ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಗೆ ಯಾವುದೇ ಅನಗತ್ಯ ವಿವಾದಗಳಿಂದ ಶಕ್ತಿ ಕುಂದಿಲ್ಲ. ಅವರನ್ನು ರಾಜ್ಯದ ಜನತೆ ಟಗರೆಂದು ಕರೆಯುತ್ತಾರೆ ಎಂದು ಹಾಸನದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ ತಿಳಿಸಿದ್ದಾರೆ.
ನಗರದಲ್ಲಿ ಇಂದು(ನ.19) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಜನತೆ ಸಿಎಂ ಸಿದ್ದರಾಮಯ್ಯ ಅವರನ್ನು ಟಗರೆಂದು ಕರೆಯುತ್ತಾರೆ. ಅವರಿಗೆ ಯಾವುದೇ ಶಕ್ತಿ ಕುಂದಿಲ್ಲ, ಅವರಲ್ಲಿ ಇಂದಿಗೂ ಪೂರ್ಣ ಪ್ರಮಾಣದ ಶಕ್ತಿಯಿದೆ. ಒಂದು ವೇಳೆ ಸಿದ್ದರಾಮಯ್ಯ ಅವರ ಶಕ್ತಿ ಕುಂದಿದಾಗ ತುಂಬೋಣ ಎಂದರೆ ಅವರಿಗೆ ಶಕ್ತಿಯೇ ಖಾಲಿ ಆಗಿಲ್ಲವಲ್ಲ ಎಂದು ಹೇಳಿದ್ದಾರೆ.
ವಕ್ಫ್ ವಿಚಾರದಲ್ಲಿ ಬಿಜೆಪಿ ನಾಯಕರೇ ಇಲ್ಲ ಸಲ್ಲದ ಸುಳ್ಳುಗಳನ್ನು ಹೇಳಿದ್ದು, ಸರ್ಕಾರಕ್ಕೆ 316 ಸಂಖ್ಯೆಯಷ್ಟು ನೋಟಿಸ್ಗಳನ್ನು ನೀಡಿದ್ದಾರೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಗಮನ ಹರಿಸಿ ಜಿಲ್ಲಾ ಮಟ್ಟದಲ್ಲಿ ಸರಿಪಡಿಸುವಂತೆ ಸೂಚಿಸಲಾಗಿದೆ ಎಂದಿದ್ದಾರೆ.
ಇನ್ನು ಸಿಎಂ ಹಾಗೂ ಸಚಿವರ ಸಭೆಗಳ ಎಲ್ಲ ಸಭೆಗಳ ವಿಚಾರಗಳನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ. ಹೀಗಾಗಿ ಡಿಸೆಂಬರ್ 9 ರಿಂದ ಅಧಿವೇಶನಗಳನ್ನು ನಡೆಸಲಾಗುತ್ತದೆ. ಈ ಅಧಿವೇಶನದಲ್ಲಿ ಪ್ರತಿಯೊಬ್ಬ ಶಾಸಕರು ಭಾಗಿಯಾಗಬೇಕು. ಅಲ್ಲಿ ನಡೆಯುವ ಯಾವುದೇ ಚರ್ಚೆಗಳಿಗೂ ಸಮರ್ಪಕವಾಗಿ ಮಂತ್ರಿಗಳು ಉತ್ತರ ನೀಡಬೇಕೆಂದು ಸೂಚಿಸಲಾಗಿದೆ ತಿಳಿಸಿದ್ದಾರೆ.
ಚಾಮರಾಜನಗರ: ತಾಲ್ಲೂಕಿನ ವೀರನಪುರ ಸಮೀಪವಿರುವ ಕರಿಕಲ್ಲು ಕ್ವಾರಿಯೊಂದರಲ್ಲಿ ಟಿಪ್ಪರ್ ಮಗುಚಿ ಬಿದ್ದ ಪರಿಣಾಮ ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ.…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಂಜಾರ ಸಮುದಾಯದ ಜನತೆಗೆ ಒಳ ಮೀಸಲಾತಿಯಲ್ಲಿ ಆಗಿರುವ ಅನ್ಯಾಯದ ಬಗ್ಗೆ…
ಹುಬ್ಬಳ್ಳಿ: ಹನ್ನೊಂದು ವರ್ಷಗಳ ಬಳಿಕ ಚಾಂಪಿಯನ್ ಪಟ್ಟಕ್ಕೇರುವ ಕರ್ನಾಟಕದ ಕನಸು ನನಸಾಗಲಿಲ್ಲ. ಇದೇ ಮೊದಲ ಬಾರಿಗೆ ಫೈನಲ್ಗೆ ಬಂದು, ಜಮ್ಮು-ಕಾಶ್ಮೀರ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ತಾಲೂಕು ಕೇಂದ್ರದಲ್ಲಿ ವಿಭಾಗಿಯ ಮಟ್ಟದ ಸೇವಾಲಾಲ್ ಜಯಂತಿ ಕಾರ್ಯಕ್ರಮವನ್ನು…
ಬೆಂಗಳೂರು: ಹಣೆ ಬರಹದಲ್ಲಿ ಬರೆದಿದ್ದರೆ ನನ್ನ ಅಣ್ಣ ಸಿಎಂ ಆಗುತ್ತಾರೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಹೇಳಿಕೆ ನೀಡಿದ್ದಾರೆ. ಈ…
ಹೇಮಂತ್ಕುಮಾರ್ ಮಂಡ್ಯ: ನಗರದ ಹಲವಾರು ಬಡಾವಣೆಗಳಲ್ಲಿನ ರಸ್ತೆಗಳು ಸಾರ್ವಜನಿಕ ಮೂತ್ರಾಲಯವಾಗಿ ಮೂಗುಮುಚ್ಚಿಕೊಂಡು ಸಂಚರಿಸಬೇಕಾದ ಪರಿಸ್ಥಿತಿಯನ್ನು ಕಾಣುತ್ತಿದ್ದೇವೆ. ಎಲ್ಲೆಂದರಲ್ಲಿ ಕಸ ಎರಚಾಡುತ್ತ…