ರಾಜ್ಯ

ನಿಗಮ ಮಂಡಳಿ | ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ

ಬೆಂಗಳೂರು : 25 ನಿಗಮ ಮಂಡಳಿಗಳ ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದೆ. ಶಾಸಕರಿಗೆ ಮಾತ್ರ ಅನ್ವಯವಾಗುವಂತೆ ನಿಗಮ ಮಂಡಳಿ ಅಧ್ಯಕ್ಷರ ಅಧಿಕಾರವಧಿ ಮುಂದುವರಿಕೆ ಮಾಡಲಾಗಿದೆ.

2024ರ ಜ.26ರಂದು ನಿಗಮ ಮಂಡಳಿ ಅಧ್ಯಕ್ಷರನ್ನ ನೇಮಕ ಮಾಡಿದ್ದ ರಾಜ್ಯ ಸರ್ಕಾರ ಎರಡು ವರ್ಷಗಳ ಅವಧಿಗೆ ನೇಮಕ ಆದೇಶ ಹೊರಡಿಸಲಾಗಿತ್ತು. ಮೊನ್ನೆಯಷ್ಟೇ ಅವಧಿ ಮುಗಿದ ಕಾರಣ 25 ಶಾಸಕರ ಅಧ್ಯಕ್ಷ ಸ್ಥಾನದ ಅಧಿಕಾರವಾಧಿಯನ್ನ ಮುಂದುವರಿಸಿದ್ದಾರೆ. ಅಷ್ಟೇ ಅಲ್ಲ 25 ಶಾಸಕರಿಗೆ ಕ್ಯಾಬಿನೆಟ್ ದರ್ಜೆ ಸಚಿವ ಸ್ಥಾನಮಾನದೊಂದಿಗೆ ಮುಂದಿನ ಆದೇಶದ ತನಕ ಮುಂದುವರಿಸಲು ಹೊಸ ಆದೇಶ ಹೊರಡಿಸಲಾಗಿದೆ.

ನಿಗಮ ಮಂಡಳಿ ಅಧ್ಯಕ್ಷರ ಅಧಿಕಾರವಧಿ ಅಂತ್ಯವಾಗಿದ್ದರಿಂದ ಗಾದಿ ಕೈತಪ್ಪುವ ಆತಂಕದಲ್ಲಿದ್ದರು. ಆದರೆ, ಇದೀಗ ಈ ಹಿಂದೆ ನೇಮಕಗೊಂಡಿದ್ದವರನ್ನೇ ಮುಂದುವರಿಸಲು ಸರ್ಕಾರ ಆದೇಶ ಹೊರಡಿಸಿದೆ.

ಸರ್ಕಾರವು 2024 ಜನವರಿ 26 ರಂದು ರಾಜ್ಯದ ನಿಗಮ ಮಂಡಳಿಗಳಿಗೆ ಅಧ್ಯಕ್ಷರನ್ನಾಗಿ ಶಾಸಕರುಗಳನ್ನು ನೇಮಕ ಮಾಡಲಾಗಿತ್ತು. ಅವರಿಗೆ ಸಚಿವ ಸಂಪುಟ ದರ್ಜೆಯ ಸ್ಥಾನಮಾನ ನೀಡಲಾಗಿತ್ತು. 2026 ಜನವರಿ 26 ಕ್ಕೆ ಎರಡು ವರ್ಷಗಳ ಅವಧಿ ಮುಗಿದ ಹಿನ್ನೆಲೆ ಅಧ್ಯಕ್ಷರನ್ನು ಬದಲಾವಣೆ ಮಾಡಲಾಗುತ್ತೆದೆಯೋ ಅಥವಾ ಮುಂದುವರೆಸುತ್ತಾರೋ ಎಂಬ ಕುತೂಹಲ ಹಲವರಲ್ಲಿತ್ತು. ಸದ್ಯ ಸರ್ಕಾರ ಮುಂದುವರೆಸುವ ನಿರ್ಧಾರ ಕೈಗೊಂಡಿದೆ.

ನಿಗಮ ಮಂಡಳಿಗಳಲ್ಲಿ ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಶಾಸಕರನ್ನೇ ಅಧ್ಯಕ್ಷರಾಗಿ ಸಚಿವ ಸಂಪುಟ ದರ್ಜೆಯ ಸ್ಥಾನಮಾನದೊಂದಿಗೆ (ಸಚಿವ ಸಂಪುಟ ದರ್ಜೆಯ ಸಚಿವರಿಗೆ ನೀಡುವ ಎಲ್ಲಾ ಸೌಲಭ್ಯಗಳೊಂದಿಗೆ) ಜನವರಿ 26 ರಿಂದ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೆ ಮುಂದುವರೆಯಲಿದ್ದಾರೆ ಎಂದು ಸರ್ಕಾರ ಅಧಿಸೂಚನೆಯಲ್ಲಿ ಉಲ್ಲೇಖಿಸಿದೆ.

