ಬಾಗಲಕೋಟೆ: ಅನ್ನದಾತರಿಗೆ ರಾಜ್ಯ ಸರ್ಕಾರ ಮತ್ತೊಂದು ಗುಡ್ನ್ಯೂಸ್ ನೀಡಿದ್ದು, ಹೊಲಗದ್ದೆಗಳಲ್ಲಿರುವ ರೈತರ ಮನೆಗಳಿಗೆ ನಿರಂತರ ವಿದ್ಯುತ್ ಸರಬರಾಜು ಮಾಡಲು ಯೋಜಿಸಲಾಗಿದೆ ಎಂದು ಇಂಧನ ಸಚಿವ ಕೆ.ಜೆ.ಚಾರ್ಜ್ ಹೇಳಿದ್ದಾರೆ.
ಈ ಬಗ್ಗೆ ಬಾಗಲಕೋಟೆಯಲ್ಲಿ ಮಾತನಾಡಿದ ಅವರು, ಹಲವು ರೈತರು ಹೊಲಗದ್ದೆಗಳಲ್ಲಿ ಮನೆ ನಿರ್ಮಿಸಿಕೊಂಡು ವಾಸವಿದ್ದು, ಈ ಮನೆಗಳಿಗೆ ನಿರಂತರ ವಿದ್ಯುತ್ ನೀಡುವುದು ಅಗತ್ಯವಾಗಿದೆ. ಈ ಸಮಸ್ಯೆಯನ್ನು ಬಗೆಹರಿಸುವುದು ಮತ್ತು ಅಗತ್ಯ ಕ್ರಮ ಕೈಗೊಳ್ಳುವುದು ಎಂದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಸದ್ಯ ಫಾರ್ಮ್ಹೌಸ್ಗಳಿಗೆ ಏಳು ಗಂಟೆಗಳ ತ್ರಿಫೇಸ್ ವಿದ್ಯುತ್ ಸಿಗುತ್ತಿದೆ. ದಿನದ ಉಳಿದ ಅವಧಿಯಲ್ಲಿ ಸಂಜೆ 6 ರಿಂದ ಬೆಳಿಗ್ಗೆ 6ರವರೆಗೆ ಸಿಂಗಲ್ ಫೇಸ್ ಓಪನ್ ಡೆಲ್ಟಾ ಮಾದರಿಯಲ್ಲಿ ವಿದ್ಯುತ್ ನೀಡಲಾಗುತ್ತಿದೆ ಎಂದರು.
ಇನ್ನು ರಾಜ್ಯದಲ್ಲಿ ಕಳೆದ ವರ್ಷ ಬೇಸಿಗೆಯಲ್ಲಿ ಒಂದು ತಿಂಗಳು ಮಾತ್ರ ವಿದ್ಯುತ್ ಸಮಸ್ಯೆ ಎದುರಾಗಿತ್ತು. ಆದರೆ, ಜನರಿಗೆ ಹಾಗೂ ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲಾಯಿತು. ಪಂಜಾಬ್ ಹಾಗೂ ಉತ್ತರ ಪ್ರದೇಶಗಳ ಜೊತೆ ವಿದ್ಯುತ್ ವಿನಿಮಯ ಒಪ್ಪಂದ ಮಾಡಿಕೊಳ್ಳಲಾಗಿತ್ತು. ಮುಂಬರುವ ಬೇಸಿಗೆಯಲ್ಲೂ ಜನರಿಗೆ ವಿದ್ಯುತ್ ಪೂರೈಸಲು ಇಲಾಖೆ ಸನ್ನದ್ಧವಾಗಿದೆ ಎಂದರು.
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…
ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್ ಫಾರ್ಮ್ಗಳಲ್ಲಿ ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…
ದೇಶದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಕ್ಷಣಗಳಲ್ಲಿ, ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನ ‘ಬುರ್ಜ್ ಖಲೀಫಾ’ದಲ್ಲಿ ಭಾರತದ ತ್ರಿವರ್ಣ…
ದೆಹಲಿ ಕಣ್ಣೋಟ ಶಿವಾಜಿ ಗಣೇಶನ್ ಅವರ ವಾರದ ಅಂಕಣ ಸಂಸತ್ ಎಂದರೆ ಪ್ರಜಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಿಕೊಂಡು ದೇಶದ ಸಮಸ್ಯೆಗಳು ಮತ್ತು…