ರಾಜ್ಯ

ಸ್ವಾಮಿ ವಿವೇಕಾನಂದರ ವಿರುದ್ಧ ವಿವಾದಾತ್ಮಕ ಟ್ವಿಟ್‌ : ಚೇತನ್‌ ಅಹಿಂಸಾ ವಿರುದ್ಧ ಕಿಡಿ

ಬೆಂಗಳೂರು: ಒಂದಲ್ಲ ಒಂದು ವಿಚಾರದಲ್ಲಿ ವಿವಾದಿತ ಟ್ವೀಟ್‌ ಮಾಡುವ ಮೂಲಕ ಸುದ್ದಿಯಲ್ಲಿರುವ ನಟ ಚೇತನ್‌ ಕುಮಾರ್‌ ಅಹಿಂಸಾ ಈಗ ಸ್ವಾಮಿ ವಿವೇಕಾನಂದರ ವಿಚಾರವಾಗಿ ಟೀಕೆ ಮಾಡುವ ಮೂಲಕ ಟಾರ್ಗೆಟ್‌ ಆಗಿದ್ದಾರೆ.

ಪ್ರತಿ ವಿಚಾರಗಳಲ್ಲೂ ತಮ್ಮೊಂದೊಂದು ವಿವಾದಿತ ಅಭಿಪ್ರಾಯವನ್ನು ಸೋಶಿಯಲ್‌ ಮೀಡಿಯಾದಲ್ಲಿ ಚೇತನ್‌ ಕುಮಾರ್‌ ಹಂಚಿಕೊಳ್ಳುತ್ತಲೇ ಇರುತ್ತಾರೆ.

ಇಂದು ಸ್ವಾಮಿ ವಿವೇಕಾನಂದರ ಜಯಂತಿಯನ್ನು ಆಚರಿಸಲಾಗುತ್ತಿದೆ. ಈ ನಡುವೆ ಚೇತನ್‌ ಕುಮಾರ್‌ ಅಹಿಂಸಾ, ಸ್ವಾಮಿ ವಿವೇಕಾನಂದ ಸಮಾನತಾವಾದಿಯಲ್ಲ, ಅವರು ನಮ್ಮವರಲ್ಲ ಎಂದು ಟ್ವೀಟ್‌ ಮಾಡುವ ಮೂಲಕ ವಿವಾದದ ಕಿಡಿ ಎಬ್ಬಿಸಿದ್ದಾರೆ.

ವಿವೇಕಾನಂದರು ಮಹಿಳಾ ವಿಮೋಚನೆಯನ್ನು ವಿರೋಧಿಸಿದ ವ್ಯಕ್ತಿ ಅದರೊಂದಿಗೆ ಜಾತಿ ವ್ಯವಸ್ಥೆಯ ಪರವಾಗಿ ಮಾತನಾಡಿದ್ದರು ಎಂದು ಚೇತನ್‌ ಬರೆದುಕೊಂಡಿದ್ದಾರೆ.

‘ಇಂದು ವಿವೇಕಾನಂದರ ಜನ್ಮದಿನ. ವಿವೇಕಾನಂದರು ಮಹಿಳಾ ವಿಮೋಚನೆಯನ್ನು ವಿರೋಧಿಸಿದವರು ಮತ್ತು ಜಾತಿ ವ್ಯವಸ್ಥೆಯನ್ನು ಸರ್ಮಥನೆ ಮಾಡಿಕೊಂಡವರು. ಅವರೇ ಬರೆದ ಹಾಗೆ, ‘ಜಾತಿ ಒಳ್ಳೆಯದು, ಅದೊಂದೇ ಜೀವನವನ್ನು ಪರಿಹರಿಸುವ ನೈಸರ್ಗಿಕ ಮಾರ್ಗವಾಗಿದೆ’ ಎನ್ನುತ್ತಾರೆ.

ವಿವೇಕಾನಂದರನ್ನು ಹಿಂದೂ ಸಮಾಜದಿಂದ ವೈಭವೀಕರಿಸಲಾಗಿದೆ. ಏಕೆಂದರೆ, ಅವರು ಶ್ರೇಣೀಕೃತ ಸಾಮಾಜಿಕ ವ್ಯವಸ್ಥೆಯನ್ನು ಬಲಪಡಿಸುವ ಪರವಾಗಿ ಇದ್ದವರು. ವಿವೇಕಾನಂದರು ಸಮಾನತಾವಾದಿಯಲ್ಲ.. ಅವರು ನಮ್ಮವರಲ್ಲ’ ಎಂದು ತಮ್ಮ ಮೊದಲ ಟ್ವೀಟ್‌ನಲ್ಲಿ ಬರೆದಿದ್ದಾರೆ.