ಇನ್ನು ಮುಖ್ಯವಾಗಿ ಮುಂದಿನ ಆದೇಶದವರೆಗೆ ಎಂದು ಉಲ್ಲೇಖಿಸಿರುವುದು ಕುತೂಹಲಕ್ಕೆ ಕಾರಣವಾಗಿದೆ. ಏಕೆಂದರೆ ಯಾವಾಗ ಬೇಕಿದ್ದರೂ ಸ್ಥಾನಕ್ಕೆ ಕುತ್ತು ಬರಹುದು.

ಶಾಸಕರಾದ ಶರತ್ ಬಚ್ಚೇಗೌಡ, ಶಿವಲಿಂಗೇಗೌಡ, ಪುಟ್ಟರಂಗಶೆಟ್ಟಿ, ಹೆಚ್‌ಸಿ ಬಾಲಕೃಷ್ಣ, ಎಸ್‌ಆರ್ ಶ್ರೀನಿವಾಸ್, ಎನ್‌ಎ ಹ್ಯಾರೀಸ್, ಬಿಕೆ ಸಂಗಮೇಶ್, ಅಬ್ಬಯ್ಯ ಪ್ರಸಾದ್, ಬೇಳೂರು ಗೋಪಾಲಕೃಷ್ಣ ಸೇರಿದಂತೆ 25 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷರಾಗಿ ಮುಂದುವರಿಯುವ ಭಾಗ್ಯ ಸಿಕ್ಕಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; ಪ್ರತಿಷ್ಠಿತ ಕಾನ್‌ ಚಿತ್ರೋತ್ಸವದಲ್ಲಿ ಭಾರತ ಚಿತ್ರೋದ್ಯಮ

ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್‌ನ ಕಾನ್‌ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…

2 hours ago

ಗಗನಮುಖಿಯಾಗಿದ್ದ ತೆಂಗಿನ ಕಾಯಿ ದರ ಕುಸಿತ

ಎಚ್‌.ಎಸ್.ದಿನೇಶ್‌ ಕುಮಾರ್‌ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…

2 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ.15  ಶುಕ್ರವಾರ

2 hours ago

ತಮಿಳುನಾಡಿನಲ್ಲಿ ಮದ್ಯ ಖರೀದಿ ಮತ್ತು ಸೇವನೆಗೆ 21 ವರ್ಷ ವಯಸ್ಸು ಕಡ್ಡಾಯ

ಚೆನ್ನೈ: ರಾಜ್ಯದಲ್ಲಿ ಅಪ್ರಾಪ್ತ ವಯಸ್ಕರಲ್ಲಿ ಹೆಚ್ಚುತ್ತಿರುವ ಮದ್ಯ ಸೇವನೆಯನ್ನು ತಡೆಯಲು, ತಮಿಳುನಾಡು ಸರ್ಕಾರವು ಎಲ್ಲಾ ರೀತಿಯ ಮದ್ಯ ಖರೀದಿ ಮತ್ತು…

15 hours ago

ಮುಂದಿನ ಐದು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಿಗೆ ಪೂರ್ವ ಮುಂಗಾರು ಆರ್ಭಟ ಮುಂದುವರಿದಿದೆ. ನಾಳೆ ಮತ್ತಷ್ಟು ತೀವ್ರತೆ…

16 hours ago

ಉತ್ತರ ಪ್ರದೇಶದಲ್ಲಿ ಮಳೆ ಅವಾಂತರ: ಸಾವಿನ ಸಂಖ್ಯೆ 104ಕ್ಕೆ ಏರಿಕೆ

ಲಕ್ನೋ: ಉತ್ತರ ಪ್ರದೇಶದಾದ್ಯಂತ ಭಾರೀ ಮಳೆ ಮತ್ತು ಬಿರುಗಾಳಿಗೆ ಈವರೆಗೆ 104 ಜನರು ಸಾವನ್ನಪ್ಪಿದ್ದಾರೆ. ಮಳೆ ಹೊಡೆತಕ್ಕೆ 53 ಜನರಿಗೆ…

16 hours ago