ಬೆಂಗಳೂರು: ಒಂದಲ್ಲ ಒಂದು ವಿಚಾರದಲ್ಲಿ ವಿವಾದಿತ ಟ್ವೀಟ್ ಮಾಡುವ ಮೂಲಕ ಸುದ್ದಿಯಲ್ಲಿರುವ ನಟ ಚೇತನ್ ಕುಮಾರ್ ಅಹಿಂಸಾ ಈಗ ಸ್ವಾಮಿ ವಿವೇಕಾನಂದರ ವಿಚಾರವಾಗಿ ಟೀಕೆ ಮಾಡುವ ಮೂಲಕ ಟಾರ್ಗೆಟ್ ಆಗಿದ್ದಾರೆ.
ಪ್ರತಿ ವಿಚಾರಗಳಲ್ಲೂ ತಮ್ಮೊಂದೊಂದು ವಿವಾದಿತ ಅಭಿಪ್ರಾಯವನ್ನು ಸೋಶಿಯಲ್ ಮೀಡಿಯಾದಲ್ಲಿ ಚೇತನ್ ಕುಮಾರ್ ಹಂಚಿಕೊಳ್ಳುತ್ತಲೇ ಇರುತ್ತಾರೆ.
ಇಂದು ಸ್ವಾಮಿ ವಿವೇಕಾನಂದರ ಜಯಂತಿಯನ್ನು ಆಚರಿಸಲಾಗುತ್ತಿದೆ. ಈ ನಡುವೆ ಚೇತನ್ ಕುಮಾರ್ ಅಹಿಂಸಾ, ಸ್ವಾಮಿ ವಿವೇಕಾನಂದ ಸಮಾನತಾವಾದಿಯಲ್ಲ, ಅವರು ನಮ್ಮವರಲ್ಲ ಎಂದು ಟ್ವೀಟ್ ಮಾಡುವ ಮೂಲಕ ವಿವಾದದ ಕಿಡಿ ಎಬ್ಬಿಸಿದ್ದಾರೆ.
ವಿವೇಕಾನಂದರು ಮಹಿಳಾ ವಿಮೋಚನೆಯನ್ನು ವಿರೋಧಿಸಿದ ವ್ಯಕ್ತಿ ಅದರೊಂದಿಗೆ ಜಾತಿ ವ್ಯವಸ್ಥೆಯ ಪರವಾಗಿ ಮಾತನಾಡಿದ್ದರು ಎಂದು ಚೇತನ್ ಬರೆದುಕೊಂಡಿದ್ದಾರೆ.
‘ಇಂದು ವಿವೇಕಾನಂದರ ಜನ್ಮದಿನ. ವಿವೇಕಾನಂದರು ಮಹಿಳಾ ವಿಮೋಚನೆಯನ್ನು ವಿರೋಧಿಸಿದವರು ಮತ್ತು ಜಾತಿ ವ್ಯವಸ್ಥೆಯನ್ನು ಸರ್ಮಥನೆ ಮಾಡಿಕೊಂಡವರು. ಅವರೇ ಬರೆದ ಹಾಗೆ, ‘ಜಾತಿ ಒಳ್ಳೆಯದು, ಅದೊಂದೇ ಜೀವನವನ್ನು ಪರಿಹರಿಸುವ ನೈಸರ್ಗಿಕ ಮಾರ್ಗವಾಗಿದೆ’ ಎನ್ನುತ್ತಾರೆ.
ವಿವೇಕಾನಂದರನ್ನು ಹಿಂದೂ ಸಮಾಜದಿಂದ ವೈಭವೀಕರಿಸಲಾಗಿದೆ. ಏಕೆಂದರೆ, ಅವರು ಶ್ರೇಣೀಕೃತ ಸಾಮಾಜಿಕ ವ್ಯವಸ್ಥೆಯನ್ನು ಬಲಪಡಿಸುವ ಪರವಾಗಿ ಇದ್ದವರು. ವಿವೇಕಾನಂದರು ಸಮಾನತಾವಾದಿಯಲ್ಲ.. ಅವರು ನಮ್ಮವರಲ್ಲ’ ಎಂದು ತಮ್ಮ ಮೊದಲ ಟ್ವೀಟ್ನಲ್ಲಿ ಬರೆದಿದ್ದಾರೆ.
