ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಗೆ ಯಾವುದೇ ಅನಗತ್ಯ ವಿವಾದಗಳಿಂದ ಶಕ್ತಿ ಕುಂದಿಲ್ಲ. ಅವರನ್ನು ರಾಜ್ಯದ ಜನತೆ ಟಗರೆಂದು ಕರೆಯುತ್ತಾರೆ ಎಂದು ಹಾಸನದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ ತಿಳಿಸಿದ್ದಾರೆ.
ನಗರದಲ್ಲಿ ಇಂದು(ನ.19) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಜನತೆ ಸಿಎಂ ಸಿದ್ದರಾಮಯ್ಯ ಅವರನ್ನು ಟಗರೆಂದು ಕರೆಯುತ್ತಾರೆ. ಅವರಿಗೆ ಯಾವುದೇ ಶಕ್ತಿ ಕುಂದಿಲ್ಲ, ಅವರಲ್ಲಿ ಇಂದಿಗೂ ಪೂರ್ಣ ಪ್ರಮಾಣದ ಶಕ್ತಿಯಿದೆ. ಒಂದು ವೇಳೆ ಸಿದ್ದರಾಮಯ್ಯ ಅವರ ಶಕ್ತಿ ಕುಂದಿದಾಗ ತುಂಬೋಣ ಎಂದರೆ ಅವರಿಗೆ ಶಕ್ತಿಯೇ ಖಾಲಿ ಆಗಿಲ್ಲವಲ್ಲ ಎಂದು ಹೇಳಿದ್ದಾರೆ.
ವಕ್ಫ್ ವಿಚಾರದಲ್ಲಿ ಬಿಜೆಪಿ ನಾಯಕರೇ ಇಲ್ಲ ಸಲ್ಲದ ಸುಳ್ಳುಗಳನ್ನು ಹೇಳಿದ್ದು, ಸರ್ಕಾರಕ್ಕೆ 316 ಸಂಖ್ಯೆಯಷ್ಟು ನೋಟಿಸ್ಗಳನ್ನು ನೀಡಿದ್ದಾರೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಗಮನ ಹರಿಸಿ ಜಿಲ್ಲಾ ಮಟ್ಟದಲ್ಲಿ ಸರಿಪಡಿಸುವಂತೆ ಸೂಚಿಸಲಾಗಿದೆ ಎಂದಿದ್ದಾರೆ.
ಇನ್ನು ಸಿಎಂ ಹಾಗೂ ಸಚಿವರ ಸಭೆಗಳ ಎಲ್ಲ ಸಭೆಗಳ ವಿಚಾರಗಳನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ. ಹೀಗಾಗಿ ಡಿಸೆಂಬರ್ 9 ರಿಂದ ಅಧಿವೇಶನಗಳನ್ನು ನಡೆಸಲಾಗುತ್ತದೆ. ಈ ಅಧಿವೇಶನದಲ್ಲಿ ಪ್ರತಿಯೊಬ್ಬ ಶಾಸಕರು ಭಾಗಿಯಾಗಬೇಕು. ಅಲ್ಲಿ ನಡೆಯುವ ಯಾವುದೇ ಚರ್ಚೆಗಳಿಗೂ ಸಮರ್ಪಕವಾಗಿ ಮಂತ್ರಿಗಳು ಉತ್ತರ ನೀಡಬೇಕೆಂದು ಸೂಚಿಸಲಾಗಿದೆ ತಿಳಿಸಿದ್ದಾರೆ.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…