ರಾಜ್ಯ

ಗುತ್ತಿಗೆದಾರರೇ ನೀವೇನು ಭಿಕ್ಷುಕರಲ್ಲ ಎಂದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಗುತ್ತಿಗೆದಾರರೇ ನೀವೇನು ಭಿಕ್ಷುಕರಲ್ಲ. ದಯಾಮರಣಕ್ಕೆ ಯಾಕೆ ಕೇಳ್ತೀರಾ. ಒಂದು ವರ್ಷ ಕೆಲಸವನ್ನೇ ಮಾಡಬೇಡಿ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕರೆ ನೀಡಿದ್ದಾರೆ.

ಕಿಯೋನಿಕ್ಸ್‌ ವೆಂಡರ್ಸ್‌ಗಳಿಂದ ದಯಾ ಮರಣಕ್ಕೆ ಪತ್ರ ಬರೆದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರು, ರಾಜ್ಯ ಸರ್ಕಾರದ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದರು.

ನಾನು ಈ ಮೊದಲು 60% ಕಮಿಷನ್‌ ಆರೋಪ ಮಾಡಿದಾಗ ಸರ್ಕಾರ ಹಾಗೂ ಸಿಎಂ ದಾಖಲೆ ಕೊಡಿ ಎಂದು ಹೇಳಿದ್ದರು. ಹಂಗಾಮಿ ಕಂಟ್ರ್ಯಾಕ್ಟರ್‌ ಅಸೋಸಿಯೇಷನ್‌ ಅಧ್ಯಕ್ಷರು ಏನು ಹೇಳಿದ್ದಾರೆ. ಪರ್ಸೆಂಟೇಜ್‌ ಎಷ್ಟು ಇದೆ ಎಂದು ಅವರೇ ಹೇಳಿದ್ದಾರೆ. ಇದಕ್ಕಿಂತ ಸಿಎಂ ಸಿದ್ದರಾಮಯ್ಯ ಅವರಿಗೆ ದಾಖಲಾತಿ ಸಾಕ್ಷಿ ಬೇಕಾ ಎಂದು ಪ್ರಶ್ನೆ ಮಾಡಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಯಾರು ತಪ್ಪು ಮಾಡಿದ್ದಾರೋ ಅವರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳಿ. ಪ್ರಿಯಾಂಕ್‌ ಖರ್ಗೆ, ಶರತ್‌ ಬಚ್ಚೇಗೌಡಗೆ ಹೇಳ್ತಿನಿ. ತಪ್ಪು ಮಾಡಿದವರ ಮೇಲೆ ಆಕ್ಷನ್‌ ತಗೊಳ್ಳಿ. 18 ತಿಂಗಳಲ್ಲಿ ಪೇಮೆಂಟ್‌ ಕೊಡದೇ ಹೋದರೆ ಅವರ ಬದುಕು ಏನಾಗಬೇಕು? ತಪ್ಪು ಮಾಡಿದವನಿಗೆ ಏನ್‌ ಬೇಕೋ ಕ್ರಮ ಮಾಡಿ. ಒಂದು ವೇಳೆ ಜನಪ್ರತಿನಿಧಿಗಳೇ ಅಕ್ರಮ ಮಾಡಿದ್ದರೆ ಅಂತಹವರ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಸೂಚನೆ ನೀಡಿದರು.

ಇನ್ನು ಗುತ್ತಿಗೆದಾರರೇ ಒಂದು ವರ್ಷ ಕೆಲಸ ಮಾಡಬೇಡಿ. ಈ ಸರ್ಕಾರದಲ್ಲಿ ಸಾರ್ವಜನಿಕ ಹಣ ಲೂಟಿಯಾಗಿದೆ. ಗುತ್ತಿಗೆದಾರರು ಈ ರಾಜ್ಯ ಉಳಿಸಬೇಕು ಅಂತ ಇದ್ದರೆ, ಒಂದು ವರ್ಷ ಯಾವುದೇ ಕಾರಣಕ್ಕೂ ಕೆಲಸ ಮಾಡಬೇಡಿ. ರಾಜ್ಯದಲ್ಲಿ ಕೆಟ್ಟ ಆಡಳಿತ ನಡೆಯುತ್ತಿದೆ. ನಿಮ್ಮಲ್ಲಿ ಒಡಕು ಬಂದರೆ ನಿಮ್ಮನ್ನೇ ಉಪಯೋಗ ಮಾಡಿಕೊಳ್ಳುತ್ತಾರೆ ಎಂದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ರಷ್ಯಾ ಮೇಲೆ ಉಕ್ರೇನ್‌ ಭೀಕರ ಡ್ರೋನ್‌ ದಾಳಿ: 4 ಮಂದಿ ಸಾವು

ಮಾಸ್ಕೋ: ಉಕ್ರೇನ್‌ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್‌ ದಾಳಿ ನಡೆಸಿದೆ. ಈ ವೈಮಾನಿಕ…

8 hours ago

ಮೈಸೂರಿನಲ್ಲಿ ಜನರೊಂದಿಗೆ ಜನತಾದಳ ಕಾರ್ಯಕ್ರಮ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…

9 hours ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

10 hours ago

ಕಳೆದ ಮೂರು ದಿನಗಳಿಂದ ಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತದ ಮಂದಿ ಭಕ್ತರು ಭೇಟಿ

ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…

10 hours ago

ಕಾಡಿನಲ್ಲಿ ಅಕ್ರಮವಾಗಿ ಚರ್ಚ್‌ ನಿರ್ಮಾಣ: 40ಕ್ಕೂ ಹೆಚ್ಚು ಜನರ ಬಂಧನ

ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್‌ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…

11 hours ago

ಹಾರ್ಮುಜ್‌ ದಾಟಿ ಸುರಕ್ಷಿತವಾಗಿ ಭಾರತಕ್ಕೆ ಬಂತು 20,000 ಟನ್‌ ಎಲ್‌ಪಿಜಿ ಟ್ಯಾಂಕರ್‌

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್‍ಪಿಜಿಯನ್ನು ಹೊತ್ತ…

11 hours ago