ಅದರೊಂದಿಗೆ ಹಿಂದುತ್ವದ ಪರವಾಗಿರುವ ವೀರ್ ಸಾವರ್ಕರ್ ಹಾಗೂ ಆ
ರೆಸ್ಸೆಸ್ಗಿಂತ ಹಿಂದೂ ಉದಾರವಾದಿಗಳಾದ ಸ್ವಾಮಿ ವಿವೇಕಾನಂದ, ಮಹಾತ್ಮ ಗಾಂಧೀಜಿ ಅವರು ತುಂಬಾ ಡೇಂಜರಸ್ ಎಂದು ಬರೆದಿದ್ದಾರೆ. ಹಿಂದು ಉದಾರವಾದಿಗಳನ್ನು ಅಪ್ರಾಮಾಣಿಕರು/ಕುತಂತ್ರವಾದಿ ಸ್ನೇಹಿತರು ಎಂದು ಚೇತನ್ ಬರೆದಿದ್ದಾರೆ.
ಎಸ್.ಎಸ್.ಭಟ್ ನಂಜನಗೂಡು: ಅಧಿಕಾರಿಗಳ ನೋಟಿಸ್ಗೂ ಕ್ಯಾರೆ ಎನ್ನದ ಶ್ರೀಕಂಠೇಶ್ವರ ದೇವಾಲಯದ ಸಿಬ್ಬಂದಿ ನಂಜನಗೂಡು: ಇಲ್ಲಿನ ಪ್ರಸಿದ್ಧ ಶ್ರೀಕಂಠೇಶ್ವರ ದೇವಾಲಯದ ಕಪಿಲಾ…
ಬ್ಯೂಟಿ ಪಾರ್ಲರ್ಗಳನ್ನು ತೆರೆದು ಅದರಿಂದ ಬದುಕು ನಡೆಸಲು ತರಬೇತಿ ೨೦೧೪ರಲ್ಲಿ ದೆಹಲಿಯ ಅಂಶು ರಜಪೂತ್ ೧೫ ವರ್ಷದವಳಾಗಿದ್ದಾಗ ಎಂದಿನಂತೆ ತನ್ನ…
ಎಸ್.ಸಿ. ದಿನೇಶ್ ಕುಮಾರ್, ಹಿರಿಯ ಪತ್ರಕರ್ತರು ಕಾಕ್ರೋಚ್ ಜನತಾ ಪಾರ್ಟಿ ನಮ್ಮ ದೇಶದ ಯುವಜನರ ಹತಾಶೆ, ಸಿಟ್ಟು, ಆಕ್ರೋಶಕ್ಕೆ ಹಿಡಿದ…
ಚಿರಂಜೀವಿ ಸಿ. ಹುಲ್ಲಹಳ್ಳಿ ಬೆಳೆಗಾರ ಕಂಗಾಲು; ನಷ್ಟಕ್ಕೆ ಪರಿಹಾರ ಕಲ್ಪಿಸಲು ರೈತರ ಒತ್ತಾಯ ಮೈಸೂರು: ಮಳೆ ಕೊರತೆ ಮತ್ತು ಹವಾಮಾನ ವೈಪರೀತ್ಯದಿಂದಾಗಿ…
ಮಂಡ್ಯ : ಚಾಲಕನ ನಿಯಂತ್ರಣ ತಪ್ಪಿದ ಗೂಡ್ಸ್ ಆಟೋ (ಟಾಟಾ ಏಸ್) ರಸ್ತೆ ಬದಿಗೆ ಉರುಳಿಬಿದ್ದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟು,…