ಬೆಂಗಳೂರು: ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ್ದ ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ ವಕೀಲ ಕೆ.ದಿಲೀಪ್ ಕುಮಾರ್ ಎಂಬುವವರು ದಾಖಲಿಸಿದ್ದ ದೂರಿನ ವಿಚಾರಣೆ ನಡೆಸಿದ ಹೈಕೋರ್ಟ್ ಅರ್ಜಿಯನ್ನು ರದ್ದುಪಡಿಸಿದೆ. ಈ ಹಿನ್ನೆಲೆಯಲ್ಲಿ ಸಚಿವ ಜಾರಕಿಹೊಳಿಗೆ ಬಿಗ್ ರಿಲೀಫ್ ಸಿಕ್ಕಿದೆ.
ಪ್ರಕರಣದ ಹಿನ್ನೆಲೆ:
ಕಳೆದ 2022ರ ನವೆಂಬರ್ನಲ್ಲಿ ಬೆಳಗಾವಿ ಜಿಲ್ಲೆಯ ನಿಪ್ಪಾಣಿಯಲ್ಲಿ ಏರ್ಪಡಿಸಿದ್ದ ಮಾನವ ಬಂಧುತ್ವ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, ಹಿಂದೂ ಎಂಬ ಪದ ಎಲ್ಲಿಂದ ಬಂತು? ಈ ಪದ ನಮ್ಮದಲ್ಲ ಪರ್ಷಿಯನ್ ಭಾಷೆಯಿಂದ ಬಂದಿದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು.
ಮುಂದುವರಿದು ಮಾತನಾಡಿದ್ದ ಅವರು, ಹಿಂದೂ ಎಂಬುದು ಭಾರತೀಯ ಪದವೇ ಅಲ್ಲ. ಅದು ನಮ್ಮದು ಹೇಗಾಯಿತು? ಅದರ ಬಗ್ಗೆ ಚರ್ಚೆಯಾಗಬೇಕಿದೆ. ಅದಕ್ಕೂ ಮೀರಿ ಹಿಂದೂ ಪದದ ಅರ್ಥ ಬಹಳ ಅಶ್ಲೀಲವಾಗಿದೆ. ಅದರ ಅರ್ಥ ತಿಳಿದರೆ ನಾಚಿಕೆ ಆಗುತ್ತೆ. ಎಲ್ಲಿಂದಲೋ ಬಂದಿರುವ ಧರ್ಮವನ್ನು ನಮ್ಮದು ಎನ್ನುವುದು ಹೇಗೆ? ಎಂದು ಕಾರ್ಯಕ್ರಮದಲ್ಲಿ ವಿವಾದಾತ್ಮಕ ಭಾಷಣ ಮಾಡಿದ್ದರು.
ಈ ಹೇಳಿಕೆ ಬೆನ್ನಲ್ಲೇ ರಾಜ್ಯಾದಾದ್ಯಂತ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಸ್ವತಃ ಡಿ.ಕೆ.ಶಿವಕುಮಾರ್ ಅವರೇ ಸತೀಶ್ ಜಾರಕಿಹೊಳಿ ಹೇಳಿಕೆಯನ್ನು ಖಂಡಿಸಿದ್ದರು. ಅಲ್ಲದೇ ತಮ್ಮ ಹೇಳಿಕೆಯನ್ನು ವಾಪಸ್ ಪಡೆಯುವಂತೆ ಆಗ್ರಹಿಸಿದ್ದರು.
ಹಿಂದೂ ಧರ್ಮದ ಬಗ್ಗೆ ನಿಂದನೆ ಬಗ್ಗೆ ಹೇಳಿಕೆಗಳನ್ನು ನೀಡುವ ಮೂಲಕ ರಾಜ್ಯದಲ್ಲಿ ಅಶಾಂತಿ ಮೂಡಿಸಲಾಗುತ್ತಿದೆ. ಸಮುದಾಯಗಳ ನಡುವೆ ದ್ವೇಷಕ್ಕೆ ಈ ಭಾಷಣ ಕಾರಣವಾಗಿದೆ. ಎಂದು ವಕೀಲ ಕೆ. ದಿಲೀಪ್ ಕುಮಾರ್ ಎಂಬುವವರು ಖಾಸಗಿ ದೂರು ದಾಖಲಿಸಿದ್ದರು.
