ಬೆಂಗಳೂರು: ಕೃಷಿ ಹಾಗೂ ಕೃಷಿಕರ ಅಭ್ಯುದಯವೇ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಮೂಲ ಆಶಯವಾಗಿದ್ದು, ಅದಕ್ಕೆ ಪೂರಕವಾಗಿ ಪರಸ್ಪರ ಸಮನ್ವಯತೆಯಿಂದ ಕಾರ್ಯನಿರ್ವಹಿಸುವಂತೆ ಸಚಿವರಾದ ಎನ್.ಚಲುವರಾಯಸ್ವಾಮಿ ಸೂಚನೆ ನೀಡಿದ್ದಾರೆ.
ವಿಧಾನಸೌಧದ ಸಮಿತಿ ಕೊಠಡಿಯಲ್ಲಿಂದು ರಾಜ್ಯದ ವಿವಿಧ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಉಪ ಕುಲಪತಿಗಳು ಹಾಗೂ ಕೃಷಿ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು ಎಲ್ಲರೂ ಸ್ವಹಿತಾಸಕ್ತಿ ಬದಿಗೊತ್ತಿ ಸಾರ್ವಜನಿಕ ಪ್ರಾಮುಖ್ಯತೆಗೆ ಆದ್ಯತೆ ನೀಡಬೇಕೆಂದರು.
ರಾಜ್ಯದಲ್ಲಿ ವಿದ್ಯಾರ್ಥಿಗಳು, ರೈತರು ಹಾಗೂ ಕೃಷಿ ವಿಶ್ವವಿದ್ಯಾನಿಲಯಗಳ ಹಿತದೃಷ್ಟಿಯಿಂದ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಪುನರ್ ವಿಂಗಣೆ ಬಗ್ಗೆ ಚಿಂತನೆ ನಡೆಸಲಾಗಿದ್ದು, ಸಮಿತಿ ರಚಿಸಲಾಗಿದೆ. ವರದಿ ಆಧರಿಸಿ ಸಚಿವ ಸಂಪುಟದ ಸಭೆಯಲ್ಲಿ ಚರ್ಚಿಸಿ ಸರ್ಕಾರ ನಿರ್ಧಾರ ಕೈಗೊಳ್ಳಲಿದೆ ಎಂದರು.
ಸರ್ಕಾರಕ್ಕೆ ಎಲ್ಲಾ ಜಿಲ್ಲೆಗಳು ಹಾಗೂ ಎಲ್ಲಾ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳು ಒಂದೇ ಮಹತ್ವ ಹೊಂದಿವೆ. ಹಾಗಾಗಿ ಎಲ್ಲಾ ಜಿಲ್ಲೆಗಳು ಮತ್ತು ವಿಶ್ವವಿದ್ಯಾಲಯಗಳ ಹಿತಾಸಕ್ತಿಯನ್ನು ಗಮನಹರಿಸಿ ಸರ್ಕಾರ ನಿರ್ಧಾರ ಕೈಗೊಳ್ಳಲಿದೆ ಎಂದು ಸಚಿವರು ಹೇಳಿದರು.
ಕೃಷಿ ವಿಶ್ವವಿದ್ಯಾಲಯಗಳು ಸಂಶೋಧನೆ ಮತ್ತು ಪ್ರಾತ್ಯಕ್ಷಿಕೆಗಳಿಗೆ ಇನ್ನಷ್ಟು ಹೆಚ್ಚು ಆದ್ಯತೆ ನೀಡಬೇಕು. ರೈತರನ್ನು ತಾಂತ್ರಿಕವಾಗಿ ಸಶಕ್ತರನ್ನಾಗಿ ಮಾಡಿ ಕೃಷಿ ಕ್ಷೇತ್ರವನ್ನು ಸದೃಡಗೊಳಿಸಬೇಕು. ನಿಶ್ಚಿತ, ಲಾಭದಾಯಕ ಉದ್ಯಮವನ್ನಾಗಿ ಪರಿವರ್ತಿಸಬೇಕೆಂದು ಚಲುವರಾಯಸ್ವಾಮಿ ನಿರ್ದೇಶನ ನೀಡಿದರು.
ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳು ಎದುರಿಸುತ್ತಿರುವ ತಾಂತ್ರಿಕ, ಆಡಳಿತಾತ್ಮಕ ಮತ್ತು ಆರ್ಥಿಕ ಸಮಸ್ಯೆ ಹಾಗೂ ಸವಾಲುಗಳನ್ನು ಕುರಿತು ಆದ್ಯತೆ ಮೇರೆಗೆ ಪಟ್ಟಿ ಮಾಡಿ ಪ್ರಸ್ತಾವನೆ ಸಿದ್ದಪಡಿಸುವಂತೆ ಸೂಚಿಸಿದ ಸಚಿವರು ಈ ಬಗ್ಗೆ ಮಾರ್ಚ್ ನಂತರ ಮುಖ್ಯಮಂತ್ರಿ ಹಾಗೂ ಸಂಬಂಧಪಟ್ಟವರೊಂದಿಗೆ ಚರ್ಚೆ ನಡೆಸುವುದಾಗಿ ತಿಳಿಸಿದರು.
ಮಂಡ್ಯ ವಿ.ಸಿ ಫಾರಂನಲ್ಲಿ ಹೊಸದಾಗಿ ಪ್ರಾರಂಭಿಸಲು ಉದ್ದೇಶಿಸಿರುವ ಸಮಗ್ರ ವಿಶ್ವವಿದ್ಯಾಲಯಗಳ ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಕಾರ್ಯಾರಂಭ ಮಾಡಲಿದೆ ಅದಕ್ಕಾಗಿಯೇ ಈಗಾಗಲೇ ಎಲ್ಲಾ ರೀತಿಯ ತಯಾರಿ ನಡೆಯುತ್ತಿದೆ. ಇದೇ ರೀತಿ ಎಲ್ಲಾ ಕೃಷಿ ವಿಶ್ವವಿದ್ಯಾಲಯಗಳನ್ನು ಬಲಪಡಿಸುವುದು ಸರ್ಕಾರದ ಉದ್ದೇಶವಾಗಿದ್ದು, ಅದಕ್ಕಾಗಿಯೇ ತಜ್ಞರ ಸಮಿತಿ ರಚಿಸಲಾಗುತ್ತಿದೆ ಎಂದರು.
ಕೃಷಿ ಇಲಾಖೆ ಕಾರ್ಯದರ್ಶಿ ಡಾ. ರವಿಶಂಕರ್ ವಿವಿಧ ಕೃಷಿ ವಿಶ್ವವಿದ್ಯಾಲಯಗಳ ಉಪ ಕುಲಪತಿಗಳಾದ ಡಾ.ಸುರೇಶ್, ಡಾ ಹನುಮಂತಪ್ಪ, ಡಾ ವಿಷ್ಣುವರ್ಧನ್, ಡಾ ಪಿ.ಎಲ್.ಪಾಟೀಲ್, ಡಾ.ಆರ್.ಸಿ.ಜಗದೀಶ, ಮಂಡ್ಯ ಕೃಷಿ ವಿವಿ ವಿಶೇಷಾಧಿಕಾರಿ ಡಾ. ಹರಿಣಿ ಕುಮಾರ್ ಮತ್ತಿತರರು ಸಭೆಯಲ್ಲಿ ಹಾಜರಿದ್ದು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.
ಗುಂಡ್ಲುಪೇಟೆ : ತಾಲ್ಲೂಕಿನ ಬರಗಿ ಗ್ರಾಮದ ಜಮೀನುಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸಿ ಕೊಂದುಹಾಕಿದ್ದ ವಿಚಾರವಾಗಿ ಅರಣ್ಯ ಇಲಾಖೆ ಚಿರತೆ…
ಮೈಸೂರು : ಬುಧವಾರವಷ್ಟೇ ಹೆಬ್ಬಾಳ್ನಲ್ಲಿ ಶೆಡ್ವೊಂದರ ಮೇಲೆ ದಾಳಿ ನಡೆಸಿದ್ದ ಎನ್ಸಿಬಿ ಪೊಲೀಸರು, ಮಾದಕ ವಸ್ತು ಮಾರಾಟ ಆರೋಪ ಪ್ರಕರಣದಲ್ಲಿ…
ಹನೂರು : ತಾಲ್ಲೂಕಿನ ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ಬೈಲೂರು ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ತೇಗದ ಮರಗಳನ್ನು ಕಟಾವು…
ಮೈಸೂರು : ವಿಶ್ವವಿದ್ಯಾನಿಲಯಗಳ ಕ್ಯಾಂಪಸ್ನಲ್ಲಿ ಜಾತಿ, ಧರ್ಮ,ಲಿಂಗ ಆಧಾರಿತ ಶೋಷಣೆಯನ್ನು ತಡೆಗಟ್ಟಲು ಯುಜಿಸಿಯ ಉದ್ದೇಶಿತ ಹೊಸ ನಿಯಮಾವಳಿಗಳ ಜಾರಿಗೆ ಒತ್ತಾಯಿಸಿ…
ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ…
ಹೊಸದಿಲ್ಲಿ : ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ. ವಿಶ್ವವಿದ್ಯಾಲಯ…