ಬೆಂಗಳೂರು: ರಾಜ್ಯಪಾಲರು ಹಾಗೂ ಸರ್ಕಾರದ ನಡುವಿನ ಸಂಘರ್ಷ ಮುಂದುವರಿದಿದ್ದು, ಮುಡಾ ಹಗರಣ ಜಟಾಪಟಿ ನಡುವೆ ಇದೀಗ ಬಿಗ್ ವಾರ್ ಶುರುವಾಗಿದೆ.
ವಿಧಾನಮಂಡಲ ಉಭಯ ಸದನ ಅನುಮೋದಿಸಿದ್ದ 6 ವಿಧೇಯಕಗಳಿಗೆ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಸಹಿ ಹಾಕದೇ ಸರ್ಕಾರಕ್ಕೆ ಮರಳಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ ಬಳಿಕ ರಾಜಭವನ ಮತ್ತು ಸರ್ಕಾರದ ನಡುವೆ ಸಂಘರ್ಷ ತೀವ್ರ ಸ್ವರೂಪ ಪಡೆದುಕೊಂಡಿದೆ.
ಈ ಬೆನ್ನಲ್ಲೇ ರಾಜ್ಯಪಾಲರು 6 ಮಸೂದೆಗಳನ್ನು ವಾಪಸ್ ಕಳುಹಿಸಿದ್ದಾರೆಂದು ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದ್ದು, ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಈ ಬಗ್ಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ರಾಜ್ಯಪಾಲರ ವಿರುದ್ಧ ರಾಷ್ಟ್ರಪತಿಯವರಿಗೆ ದೂರು ನೀಡುವ ಎಲ್ಲಾ ಸಾಧ್ಯತೆಗಳಿವೆ ಎಂದು ಹೇಳಿದ್ದಾರೆ.
ರಾಜ್ಯಪಾಲರು ವಾಪಸ್ ಕಳುಹಿಸಿರುವ ಮಸೂದೆಗಳನ್ನು ವಿಧಾನಸಭೆ ಹಾಗೂ ವಿಧಾನಪರಿಷತ್ನಲ್ಲಿ ಎರಡರಲ್ಲೂ ಅಂಗೀಕರಿಸಲಾಗಿದೆ. ರಾಜ್ಯಪಾಲರು ಈ ಮಸೂದೆಗಳ ಬಗ್ಗೆ ವಿವರಣೆ ಕೇಳಿದ್ದರೆ ನಾವು ನೀಡುತ್ತಿದ್ದೆವು. ಆದರೆ ಮಸೂದೆಗಳನ್ನು ವಾಪಸ್ ಕಳುಹಿಸಲಾಗಿದೆ. ಹೀಗಾಗಿ ಸಂಪುಟ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಕಿಡಿಕಾರಿದರು.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…