ರಾಜ್ಯ

ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ: ಸತೀಶ್‌ ಜಾರಕಿಹೊಳಿಗೆ ಬಿಗ್‌ ರಿಲೀಫ್‌ ಕೊಟ್ಟ ಹೈಕೋರ್ಟ್‌

ಬೆಂಗಳೂರು: ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ್ದ ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ ವಕೀಲ ಕೆ.ದಿಲೀಪ್‌ ಕುಮಾರ್‌ ಎಂಬುವವರು ದಾಖಲಿಸಿದ್ದ ದೂರಿನ ವಿಚಾರಣೆ ನಡೆಸಿದ ಹೈಕೋರ್ಟ್‌ ಅರ್ಜಿಯನ್ನು ರದ್ದುಪಡಿಸಿದೆ. ಈ ಹಿನ್ನೆಲೆಯಲ್ಲಿ ಸಚಿವ ಜಾರಕಿಹೊಳಿಗೆ ಬಿಗ್‌ ರಿಲೀಫ್‌ ಸಿಕ್ಕಿದೆ.

ಪ್ರಕರಣದ ಹಿನ್ನೆಲೆ:
ಕಳೆದ 2022ರ ನವೆಂಬರ್‌ನಲ್ಲಿ ಬೆಳಗಾವಿ ಜಿಲ್ಲೆಯ ನಿಪ್ಪಾಣಿಯಲ್ಲಿ ಏರ್ಪಡಿಸಿದ್ದ ಮಾನವ ಬಂಧುತ್ವ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ಸತೀಶ್‌ ಜಾರಕಿಹೊಳಿ, ಹಿಂದೂ ಎಂಬ ಪದ ಎಲ್ಲಿಂದ ಬಂತು? ಈ ಪದ ನಮ್ಮದಲ್ಲ ಪರ್ಷಿಯನ್‌ ಭಾಷೆಯಿಂದ ಬಂದಿದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು.

ಮುಂದುವರಿದು ಮಾತನಾಡಿದ್ದ ಅವರು, ಹಿಂದೂ ಎಂಬುದು ಭಾರತೀಯ ಪದವೇ ಅಲ್ಲ. ಅದು ನಮ್ಮದು ಹೇಗಾಯಿತು? ಅದರ ಬಗ್ಗೆ ಚರ್ಚೆಯಾಗಬೇಕಿದೆ. ಅದಕ್ಕೂ ಮೀರಿ ಹಿಂದೂ ಪದದ ಅರ್ಥ ಬಹಳ ಅಶ್ಲೀಲವಾಗಿದೆ. ಅದರ ಅರ್ಥ ತಿಳಿದರೆ ನಾಚಿಕೆ ಆಗುತ್ತೆ. ಎಲ್ಲಿಂದಲೋ ಬಂದಿರುವ ಧರ್ಮವನ್ನು ನಮ್ಮದು ಎನ್ನುವುದು ಹೇಗೆ? ಎಂದು ಕಾರ್ಯಕ್ರಮದಲ್ಲಿ ವಿವಾದಾತ್ಮಕ ಭಾಷಣ ಮಾಡಿದ್ದರು.

ಈ ಹೇಳಿಕೆ ಬೆನ್ನಲ್ಲೇ ರಾಜ್ಯಾದಾದ್ಯಂತ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಸ್ವತಃ ಡಿ.ಕೆ.ಶಿವಕುಮಾರ್‌ ಅವರೇ ಸತೀಶ್‌ ಜಾರಕಿಹೊಳಿ ಹೇಳಿಕೆಯನ್ನು ಖಂಡಿಸಿದ್ದರು. ಅಲ್ಲದೇ ತಮ್ಮ ಹೇಳಿಕೆಯನ್ನು ವಾಪಸ್‌ ಪಡೆಯುವಂತೆ ಆಗ್ರಹಿಸಿದ್ದರು.

ಹಿಂದೂ ಧರ್ಮದ ಬಗ್ಗೆ ನಿಂದನೆ ಬಗ್ಗೆ ಹೇಳಿಕೆಗಳನ್ನು ನೀಡುವ ಮೂಲಕ ರಾಜ್ಯದಲ್ಲಿ ಅಶಾಂತಿ ಮೂಡಿಸಲಾಗುತ್ತಿದೆ. ಸಮುದಾಯಗಳ ನಡುವೆ ದ್ವೇಷಕ್ಕೆ ಈ ಭಾಷಣ ಕಾರಣವಾಗಿದೆ. ಎಂದು ವಕೀಲ ಕೆ. ದಿಲೀಪ್‌ ಕುಮಾರ್‌ ಎಂಬುವವರು ಖಾಸಗಿ ದೂರು ದಾಖಲಿಸಿದ್ದರು.

ಈ ದೂರಿಗೆ ಸಂಬಂಧಿಸಿದಂತೆ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯದ ನ್ಯಾಯಮೂರ್ತಿ ಕೆ.ಎನ್‌.ಶಿವಕುಮಾರ್‌ ಅವರಿದ್ದ ಪೀಠವು ಸತೀಶ್‌ ಜಾರಕಿಹೊಳಿ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್‌ ನೀಡಿತ್ತು.