ಅದರೊಂದಿಗೆ ಹಿಂದುತ್ವದ ಪರವಾಗಿರುವ ವೀರ್‌ ಸಾವರ್ಕರ್‌ ಹಾಗೂ ಆ

ರೆಸ್ಸೆಸ್‌ಗಿಂತ ಹಿಂದೂ ಉದಾರವಾದಿಗಳಾದ ಸ್ವಾಮಿ ವಿವೇಕಾನಂದ, ಮಹಾತ್ಮ ಗಾಂಧೀಜಿ ಅವರು ತುಂಬಾ ಡೇಂಜರಸ್‌ ಎಂದು ಬರೆದಿದ್ದಾರೆ. ಹಿಂದು ಉದಾರವಾದಿಗಳನ್ನು ಅಪ್ರಾಮಾಣಿಕರು/ಕುತಂತ್ರವಾದಿ ಸ್ನೇಹಿತರು ಎಂದು ಚೇತನ್‌ ಬರೆದಿದ್ದಾರೆ.

 

andolanait

Recent Posts

ಗುಂಡ್ಲುಪೇಟೆ| ಕಾಡಿನಿಂದ‌ ದಾರಿ ತಪ್ಪಿ ಮನೆಗೆ ನುಗ್ಗಿದ ಜಿಂಕೆ ರಕ್ಷಣೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಕಾಡಿನಿಂದ ದಾರಿತಪ್ಪಿ ಬಂದು ಮನೆಗೆ ನುಗ್ಗಿದ್ದ ಜಿಂಕೆಯನ್ನು ರಕ್ಷಣೆ ಮಡುವಲ್ಲಿ ಅರಣ್ಯ…

59 mins ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪವಿತ್ರಾ ಗೌಡಗೆ ಬಿಗ್‌ ಶಾಕ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮೊದಲ ಆರೋಪಿಯಾಗಿರುವ ಪವಿತ್ರಾ ಗೌಡ ಅವರಿಗೆ ನ್ಯಾಯಾಲಯದಿಂದ ಮತ್ತೊಮ್ಮೆ ಹಿನ್ನಡೆಯಾಗಿದೆ. ತಮ್ಮ ಮಗಳ…

2 hours ago

ಚಿಕ್ಕಮಗಳೂರು| ತೋಟದಲ್ಲಿ ಕಾರ್ಮಿಕನನ್ನು ಕೊಂದು ಹಾಕಿದ ಕಾಡಾನೆ

ಚಿಕ್ಕಮಗಳೂರು: ತೋಟದಲ್ಲಿ ನಡೆದುಕೊಂಡು ಹೋಗುತ್ತಿದ್ದ ಕೂಲಿ ಕಾರ್ಮಿಕನ ಮೇಲೆ ಕಾಡಾನೆ ದಾಳಿ ನಡೆಸಿ ಕೊಂದು ಹಾಕಿರುವ ಘಟನೆ ಚಿಕ್ಕಮಗಳೂರು ತಾಲ್ಲೂಕಿನ…

2 hours ago

ಮಂಡ್ಯ ಜಿಲ್ಲಾ ನ್ಯಾಯಾಲಯ ಸ್ಫೋಟಿಸುವುದಾಗಿ ಬಾಂಬ್‌ ಬೆದರಿಕೆ ಕರೆ

ಮಂಡ್ಯ: ಮಂಡ್ಯ ಜಿಲ್ಲಾ ನ್ಯಾಯಾಲಯ ಸ್ಫೋಟಿಸುವುದಾಗಿ ಬಾಂಬ್‌ ಬೆದರಿಕೆ ಕರೆ ಬಂದಿದ್ದು, ಅಧಿಕಾರಿಗಳು ತೀವ್ರ ಪರಿಶೀಲನೆ ನಡೆಸುತ್ತಿದ್ದಾರೆ. ಮಂಡ್ಯ ಕೋರ್ಟ್‌ಗೆ…

3 hours ago

ಎಲ್ಲಾ ಧರ್ಮದವರೂ ದೇಶದಲ್ಲಿರುವಾಗ ವಂದೇ ಮಾತರಂ ರಾಷ್ಟ್ರಗೀತೆ ಆಗಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್‌

ಬೆಂಗಳೂರು: ಎಲ್ಲಾ ಧರ್ಮದವರೂ ದೇಶದಲ್ಲಿರುವಾಗ ವಂದೇ ಮಾತರಂ ರಾಷ್ಟ್ರಗೀತೆ ಆಗಲು ಸಾಧ್ಯವಿಲ್ಲ ಎಂದು ಎಂಎಲ್‌ಸಿ ಬಿ.ಕೆ.ಹರಿಪ್ರಸಾದ್‌ ಕೇಂದ್ರ ಸರ್ಕಾರದ ವಿರುದ್ಧ…

3 hours ago

ಮಡಿಕೇರಿ ನ್ಯಾಯಾಲಯಕ್ಕೆ ಬಾಂಬ್‌ ಬೆದರಿಕೆ

ಮಡಿಕೇರಿ: ಮಡಿಕೇರಿ ನ್ಯಾಯಾಲಯಕ್ಕೆ ಬಾಂಬ್‌ ಬೆದರಿಕೆ ಕರೆ ಬಂದಿದ್ದು, ಸಿಬ್ಬಂದಿ ಕೆಲಕಾಲ ಆತಂಕ್ಕೀಡಾಗಿದ್ದರು. ಇತ್ತೀಚಿನ ದಿನಗಳಲ್ಲಿ ದಿನದಿಂದ ದಿನಕ್ಕೆ ಬಾಂಬ್‌…

4 hours ago