ರಾಜ್ಯ

ವಿಜ್ಞಾನ ಶ್ರೇಯೋಭಿವೃದ್ಧಿಗಾಗಿ ಕಾರ್ಪೋರೇಟ್ ವಲಯ ಕೈಜೋಡಿಸಬೇಕು: ಸಚಿವ ಎನ್.ಎಸ್ ಬೋಸರಾಜು

ಬೆಂಗಳೂರು: ಸುರಕ್ಷಿತ ಮತ್ತು ಹೆಚ್ಚು ಸುಸ್ಥಿರ ಭವಿಷ್ಯದ ವಿಜ್ಞಾನದ ಶ್ರೇಯೋಭಿವೃದ್ಧಿಗಾಗಿ ಕಾರ್ಪೋರೇಟ್ ವಲಯ ಮುಂದಾಗಬೇಕು ಎಂದು ವಿಜ್ಞಾನ ಮತ್ತು ತಂತ್ರಜ್ಞಾನ, ಸಣ್ಣ ನೀರಾವರಿ ಸಚಿವ ಎನ್.ಎಸ್. ಬೋಸರಾಜು ಶನಿವಾರ (ಆಗಸ್ಟ್‌ 24) ಹೇಳಿದ್ದಾರೆ.

ಬಳ್ಳಾರಿ ರಸ್ತೆಯಲ್ಲಿ “ಬೆಂಗಳೂರು ಸೈನ್ಸ್ ಗ್ಯಾಲರಿ” ಯಲ್ಲಿ ಆಯೋಜಿಸಲಾಗಿರುವ ಸೈನ್ಸ್ – 560 ಪ್ರದರ್ಶನದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ವಿಜ್ಞಾನ, ತಂತ್ರಜ್ಞಾನದ ಅಡಿಪಾಯವನ್ನು ಸುಗಮಗೊಳಿಸಲು ಮತ್ತು ವಿಜ್ಞಾನ ವಲಯದ ಪ್ರವೇಶ, ಈ ಕ್ಷೇತ್ರ ಎಲ್ಲರಿಗೂ ಲಭ್ಯವಾಗುವಂತೆ ಮಾಡಲು ನಮ್ಮ ಪ್ರಯಾಣದಲ್ಲಿ ನಮಗೆ ಸಹಾಯ ಮಾಡಲು, ಸಂಯೋಜಿಸಲು, ಸಹಕರಿಸಲು ಮತ್ತು ಪಾಲುದಾರರಾಗಲು ಕಾರ್ಪೊರೇಟ್ ನಾಯಕರಿಗೆ ಆಹ್ವಾನ ನೀಡಲಾಗುವುದು ಎಂದರು.

ಶಾಂತಿ, ಪ್ರಗತಿ ಮತ್ತು ಸಮೃದ್ಧಿಯನ್ನು ಉತ್ತೇಜಿಸಲು ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೇರಕ ಶಕ್ತಿಗಳಾಗಿವೆ. ಎಲ್ಲರಿಗೂ ಕೈಗೆಟುಕುವ. ಒಟ್ಟಾಗಿ ಸಾಗುವ ಮೂಲಕ ಮತ್ತು ಪರಸ್ಪರ ಬೆಂಬಲಿಸುವ ಮೂಲಕ ನಾವು ಉಜ್ವಲ ಮತ್ತು ಹೆಚ್ಚು ಸಮೃದ್ಧ ಕರ್ನಾಟಕವನ್ನು ನಿರ್ಮಿಸಬಹುದು. ಬೆಂಗಳೂರಿನಲ್ಲಿ ವಿಜ್ಞಾನದ ಶ್ರೀಮಂತ ಇತಿಹಾಸವನ್ನು ಆಚರಿಸುವ ಮತ್ತು ಭವಿಷ್ಯದ ಆವಿಷ್ಕಾರಗಳನ್ನು ನಾವು ಎದುರುನೋಡುತ್ತಿದ್ದೇವೆ. ನಗರದ ವಿಜ್ಞಾನದ ಯಶೋಗಾಥೆಯನ್ನು ಇನ್ನಷ್ಟು ಬರೆಯಲಾಗುವುದು. ಉತ್ತಮವಾದದ್ದು ಇನ್ನೂ ಬರಬೇಕಿದೆ ಎಂದು ಹೇಳಿದರು.