ಈ ದೂರಿಗೆ ಸಂಬಂಧಿಸಿದಂತೆ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯದ ನ್ಯಾಯಮೂರ್ತಿ ಕೆ.ಎನ್.ಶಿವಕುಮಾರ್ ಅವರಿದ್ದ ಪೀಠವು ಸತೀಶ್ ಜಾರಕಿಹೊಳಿ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿತ್ತು.
ಬಳಿಕ ಸತೀಶ್ ಜಾರಕಿಹೊಳಿ ಈ ದೂರನ್ನು ರದ್ದುಗೊಳಿಸುವಂತೆ ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದರು. ಇದೀಗ ಜಾರಕಿಹೊಳಿಯವರ ಅರ್ಜಿ ಪುರಸ್ಕರಿಸಿ ಕೇಸ್ ರದ್ದುಮಾಡಿದೆ. ಈ ಮೂಲಕ ವಿವಾದಾತ್ಮಕ ಹೇಳಿಕೆ ನೀಡಿದ್ದ ಸಚಿವ ಸತೀಶ್ ಜಾರಕಿಹೊಳಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.
ಕಳೆದ ಬಾರಿಯ ಭೀಕರ ಕಾಲ್ತುಳಿತ ಬಳಿಕ ರಂಗೇರಿದ ಕ್ರಿಕೆಟ್ ಬೆಂಗಳೂರು : ಜಾಗತಿಕ ಮಟ್ಟದ ಅತ್ಯಂತ ಶ್ರೀಮಂತ, ಶ್ರೇಷ್ಠ ಕ್ರಿಕೆಟ್…
ರಾಜ್ಯ ಸರ್ಕಾರ ಕೆಲ ತಿಂಗಳುಗಳ ಹಿಂದೆ ಒಂದನೇ ತರಗತಿ ಪ್ರವೇಶಕ್ಕೆ ಆರು ವರ್ಷಗಳ ವಯೋಮಿತಿ ನಿಗದಿ ಮಾಡಿದ ಬಗ್ಗೆ ಕೈಗೊಂಡ…
ಹೆಚ್.ಡಿ.ಕೋಟೆ ತಾಲ್ಲೂಕಿನ ಕೆಪಿಎಸ್ ಮ್ಯಾಗ್ನೆಟ್ ಹೆಸರಿನಲ್ಲಿ ಹಂಪಾಪುರ ಮತ್ತು ಜಿನ್ನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಮುಚ್ಚಲು ಹೊರಟಿರುವ ಸರ್ಕಾರದ…
ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧ ೨೭ ನೇದಿನಕ್ಕೆ ಕಾಲಿಟ್ಟಿದೆ, ಸದ್ಯದ ಪರಿಸ್ಥಿತಿಯನ್ನು ಗಮನಿಸಿದರೆ ಅಮೆರಿಕ ತನ್ನ…
ಬಿಆರ್ಟಿ ಅರಣ್ಯವು ಕರ್ನಾಟಕದ ಪ್ರಮುಖ ಜೀವವೈವಿಧ್ಯ ಪ್ರದೇಶಗಳಲ್ಲೊಂದು ಬಿಳಿಗಿರಿ ರಂಗನ ಬೆಟ್ಟ (ಬಿಆರ್ಟಿ) ಅರಣ್ಯವು ಕರ್ನಾಟಕದ ಪ್ರಮುಖ ಜೀವವೈವಿಧ್ಯ ಪ್ರದೇಶಗಳಲ್ಲಿ…
ಮಹೇಶ ಎಲಕುಂಚವಾರ್ ಅವರ ಪ್ರಸಿದ್ಧ ಮರಾಠಿ ನಾಟಕವನ್ನು ರಂಗಕರ್ಮಿ ಪ್ರಸಾದ್ ಕುಂದೂರು ಕನ್ನಡಕ್ಕೆ ಅನುವಾದಿಸಿದ್ದಾರೆ ಮರಾಠಿಯ ಮಹೇಶ ಎಲಕುಂಚವಾರ ಅವರ…