ರಾಜ್ಯ

ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ: ಸತೀಶ್‌ ಜಾರಕಿಹೊಳಿಗೆ ಬಿಗ್‌ ರಿಲೀಫ್‌ ಕೊಟ್ಟ ಹೈಕೋರ್ಟ್‌

ಬೆಂಗಳೂರು: ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ್ದ ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ ವಕೀಲ ಕೆ.ದಿಲೀಪ್‌ ಕುಮಾರ್‌ ಎಂಬುವವರು ದಾಖಲಿಸಿದ್ದ ದೂರಿನ ವಿಚಾರಣೆ ನಡೆಸಿದ ಹೈಕೋರ್ಟ್‌ ಅರ್ಜಿಯನ್ನು ರದ್ದುಪಡಿಸಿದೆ. ಈ ಹಿನ್ನೆಲೆಯಲ್ಲಿ ಸಚಿವ ಜಾರಕಿಹೊಳಿಗೆ ಬಿಗ್‌ ರಿಲೀಫ್‌ ಸಿಕ್ಕಿದೆ.

ಪ್ರಕರಣದ ಹಿನ್ನೆಲೆ:
ಕಳೆದ 2022ರ ನವೆಂಬರ್‌ನಲ್ಲಿ ಬೆಳಗಾವಿ ಜಿಲ್ಲೆಯ ನಿಪ್ಪಾಣಿಯಲ್ಲಿ ಏರ್ಪಡಿಸಿದ್ದ ಮಾನವ ಬಂಧುತ್ವ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ಸತೀಶ್‌ ಜಾರಕಿಹೊಳಿ, ಹಿಂದೂ ಎಂಬ ಪದ ಎಲ್ಲಿಂದ ಬಂತು? ಈ ಪದ ನಮ್ಮದಲ್ಲ ಪರ್ಷಿಯನ್‌ ಭಾಷೆಯಿಂದ ಬಂದಿದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು.

ಮುಂದುವರಿದು ಮಾತನಾಡಿದ್ದ ಅವರು, ಹಿಂದೂ ಎಂಬುದು ಭಾರತೀಯ ಪದವೇ ಅಲ್ಲ. ಅದು ನಮ್ಮದು ಹೇಗಾಯಿತು? ಅದರ ಬಗ್ಗೆ ಚರ್ಚೆಯಾಗಬೇಕಿದೆ. ಅದಕ್ಕೂ ಮೀರಿ ಹಿಂದೂ ಪದದ ಅರ್ಥ ಬಹಳ ಅಶ್ಲೀಲವಾಗಿದೆ. ಅದರ ಅರ್ಥ ತಿಳಿದರೆ ನಾಚಿಕೆ ಆಗುತ್ತೆ. ಎಲ್ಲಿಂದಲೋ ಬಂದಿರುವ ಧರ್ಮವನ್ನು ನಮ್ಮದು ಎನ್ನುವುದು ಹೇಗೆ? ಎಂದು ಕಾರ್ಯಕ್ರಮದಲ್ಲಿ ವಿವಾದಾತ್ಮಕ ಭಾಷಣ ಮಾಡಿದ್ದರು.

ಈ ಹೇಳಿಕೆ ಬೆನ್ನಲ್ಲೇ ರಾಜ್ಯಾದಾದ್ಯಂತ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಸ್ವತಃ ಡಿ.ಕೆ.ಶಿವಕುಮಾರ್‌ ಅವರೇ ಸತೀಶ್‌ ಜಾರಕಿಹೊಳಿ ಹೇಳಿಕೆಯನ್ನು ಖಂಡಿಸಿದ್ದರು. ಅಲ್ಲದೇ ತಮ್ಮ ಹೇಳಿಕೆಯನ್ನು ವಾಪಸ್‌ ಪಡೆಯುವಂತೆ ಆಗ್ರಹಿಸಿದ್ದರು.

