ಬೆಂಗಳೂರು : ನಮ್ಮ ಮೆಟ್ರೋ ಸಂಚಾರವನ್ನು ಬಿಡದಿವರೆಗೆ ವಿಸ್ತರಿಸಲು ಚಿಂತನೆ ನಡೆಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.
ಬಿಡದಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ ಟೊಯೊಟಾ ಕಿರ್ಲೋಸ್ಕರ್ ಸಂಸ್ಥೆಯ ತಾಂತ್ರಿಕ ತರಬೇತಿ ಕಟ್ಟಡವನ್ನು ಶುಕ್ರವಾರ ಉದ್ಘಾಟಿಸಿ ಮಾತನಾಡಿದ ಅವರು, ಟೊಯೊಟಾ ಕಿರ್ಲೋಸ್ಕರ್ ಸಂಸ್ಥೆ ಆಟೋಮೊಬೈಲ್ ಕ್ಷೇತ್ರದಲ್ಲಿ ಉತ್ತಮ ಹೆಸರುಗಳಿಸಿದ್ದು, ಉತ್ಪಾದನಾ ವಲಯದಲ್ಲಿ ಸಾಕಷ್ಟು ಬದಲಾವಣೆ ತಂದಿದೆ.
ಕರ್ನಾಟಕ ರಾಜ್ಯದೊಂದಿಗೆ ವಿವಿಧ ಹೂಡಿಕೆ ಮಾಡುವ ಮೂಲಕ ಟೊಯೊಟಾ ಕಿರ್ಲೋಸ್ಕರ್ ಸಂಸ್ಥೆ ತಂತ್ರಜ್ಞಾನ ಹಾಗೂ ಹೊಸ ಉದ್ಯಮ ಸೃಷ್ಟಿಸುವಲ್ಲಿ ಮುಂಚೂಣಿಯಲ್ಲಿದೆ. ಈ ಸಂಸ್ಥೆಯಿಂದ ಬಿಡದಿಯಲ್ಲಿ ಸ್ಥಾಪಿತವಾದ ತಾಂತ್ರಿಕ ತರಬೇತಿ ವಿಭಾಗ ವಿದ್ಯಾರ್ಥಿಗಳ ಕೌಶಲ್ಯ ಹೆಚ್ಚಿಸಿ, ಅವರ ಭವಿಷ್ಯಕ್ಕೆ ಉತ್ತಮ ಅಡಿಪಾಯ ಹಾಕಲಿದೆ. ಬಿಡದಿಯ ಅಭಿವೃದ್ಧಿಗಾಗಿ ಸರ್ಕಾರ ಹಲವು ಯೋಜನೆಗಳನ್ನು ಹಾಕಿಕೊಳ್ಳಲಾಗಿದೆ ಎಂದು ಡಿಕೆ ಶಿವಕುಮಾರ್ ಹೇಳಿದರು.
ಪಂಚ.. ತಂತ್ರ ! ಚುನಾವಣೆಯಲ್ಲಿ ಗೆದ್ದವರಿಗೆ ಸಿಎಂ ಚಿಂತೆ, ಸೋತವರಿಗೆ ಇವಿಎಂನದೇ ಚಿಂತೆ ! -ಮ.ಗು.ಬಸವಣ್ಣ, ಜೆಎಸ್ಎಸ್ ಬಡಾವಣೆ, ಮೈಸೂರು
ಮೈಸೂರಿನ ಕುವೆಂಪುನಗರದ ‘ಎಂ’ ಬ್ಲಾಕ್ನ ನೃಪತುಂಗ ರಸ್ತೆಯಲ್ಲಿರುವ ಗಣಪತಿ ದೇವಸ್ಥಾನದ ಪಕ್ಕದಲ್ಲಿ ಶ್ರೀ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದಿಂದ ಹೊಸ…
ತಮಿಳುನಾಡು ಚುನಾವಣೆಯಲ್ಲಿ ವಿಜಯ್ ನೇತೃತ್ವದ ಟಿವಿಕೆ ಪಕ್ಷ ೨೩೪ ಕ್ಷೇತ್ರಗಳ ಪೈಕಿ ೧೦೮ ಸ್ಥಾನಗಳಲ್ಲಿ ಜಯಗಳಿಸುವ ಮೂಲಕ ಅತಿ ದೊಡ್ಡ…
ದೇಶಾದ್ಯಂತ ತೀವ್ರ ಕುತೂಹಲ ಕೆರಳಿಸಿದ್ದ ಪಶ್ಚಿಮ ಬಂಗಾಳ ರಾಜ್ಯ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ ಒಟ್ಟು ೨೯೪ ಸ್ಥಾನಗಳ ಪೈಕಿ…
ಲಕ್ಷಾಂತರ ಜನರಿಗೆ ಮೈಂಡ್ ಸೆಟ್ ಕೋಚ್ ಆಗಿ ಮಾರ್ಗದರ್ಶ ಗುಜರಾತಿನ ಅಹ್ಮದ್ನಗರದ ೩೮ ವರ್ಷ ಪ್ರಾಯದ ಜೈಕಿಶನ್ ಶರ್ಮಾ ಒಬ್ಬ…
ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ಹಲವು ಅಡೆತಡೆಗಳ ನಡುವೆಯೂ ೩ ವರ್ಷಗಳ ಬಳಿಕ ಕೊಡಗು- ಹಾಸನ ಜಿಲ್ಲೆಗಳ ಗಡಿಭಾಗದ ಯಸಳೂರು ಸಮೀಪ…