ರಾಜ್ಯ

ಗುತ್ತಿಗೆದಾರರೇ ನೀವೇನು ಭಿಕ್ಷುಕರಲ್ಲ ಎಂದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಗುತ್ತಿಗೆದಾರರೇ ನೀವೇನು ಭಿಕ್ಷುಕರಲ್ಲ. ದಯಾಮರಣಕ್ಕೆ ಯಾಕೆ ಕೇಳ್ತೀರಾ. ಒಂದು ವರ್ಷ ಕೆಲಸವನ್ನೇ ಮಾಡಬೇಡಿ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕರೆ ನೀಡಿದ್ದಾರೆ.

ಕಿಯೋನಿಕ್ಸ್‌ ವೆಂಡರ್ಸ್‌ಗಳಿಂದ ದಯಾ ಮರಣಕ್ಕೆ ಪತ್ರ ಬರೆದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರು, ರಾಜ್ಯ ಸರ್ಕಾರದ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದರು.

ನಾನು ಈ ಮೊದಲು 60% ಕಮಿಷನ್‌ ಆರೋಪ ಮಾಡಿದಾಗ ಸರ್ಕಾರ ಹಾಗೂ ಸಿಎಂ ದಾಖಲೆ ಕೊಡಿ ಎಂದು ಹೇಳಿದ್ದರು. ಹಂಗಾಮಿ ಕಂಟ್ರ್ಯಾಕ್ಟರ್‌ ಅಸೋಸಿಯೇಷನ್‌ ಅಧ್ಯಕ್ಷರು ಏನು ಹೇಳಿದ್ದಾರೆ. ಪರ್ಸೆಂಟೇಜ್‌ ಎಷ್ಟು ಇದೆ ಎಂದು ಅವರೇ ಹೇಳಿದ್ದಾರೆ. ಇದಕ್ಕಿಂತ ಸಿಎಂ ಸಿದ್ದರಾಮಯ್ಯ ಅವರಿಗೆ ದಾಖಲಾತಿ ಸಾಕ್ಷಿ ಬೇಕಾ ಎಂದು ಪ್ರಶ್ನೆ ಮಾಡಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಯಾರು ತಪ್ಪು ಮಾಡಿದ್ದಾರೋ ಅವರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳಿ. ಪ್ರಿಯಾಂಕ್‌ ಖರ್ಗೆ, ಶರತ್‌ ಬಚ್ಚೇಗೌಡಗೆ ಹೇಳ್ತಿನಿ. ತಪ್ಪು ಮಾಡಿದವರ ಮೇಲೆ ಆಕ್ಷನ್‌ ತಗೊಳ್ಳಿ. 18 ತಿಂಗಳಲ್ಲಿ ಪೇಮೆಂಟ್‌ ಕೊಡದೇ ಹೋದರೆ ಅವರ ಬದುಕು ಏನಾಗಬೇಕು? ತಪ್ಪು ಮಾಡಿದವನಿಗೆ ಏನ್‌ ಬೇಕೋ ಕ್ರಮ ಮಾಡಿ. ಒಂದು ವೇಳೆ ಜನಪ್ರತಿನಿಧಿಗಳೇ ಅಕ್ರಮ ಮಾಡಿದ್ದರೆ ಅಂತಹವರ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಸೂಚನೆ ನೀಡಿದರು.

ಇನ್ನು ಗುತ್ತಿಗೆದಾರರೇ ಒಂದು ವರ್ಷ ಕೆಲಸ ಮಾಡಬೇಡಿ. ಈ ಸರ್ಕಾರದಲ್ಲಿ ಸಾರ್ವಜನಿಕ ಹಣ ಲೂಟಿಯಾಗಿದೆ. ಗುತ್ತಿಗೆದಾರರು ಈ ರಾಜ್ಯ ಉಳಿಸಬೇಕು ಅಂತ ಇದ್ದರೆ, ಒಂದು ವರ್ಷ ಯಾವುದೇ ಕಾರಣಕ್ಕೂ ಕೆಲಸ ಮಾಡಬೇಡಿ. ರಾಜ್ಯದಲ್ಲಿ ಕೆಟ್ಟ ಆಡಳಿತ ನಡೆಯುತ್ತಿದೆ. ನಿಮ್ಮಲ್ಲಿ ಒಡಕು ಬಂದರೆ ನಿಮ್ಮನ್ನೇ ಉಪಯೋಗ ಮಾಡಿಕೊಳ್ಳುತ್ತಾರೆ ಎಂದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಖ್ಯಾತ ಗಾಯಕಿ ಎಸ್.ಜಾನಕಿ ನಿಧನ