ಹಿಂದೂ ಧರ್ಮದ ಬಗ್ಗೆ ನಿಂದನೆ ಬಗ್ಗೆ ಹೇಳಿಕೆಗಳನ್ನು ನೀಡುವ ಮೂಲಕ ರಾಜ್ಯದಲ್ಲಿ ಅಶಾಂತಿ ಮೂಡಿಸಲಾಗುತ್ತಿದೆ. ಸಮುದಾಯಗಳ ನಡುವೆ ದ್ವೇಷಕ್ಕೆ ಈ ಭಾಷಣ ಕಾರಣವಾಗಿದೆ. ಎಂದು ವಕೀಲ ಕೆ. ದಿಲೀಪ್‌ ಕುಮಾರ್‌ ಎಂಬುವವರು ಖಾಸಗಿ ದೂರು ದಾಖಲಿಸಿದ್ದರು.

ಈ ದೂರಿಗೆ ಸಂಬಂಧಿಸಿದಂತೆ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯದ ನ್ಯಾಯಮೂರ್ತಿ ಕೆ.ಎನ್‌.ಶಿವಕುಮಾರ್‌ ಅವರಿದ್ದ ಪೀಠವು ಸತೀಶ್‌ ಜಾರಕಿಹೊಳಿ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್‌ ನೀಡಿತ್ತು.

ಬಳಿಕ ಸತೀಶ್‌ ಜಾರಕಿಹೊಳಿ ಈ ದೂರನ್ನು ರದ್ದುಗೊಳಿಸುವಂತೆ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದರು. ಇದೀಗ ಜಾರಕಿಹೊಳಿಯವರ ಅರ್ಜಿ ಪುರಸ್ಕರಿಸಿ ಕೇಸ್‌ ರದ್ದುಮಾಡಿದೆ. ಈ ಮೂಲಕ ವಿವಾದಾತ್ಮಕ ಹೇಳಿಕೆ ನೀಡಿದ್ದ ಸಚಿವ ಸತೀಶ್‌ ಜಾರಕಿಹೊಳಿಗೆ ಬಿಗ್‌ ರಿಲೀಫ್‌ ಸಿಕ್ಕಂತಾಗಿದೆ.

 

ಆಂದೋಲನ ಡೆಸ್ಕ್

Recent Posts

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

3 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026: ಗಜಪಯಣಕ್ಕೆ ವಿದ್ಯುಕ್ತ ಚಾಲನೆ

ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ದಸರಾ ಗಜಪಯಣಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದೆ. ಮೈಸೂರು ಜಿಲ್ಲಾ…

5 hours ago

ಓದುಗರ ಪತ್ರ: ಕಾವೇರಿ ನದಿ ನೀರಿನ ವಿವಾದಕ್ಕೆ ಮಾತುಕತೆಯೇ ಮದ್ದು

ತಮಿಳುನಾಡಿಗೆ ಮುಂದಿನ ಹದಿನೈದು ದಿನಗಳ ಕಾಲ ನಿತ್ಯ ಒಂಬತ್ತು ಸಾವಿರ ಕ್ಯುಸೆಕ್ಸ್ ಕಾವೇರಿ ನದಿ ನೀರು ಹರಿಸಬೇಕಾಗಿರುವುದು ಅಘಾತಕಾರಿ ಸಂಗತಿಯಾಗಿದೆ.…

6 hours ago

ಓದುಗರ ಪತ್ರ: ಈ ‘ಎರಡು’ ಸಮಸ್ಯೆಗಳಿಗೆ ಪರಿಹಾರ ಸಿಗಬೇಕು

ಮೈಸೂರು ನಗರವು ‘ಸ್ವಚ್ಛ ನಗರಿ’, ‘ಸಾಂಸ್ಕೃತಿಕ ನಗರಿ’ ಮತ್ತು ‘ಪಾರಂಪರಿಕನಗರಿ’ ಎಂದೇ ಖ್ಯಾತವಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಈ ಹೆಮ್ಮೆಯ…

6 hours ago

ಓದುಗರ ಪತ್ರ: ಸ್ಥಳ ಶುದ್ಧೀಕರಣಕ್ಕಿಂತ ಮನ ಶುದ್ಧೀಕರಣವಾಗಲಿ

ಎಐಸಿಸಿ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಹಿರಿಯ ಮುಖಂಡರಾದ, ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಖಂಡದ ಹಲ್ದ್ವಾನಿಯದಲ್ಲಿ ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಣ…

6 hours ago

ಮಳೆ ಕೊರತೆಯ ನಡುವೆಯೂ ಕೃಷಿಗೆ ಆತಂಕವಿಲ್ಲ

ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…

10 hours ago