿದ ಗಣ್ಯರಿಗೆ ಸಂತಾಪ ಸೂಚನಾ ನಿರ್ಣಯ ಬೆಂಬಲಿಸಿ ಮಾತನಾಡಿದ ಅವರು, ಭೈರಪ್ಪ ಅವರ ಸ್ಮಾರಕ ನಿರ್ಮಿಸಲು ನಿರ್ಧರಿಸಲಾಗಿದೆ. ಅಲ್ಲದೆ, ಸಾಲುಮರದ ತಿಮ್ಮಕ್ಕ ಅವರ ಹೆಸರಿನಲ್ಲಿ ಮುಂದಿನ ವರ್ಷದಿಂದ ಪರಿಸರ ಪ್ರಶಸ್ತಿ ನೀಡಲಾಗುವುದು ಎಂದರು.

ಸಾಲುಮರದ ತಿಮ್ಮಕ್ಕ ಅವರ ಗುಣಗಾನ ಮಾಡಿದ ಮುಖ್ಯಮಂತ್ರಿಯವರು, ಬೇಲೂರಿನಲ್ಲಿ ತಿಮಕ್ಕ ಅವರ ವಸ್ತು ಸಂಗ್ರಹಾಲಯ ಸ್ಥಾಪಿಸಲಾಗುವುದು ಮತ್ತು ಮುಂದಿನ ವರ್ಷದಿಂದ ಸಾಲುಮರದ ತಿಮ್ಮಕ್ಕ ಹೆಸರಿನಲ್ಲಿ ಪರಿಸರ ಪ್ರಶಸ್ತಿ ಕೂಡ ನೀಡಲು ತೀರ್ಮಾನಿಸಲಾಗದೆ ಎಂದು ಹೇಳಿದರು.

ಇದನ್ನು ಓದಿ :ಸುವರ್ಣಸೌಧದಲ್ಲಿ ನಾಟಿ ಕೋಳಿ ಬಗ್ಗೆ ಸ್ವಾರಸ್ಯಕರ ಚರ್ಚೆ..!

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಮಾತನಾಡಿ, ಸಾಲುಮರದ ತಿಮ್ಮಕ್ಕ ನಮ್ಮ ಜೊತೆ ಇಲ್ಲದೇ ಇರಬಹುದು. ಆದರೆ ಅವರು ಬೆಳೆಸಿದ ಮರಗಳು ನಮ್ಮ ನಡುವೆ ಸಾಕ್ಷಿ ಗುಡ್ಡೆಗಳಾಗಿವೆ. ಸರ್ಕಾರ ಅವರ ಹೆಸರಿನಲ್ಲಿ ಪ್ರಶಸ್ತಿ ಸ್ಥಾಪಿಸುವುದು ಸ್ವಾಗತಾರ್ಹ. ಬೇಲೂರಿನಲ್ಲಿ ವಸ್ತು ಸಂಗ್ರಹಾಲಯ ಸ್ಥಾಪಿಸಬೇಕು ಎಂದು ಒತ್ತಾಯಿಸಿದರು.

ಸಾಹಿತಿ ಎಸ್.ಎಲ್.ಭೈರಪ್ಪ ಕಡ್ಡಿ ಮುರಿದಂತೆ ಮಾತನಾಡುವ ನಿಷ್ಠುರವಾದಿಯಾಗಿದ್ದರು. ಅವರು ಬರೆದ ಸಾಹಿತ್ಯ ಇಂದು ಸಜ್ಜನಿಕೆ ಮತ್ತು ಸೃಜನಶೀಲತೆಗೆ ಹೆಸರುವಾಸಿಯಾಗಿವೆ. ಸಮಾಜದ ಆತ್ಮವಿಮರ್ಶೆಗೆ ಪ್ರೇರೇಪಣೆಯಾಗಿವೆ ಎಂದು ವಿವರಿಸಿದರು.

ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಎಚ್.ವೈ.ಮೇಟಿ ಅವರ ನಿಷ್ಠೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಆರ್.ವಿ.ದೇವರಾಜ್ ಬೆಂಗಳೂರಿನಲ್ಲಿ ಕೆಲವು ಕ್ಷೇತ್ರಗಳ ಮೇಲೆ ಬಲವಾದ ಹಿಡಿತ ಹೊಂದಿದ್ದರು. ೨೦೦೪ರಲ್ಲಿ ಎಸ್.ಎಂ.ಕೃಷ್ಣ ಅವರಿಗೆ ತಾವು ಪ್ರತಿನಿಧಿಸಿದ್ದ ಚಾಮರಾಜಪೇಟೆ ಕ್ಷೇತ್ರವನ್ನು ಬಿಟ್ಟುಕೊಟ್ಟಿದ್ದರು. ಪಕ್ಷದ ನಿಷ್ಠಾವಂತ ಕಾರ್ಯಕರ್ತ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಮಾಗಡಿಯ ಎಚ್.ಸಿ.ಬಾಲಕೃಷ್ಣ , ಕಾಂಗ್ರೆಸ್‌ನ ಜಿ.ಟಿ.ಪಾಟೀಲ್, ಸಿ.ಎಸ್.ಪಾಟೀಲ್, ಪಿ.ಎಂ.ನರೇಂದ್ರ ಸ್ವಾಮಿ, ಎನ್.ಟಿ.ಶ್ರೀನಿವಾಸ್, ಬಿಜೆಪಿಯ ಸಿದ್ದು ಸವದಿ, ಜಾತ್ಯತೀತ ಜನತಾದಳದ ಎಂ.ಟಿ.ಕೃಷ್ಣಪ್ಪ, ಬೇಲೂರಿನ ಸುರೇಶ್ ಮತ್ತಿತರರು ಅಗಲಿದ ಗಣ್ಯರ ಗುಣಗಾನ ಮಾಡಿದರು.

ಆಂದೋಲನ ಡೆಸ್ಕ್

Recent Posts

ಮನೆಯ ಚಾವಣಿ ಕುಸಿದು ನಾಲ್ವರು ಸಾವು ; ತಲಾ 5 ಲಕ್ಷ ಪರಿಹಾರ ಘೋಷಣೆ

ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…

3 hours ago

ಡಿ.ಕೆ.ಶಿವಕುಮಾರ್‌ ಜನ್ಮದಿನಾಚರಣೆ : ರಾರಾಜಿಸಿದ ಮುಂದಿನ ಮುಖ್ಯಮಂತ್ರಿ ಡಿಕೆಶಿ ಬ್ಯಾನರ್‌ಗಳು

ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…

4 hours ago

ದರ್ಶನ್‌ಗೆ ಇನ್ನೂ ಒಂದು ವರ್ಷ ಜಾಮೀನು ಇಲ್ಲ : ಅರ್ಜಿ ವಜಾಗೊಳಿಸಿದ ಸುಪೀಂ

ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್‌ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…

4 hours ago

ಜೂನ್‌ 21ರಂದು ನೀಟ್-ಯುಜಿ 2026ರ ಮರು ಪರೀಕ್ಷೆ

ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…

6 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; ಪ್ರತಿಷ್ಠಿತ ಕಾನ್‌ ಚಿತ್ರೋತ್ಸವದಲ್ಲಿ ಭಾರತ ಚಿತ್ರೋದ್ಯಮ

ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್‌ನ ಕಾನ್‌ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…

10 hours ago

ಗಗನಮುಖಿಯಾಗಿದ್ದ ತೆಂಗಿನ ಕಾಯಿ ದರ ಕುಸಿತ

ಎಚ್‌.ಎಸ್.ದಿನೇಶ್‌ ಕುಮಾರ್‌ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…

10 hours ago