ಮೈಸೂರು: ದಕ್ಷಿಣ ಭಾರತದ ಗಾನ ಕೋಗಿಲೆ ಎಂದೇ ಹೆಸರಾದ ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು.…

10 hours ago

ಗುಂಡ್ಲುಪೇಟೆ: ಮನೆಯೊಳಗೆ ನುಗ್ಗಿದ್ದ ನಾಗರಹಾವಿನ ರಕ್ಷಣೆ

ಗುಂಡ್ಲುಪೇಟೆ: ತಾಲ್ಲೂಕಿನ ಕಗ್ಗಳದಹುಂಡಿ ಗ್ರಾಮದ ಮನೆಯೊಳಗೆ ನುಗ್ಗಿದ್ದ ನಾಗರಹಾವನ್ನು ಉರಗಪ್ರೇಮಿ ಸ್ವಾಮಿ ಅವರು ಸುರಕ್ಷಿತವಾಗಿ ರಕ್ಷಿಸಿ ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ.…

13 hours ago

ಬೈಕ್ ಸವಾರನ ಮೇಲೆ ಕಾಡುಕೋಣ ದಾಳಿ

ಮಡಿಕೇರಿ: ತಾಲ್ಲೂಕಿನ ಕೆದಕಲ್ ಸಮೀಪದ ಕೋಟೆಕಾಡು ಪ್ರದೇಶದಲ್ಲಿ ಬೈಕ್ ಸವಾರನ ಮೇಲೆ ಕಾಡುಕೋಣ ದಾಳಿ ನಡೆಸಿದ ಘಟನೆ ನಡೆದಿದೆ. ಕಕ್ಕಬ್ಬೆ…

14 hours ago

ಹನೂರು: ಹುಚ್ಚು ನಾಯಿ ದಾಳಿಗೆ ಹಲವರು ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಮಹದೇಶ್ವರಬೆಟ್ಟ ಮುಖ್ಯರಸ್ತೆಯ ಸಮೀಪ ಶನಿವಾರ ಬೆಳಿಗ್ಗೆ ಹುಚ್ಚು ನಾಯಿಯೊಂದು…

14 hours ago

ರೀಲ್ಸ್‌ಗಾಗಿ ಡ್ರಿಫ್ಟಿಂಗ್:‌ ಜಾನುವಾರುಗಳ ಮೇವನ್ನು ಮಣ್ಣುಪಾಲು ಮಾಡಿದ ಪ್ರವಾಸಿಗರು

ಹಾಸನ: ಜಿಲ್ಲೆಯ ಸಕಲೇಶಪುರ ಗವಿಬೆಟ್ಟದಲ್ಲಿ ಪ್ರವಾಸಿಗರು ರೀಲ್ಸ್‌ಗಾಗಿ ಥಾರ್‌ ಕಾರನ್ನು ಡ್ರಿಫ್ಟಿಂಗ್‌ ಮಾಡಿದ್ದಾರೆ. ಇದರಿಂದ ಜಾನುವಾರುಗಳ ಮೇವು ಹಾಗೂ ರಸ್ತೆಗೆ…

15 hours ago

ವಿಯೆಟ್ನಾಂ ದ್ವೀಪದಲ್ಲಿ 32 ಭಾರತೀಯ ಪ್ರವಾಸಿಗರಿದ್ದ ಬೋಟ್‌ ಮುಳುಗಡೆ: 15 ಮಂದಿ ಸಾವು

ಹನೋಯ್:‌ ವಿಯೆಟ್ನಾಂ ಫು ಕ್ವಾಕ್‌ ದ್ವೀಪದ ಬಳಿ 32 ಮಂದಿ ಭಾರತೀಯ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಸ್ಪೀಡ್‌ ಬೋಟ್‌ ಮುಳುಗಡೆಯಾಗಿದ್ದು, ಕನಿಷ್ಠ…

15 hours ago