ಬೆಂಗಳೂರು ನಗರ ದೇಶದ ವೈಜ್ಞಾನಿಕ ಪಥವನ್ನು ರೂಪಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದು, ಇಂತಹ ಶ್ರೀಮಂತ ಇತಿಹಾಸದ ಆಚರಣೆಯ ಭಾಗವಾಗಿರುವುದು ಹೆಮ್ಮೆಯ ವಿಷಯ. ಇದು ನಮ್ಮ ನಗರವನ್ನು ಮಾತ್ರವಲ್ಲದೆ ನಮ್ಮ ರಾಷ್ಟ್ರದ ವೈಜ್ಞಾನಿಕ ಪಥವನ್ನು ರೂಪಿಸಿದೆ. ಕೇವಲ ಬೆಂಗಳೂರು ಮಾತ್ರವಲ್ಲದೆ ಯುವ ಸಮೂಹ ಸಾರ್ವಜನಿಕವಾಗಿ ತೊಡಗಿಕೊಳ್ಳುವ ಮೂಲಕ ರಾಷ್ಟ್ರದಾದ್ಯಂತ ಸ್ಫೂರ್ತಿಯ ಮೂಲವಾಗಿದೆ ಎಂದರು.

ರೋಹಿಣಿ ನಿಲೇಕಣಿ ಅವರಂತಹ ಲೋಕೋಪಕಾರಿಗಳ ಔದಾರ್ಯದಿಂದ ಬೆಂಬಲಿತವಾದ ಬೆಂಗಳೂರಿನಲ್ಲಿ ದಶಕಗಳ ವೈಜ್ಞಾನಿಕ ನಾವೀನ್ಯತೆ ಮತ್ತು ಸಾಧನೆಗಳನ್ನು ಅನ್ವೇಷಿಸುವ ಪಯಣ ಹೊಂದಿದ್ದೇವೆ. ಈ ಪ್ರದರ್ಶನವು ನಮ್ಮ ನಗರವನ್ನು ಜ್ಞಾನ ಮತ್ತು ಆವಿಷ್ಕಾರದ ದಾರಿದೀಪವನ್ನಾಗಿ ಮಾಡಿದ ಮನಸ್ಸು ಮತ್ತು ಸಂಸ್ಥೆಗಳಿಗೆ ಸಂದ ಗೌರವವಾಗಿದೆ. ಈ ಪ್ರದರ್ಶನ ಕೋಲಾರ ಚಿನ್ನದ ಗಣಿ ನ್ಯೂಟ್ರಿನೊ ಪ್ರಯೋಗಗಳಿಂದ ಹಿಡಿದು ಎಚ್.ಎ.ಎಲ್ ನಲ್ಲಿ ಮೊದಲ ದೇಶೀಯ ವಿಮಾನದ ಅಭಿವೃದ್ಧಿಯವರೆಗೆ ನಮ್ಮನ್ನು ಕರೆದೊಯ್ಯುತ್ತದೆ. ಇದು ಪ್ರಮುಖ ವೈಜ್ಞಾನಿಕ ಸಾಧನೆಗಳಲ್ಲಿ ನಗರದ ಪಾತ್ರವನ್ನು ಅನಾವರಣಗೊಳಿಸುತ್ತದೆ. ಇಂತಹ ಉತ್ತಮ ಪ್ರದರ್ಶನಗಳನ್ನ ಸೈನ್ಸ್‌ ಗ್ಯಾಲರಿಯಲ್ಲಿ ಆಯೋಜನೆ ಮಾಡುವ ನಿಟ್ಟಿನಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ನೇತೃತ್ವದ ಸರಕಾರ 10 ಕೋಟಿ ರೂಪಾಯಿಗಳ ಕಾರ್ಪಸ್‌ ಫಂಡ್‌ ಕೂಡಾ ನೀಡಿದೆ ಎಂದು ಸಚಿವ ಎನ್.ಎಸ್. ಬೋಸರಾಜು ಹೇಳಿದರು.

ಈ ಪ್ರದರ್ಶನವು ಭವಿಷ್ಯದ ಪೀಳಿಗೆಯ ಚಿಂತಕರು ಮತ್ತು ನವೋದ್ಯಮಿಗಳಿಗೆ ಸ್ಫೂರ್ತಿ ನೀಡಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನದ ಬೆಳವಣಿಗೆಗೆ ಅಗತ್ಯವಿರುವ ಎಲ್ಲ ಬೆಂಬಲವನ್ನು ನೀಡಲು ಸರ್ಕಾರ ಬದ್ಧವಾಗಿದೆ ಎಂದು ನುಡಿದರು.

ಭೂಮಿಕಾ

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

7 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

7 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

8 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

8 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

10 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

10 hours ago