ರಾಜ್ಯ

ನಿಗಮ ಮಂಡಳಿ | ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ

ಬೆಂಗಳೂರು : 25 ನಿಗಮ ಮಂಡಳಿಗಳ ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದೆ. ಶಾಸಕರಿಗೆ ಮಾತ್ರ ಅನ್ವಯವಾಗುವಂತೆ ನಿಗಮ ಮಂಡಳಿ ಅಧ್ಯಕ್ಷರ ಅಧಿಕಾರವಧಿ ಮುಂದುವರಿಕೆ ಮಾಡಲಾಗಿದೆ.

2024ರ ಜ.26ರಂದು ನಿಗಮ ಮಂಡಳಿ ಅಧ್ಯಕ್ಷರನ್ನ ನೇಮಕ ಮಾಡಿದ್ದ ರಾಜ್ಯ ಸರ್ಕಾರ ಎರಡು ವರ್ಷಗಳ ಅವಧಿಗೆ ನೇಮಕ ಆದೇಶ ಹೊರಡಿಸಲಾಗಿತ್ತು. ಮೊನ್ನೆಯಷ್ಟೇ ಅವಧಿ ಮುಗಿದ ಕಾರಣ 25 ಶಾಸಕರ ಅಧ್ಯಕ್ಷ ಸ್ಥಾನದ ಅಧಿಕಾರವಾಧಿಯನ್ನ ಮುಂದುವರಿಸಿದ್ದಾರೆ. ಅಷ್ಟೇ ಅಲ್ಲ 25 ಶಾಸಕರಿಗೆ ಕ್ಯಾಬಿನೆಟ್ ದರ್ಜೆ ಸಚಿವ ಸ್ಥಾನಮಾನದೊಂದಿಗೆ ಮುಂದಿನ ಆದೇಶದ ತನಕ ಮುಂದುವರಿಸಲು ಹೊಸ ಆದೇಶ ಹೊರಡಿಸಲಾಗಿದೆ.

ನಿಗಮ ಮಂಡಳಿ ಅಧ್ಯಕ್ಷರ ಅಧಿಕಾರವಧಿ ಅಂತ್ಯವಾಗಿದ್ದರಿಂದ ಗಾದಿ ಕೈತಪ್ಪುವ ಆತಂಕದಲ್ಲಿದ್ದರು. ಆದರೆ, ಇದೀಗ ಈ ಹಿಂದೆ ನೇಮಕಗೊಂಡಿದ್ದವರನ್ನೇ ಮುಂದುವರಿಸಲು ಸರ್ಕಾರ ಆದೇಶ ಹೊರಡಿಸಿದೆ.

ಸರ್ಕಾರವು 2024 ಜನವರಿ 26 ರಂದು ರಾಜ್ಯದ ನಿಗಮ ಮಂಡಳಿಗಳಿಗೆ ಅಧ್ಯಕ್ಷರನ್ನಾಗಿ ಶಾಸಕರುಗಳನ್ನು ನೇಮಕ ಮಾಡಲಾಗಿತ್ತು. ಅವರಿಗೆ ಸಚಿವ ಸಂಪುಟ ದರ್ಜೆಯ ಸ್ಥಾನಮಾನ ನೀಡಲಾಗಿತ್ತು. 2026 ಜನವರಿ 26 ಕ್ಕೆ ಎರಡು ವರ್ಷಗಳ ಅವಧಿ ಮುಗಿದ ಹಿನ್ನೆಲೆ ಅಧ್ಯಕ್ಷರನ್ನು ಬದಲಾವಣೆ ಮಾಡಲಾಗುತ್ತೆದೆಯೋ ಅಥವಾ ಮುಂದುವರೆಸುತ್ತಾರೋ ಎಂಬ ಕುತೂಹಲ ಹಲವರಲ್ಲಿತ್ತು. ಸದ್ಯ ಸರ್ಕಾರ ಮುಂದುವರೆಸುವ ನಿರ್ಧಾರ ಕೈಗೊಂಡಿದೆ.

ನಿಗಮ ಮಂಡಳಿಗಳಲ್ಲಿ ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಶಾಸಕರನ್ನೇ ಅಧ್ಯಕ್ಷರಾಗಿ ಸಚಿವ ಸಂಪುಟ ದರ್ಜೆಯ ಸ್ಥಾನಮಾನದೊಂದಿಗೆ (ಸಚಿವ ಸಂಪುಟ ದರ್ಜೆಯ ಸಚಿವರಿಗೆ ನೀಡುವ ಎಲ್ಲಾ ಸೌಲಭ್ಯಗಳೊಂದಿಗೆ) ಜನವರಿ 26 ರಿಂದ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೆ ಮುಂದುವರೆಯಲಿದ್ದಾರೆ ಎಂದು ಸರ್ಕಾರ ಅಧಿಸೂಚನೆಯಲ್ಲಿ ಉಲ್ಲೇಖಿಸಿದೆ.

ಇನ್ನು ಮುಖ್ಯವಾಗಿ ಮುಂದಿನ ಆದೇಶದವರೆಗೆ ಎಂದು ಉಲ್ಲೇಖಿಸಿರುವುದು ಕುತೂಹಲಕ್ಕೆ ಕಾರಣವಾಗಿದೆ. ಏಕೆಂದರೆ ಯಾವಾಗ ಬೇಕಿದ್ದರೂ ಸ್ಥಾನಕ್ಕೆ ಕುತ್ತು ಬರಹುದು.

ಶಾಸಕರಾದ ಶರತ್ ಬಚ್ಚೇಗೌಡ, ಶಿವಲಿಂಗೇಗೌಡ, ಪುಟ್ಟರಂಗಶೆಟ್ಟಿ, ಹೆಚ್‌ಸಿ ಬಾಲಕೃಷ್ಣ, ಎಸ್‌ಆರ್ ಶ್ರೀನಿವಾಸ್, ಎನ್‌ಎ ಹ್ಯಾರೀಸ್, ಬಿಕೆ ಸಂಗಮೇಶ್, ಅಬ್ಬಯ್ಯ ಪ್ರಸಾದ್, ಬೇಳೂರು ಗೋಪಾಲಕೃಷ್ಣ ಸೇರಿದಂತೆ 25 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷರಾಗಿ ಮುಂದುವರಿಯುವ ಭಾಗ್ಯ ಸಿಕ್ಕಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

2 hours ago

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

4 hours ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

5 hours ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

5 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

8 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

9 hours ago