ಬಳಿಕ ಸತೀಶ್‌ ಜಾರಕಿಹೊಳಿ ಈ ದೂರನ್ನು ರದ್ದುಗೊಳಿಸುವಂತೆ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದರು. ಇದೀಗ ಜಾರಕಿಹೊಳಿಯವರ ಅರ್ಜಿ ಪುರಸ್ಕರಿಸಿ ಕೇಸ್‌ ರದ್ದುಮಾಡಿದೆ. ಈ ಮೂಲಕ ವಿವಾದಾತ್ಮಕ ಹೇಳಿಕೆ ನೀಡಿದ್ದ ಸಚಿವ ಸತೀಶ್‌ ಜಾರಕಿಹೊಳಿಗೆ ಬಿಗ್‌ ರಿಲೀಫ್‌ ಸಿಕ್ಕಂತಾಗಿದೆ.

 

ಆಂದೋಲನ ಡೆಸ್ಕ್

Recent Posts

ಹಾಸನ: ಆಟೋ ಪಲ್ಟಿಯಾಗಿ ತಾಯಿ-ಮಗ ಸಾವು

ಹಾಸನ: ಮಗನನ್ನು ಶಾಲೆಗೆ ಸೇರಿಸಲಯ ಪತ್ರಕ್ಕಾಗಿ ಆಟೋದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಾಲಕನ ಅತಿಬೇಗ ಮತ್ತು ನಿರ್ಲಕ್ಷ್ಯದಿಂದ ಪಲ್ಟಿಯಾದ ಪರಿಣಾಮ ಅಮ್ಮ…

43 mins ago

ಚಾಮುಂಡಿಬೆಟ್ಟಕ್ಕೆ ಬಾಲಿವುಡ್ ನಟ ರಣವೀರ್ ಸಿಂಗ್ ಭೇಟಿ ವಿಚಾರ: ಅರ್ಚಕ ಸುನೀಲ್ ದೀಕ್ಷಿತ್ ಪ್ರತಿಕ್ರಿಯೆ

ಮೈಸೂರು: ನಾಡ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಬಾಲಿವುಡ್‌ ನಟ ರಣವೀರ್‌ ಸಿಂಗ್‌ ಭೇಟಿ ನೀಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಚಾಮುಂಡಿಬೆಟ್ಟದ…

54 mins ago

ರೈತರ ಆದಾಯ ಹೆಚ್ಚಿಸುವುದೇ ನಮ್ಮ ಸರ್ಕಾರದ ಗುರಿ: ಎನ್.ಚಲುವರಾಯಸ್ವಾಮಿ.

ಬೆಂಗಳೂರು: ಇಂದು ಕೃಷಿ ಕ್ಷೇತ್ರ ಅನೇಕ ಸವಾಲುಗಳನ್ನು ಎದುರಿಸುತ್ತಿದೆ. ಹವಾಮಾನ ವೈಪರೀತ್ಯ, ಉತ್ಪಾದನಾ ವೆಚ್ಚದ ಏರಿಕೆ, ಮಾರುಕಟ್ಟೆ ಅಸ್ಥಿರತೆ ಮತ್ತು…

2 hours ago

ಸಿಎಂ ಬದಲಾದರೆ ಪರಮೇಶ್ವರ್‌ ಸಿಎಂ ಆಗಲಿ: ಮಾಜಿ ಸಚಿವ ಕೆ.ಎನ್.ರಾಜಣ್ಣ

ಬೆಂಗಳೂರು: ಸಿಎಂ ಬದಲಾವಣೆ ಆದರೆ ಪರಮೇಶ್ವರ್‌ ಮುಖ್ಯಮಂತ್ರಿಯಾಗಲಿ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಇಂದು…

2 hours ago

ರಸಗೊಬ್ಬರ ಖರೀದಿಗೆ ಎಫ್ಐಡಿ ಕಡ್ಡಾಯ ವಿರೋಧಿಸಿ ಪ್ರತಿಭಟನೆ

ಮೈಸೂರು: ರಸಗೊಬ್ಬರ ಖರೀದಿಗೆ ಎಫ್‌ಐಡಿ ಕಡ್ಡಾಯ ಮಾಡಿರುವುದನ್ನು ವಿರೋಧಿಸಿ ರೈತ ಮುಖಂಡರು ಪ್ರತಿಭಟನೆ ನಡೆಸಿದರು. ಮೈಸೂರಿನ ಕಾಡಾ ಕಛೇರಿ ಆವರಣದಲ್ಲಿರುವ…

3 hours ago

ಕಾಂತಾರ ದೈವಕ್ಕೆ ಅಪಮಾನ: ಚಾಮುಂಡಿ ತಾಯಿ ಮುಂದೆ ಕಡೆಗೂ ಕ್ಷಮೆ ಕೇಳಿದ ರಣವೀರ್‌ ಸಿಂಗ್‌

ಮೈಸೂರು: ಕಾಂತಾರ ದೈವದ ಪಾತ್ರಕ್ಕೆ ಅಪಮಾನ ಮಾಡಿದ್ದ ಬಾಲಿವುಡ್‌ ನಟ ರಣವೀರ್‌ ಸಿಂಗ್‌ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ…

3 hours ago