ರಾಜ್ಯ

ಕೈದಿಗಳಿಗೆ ಮುಂದುವರಿದ ರಾಜಾತಿಥ್ಯ..? : ವಿಕೃತಕಾಮಿ ಉಮೇಶ್ ರೆಡ್ಡಿ ಬಿಂದಾಸ್ ಲೈಫ್ ವಿಡಿಯೋ ವೈರಲ್

ಬೆಂಗಳೂರು : ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ವಿಕೃತಕಾಮಿ ಉಮೇಶ್‌ರೆಡ್ಡಿ ಹಾಗೂ ಚಿನ್ನ ಕಳ್ಳ ಸಾಗಾಣಿಕೆ ಪ್ರಕರಣದ ಆರೋಪಿ ತರುಣ್‌ರಾಜ್‌ಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.

ಈ ಕಾರಾಗೃಹದಲ್ಲಿರುವ ಲಷ್ಕರ್ ಉಗ್ರನ ಕೈಯಲ್ಲಿ ಅಂಡ್ರಾಯಿಡ್ ಮೊಬೈಲ್ ಇರುವುದು ವಿಡಿಯೋದಲ್ಲಿ ಕಂಡು ಬಂದಿದೆ. ಹಿಂದೆ ನಟ ದರ್ಶನ್‌ಗೆ ರಾಜಾತಿಥ್ಯಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಖಡಕ್ ಆದೇಶ ನೀಡಿತ್ತು. ಹೀಗಿದ್ದರೂ ಈ ಕಾರಾಗೃಹದಲ್ಲಿ ಕೈದಿ ಹಾಗೂ ವಿಚಾರಣಾ ಕೈದಿಗಳಿಗೆ ಮೊಬೈಲ್ ಜೊತೆಗೆ ಸೆಲ್‌ನಲ್ಲಿ ಟಿವಿ ವ್ಯವಸ್ಥೆ ಸೇರಿದಂತೆ ವಿಶೇಷ ಸೌಲಭ್ಯಗಳು ಲಭ್ಯವಾಗುತ್ತಿವೆ ಎಂಬ ಆರೋಪಗಳು ಕೇಳಿ ಬಂದಿದ್ದು, ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಇದನ್ನು ಓದಿ: ‘ಬಾಸ್‍’ ಆಗಿ ಬಂದ ತನುಷ್ ಶಿವಣ್ಣ; ಈ ಚಿತ್ರಕ್ಕೂ ದರ್ಶನ್‍ ಪ್ರಕರಣಕ್ಕೂ ಸಂಬಂಧವಿದೆಯಾ?

ನಟ ದರ್ಶನ್ ಅವರಿಗೆ ಕಾರಾಗೃಹದಲ್ಲಿ ಹಾಸಿಗೆ ಮತ್ತು ದಿಂಬು ಪಡೆಯಲು ಕಷ್ಟವಾಗುತ್ತಿರುವ ಸಂದರ್ಭದಲ್ಲಿ ವಿಕೃತಕಾಮಿ ಉಮೇಶ್ ರೆಡ್ಡಿ ಜೈಲಿನೊಳಗೆ ಮೊಬೈಲ್‌ನಲ್ಲಿ ಮಾತನಾಡುತ್ತಿರುವುದು, ಟಿವಿ ವೀಕ್ಷಿಸುತ್ತಿರುವ ವಿಡಿಯೋ ಕಂಡು ಬಂದಿದೆ. ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿರುವ ವಿಕೃತಕಾಮಿ ಉಮೇಶ್‌ರೆಡ್ಡಿ ಟಿವಿ ನೋಡುತ್ತಾ ಕೀಪ್ಯಾಡ್ ಮೊಬೈಲ್‌ಗಳನ್ನು ಇಟ್ಟುಕೊಂಡು ಮಾತನಾಡುತ್ತಿರುವ ವಿಡಿಯೋ ವೈರಲ್ ಆಗಿದೆ.

ಇನ್ನೂ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ಬಂಧಿತನಾಗಿರುವ ರನ್ಯಾರಾವ್ ಸ್ನೇಹಿತ ಆರೋಪಿ ತರುಣ್ ರಾಜ್ ಕಾರಾಗೃಹದೊಳಗೆ ಟಿವಿ ನೋಡುತ್ತಾ ಬಿಂದಾಸ್ ಲೈಫ್ ನಡೆಸುತ್ತಿರುವ ವಿಡಿಯೋ ಕೂಡ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

ಆಂದೋಲನ ಡೆಸ್ಕ್

Recent Posts

ಸಾಲ ಬಾಧೆ ; ದಂಪತಿ ಆತ್ಮಹತ್ಯೆ

ಮಂಡ್ಯ : ಸಾಲ ಬಾಧೆಯಿಂದ ದಂಪತಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬಿ.ಹಟ್ಟಣ ಗ್ರಾಮದಲ್ಲಿ…

1 hour ago

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

14 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

14 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

14 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

15 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

15 hours ago