ರಾಜ್ಯ

SSLC ಪೂರ್ವ ಸಿದ್ಧತಾ ಪರೀಕ್ಷೆಯ ವೆಚ್ಚ: ವಿದ್ಯಾರ್ಥಿಗಳಿಂದಲೇ ವಸೂಲಿ : ಸರ್ಕಾರದ ವಿರುದ್ಧ ಹೆಚ್‌ಡಿಕೆ ಗರಂ !

ಬೆಂಗಳೂರು: ಎಸ್ ಎಸ್ ಎಲ್ ಸಿ ಪೂರ್ವ ಸಿದ್ಧತಾ ಪರೀಕ್ಷೆಯ ವೆಚ್ಚದ ಹಣವನ್ನು ವಿದ್ಯಾರ್ಥಿಗಳಿಂದಲೇ ವಸೂಲಿ ಮಾಡಬೇಕು ಎಂದು ಆದೇಶ ಹೊರಡಿಸಿರುವ ರಾಜ್ಯ ಸರಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸರಕಾರವನ್ನು ಗತಿಗೆಟ್ಟ ಸರಕಾರ ಎಂದು ಕಟುವಾಗಿ ಟೀಕೆ ಮಾಡಿರುವ ಅವರು; ಕೂಡಲೇ ಈ ಆದೇಶವನ್ನು ವಾಪಸ್ ಪಡೆಯಬೇಕು, ಪರೀಕ್ಷಾ ವೆಚ್ಚವನ್ನು ಸರಕಾರವೇ ಭರಿಸಬೇಕು ಎಂದು ಅವರು ಒತ್ತಾಯ ಮಾಡಿದ್ದಾರೆ.

ಅಲ್ಲದೆ, ಸರಕಾರದ ಆದೇಶದ ಪ್ರತಿಯನ್ನು ಅವರು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಜನತೆಗೆ 5 ಗ್ಯಾರಂಟಿ ಕೊಟ್ಟೆವು ಎಂದು ಬಡಾಯಿ ಕೊಚ್ಚಿಕೊಳ್ಳುತ್ತಿರುವ ರಾಜ್ಯ ಕಾಂಗ್ರೆಸ್ ಸರಕಾರದ ಆಡಳಿತ ಅದೆಷ್ಟು ಅಧಃಪತನಕ್ಕೆ ಹೋಗಿದೆ ಎನ್ನುವುದಕ್ಕೆ ಸಾಕ್ಷ್ಯ ಇಲ್ಲಿದೆ.

ಒಂದು ಕೈಯ್ಯಲ್ಲಿ ಕೊಟ್ಟು ಹತ್ತು ಕೈಗಳಲ್ಲಿ ರಾವಣನಂತೆ ಕಸಿದುಕೊಳ್ಳುತ್ತಿರುವ ಸರಕಾರ, ಈಗ SSLC ಮಕ್ಕಳ ಕಿಸೆಗೂ ಕೈ ಹಾಕಿದೆ ಎಂದು ಅವರು ಕಿಡಿಕಾರಿದ್ದಾರೆ.

ಅಕ್ರಮ ಸುಲಿಗೆಯಲ್ಲಿ ‘ಸಿದ್ದಹಸ್ತ’ವಾಗಿರುವ ಸರಕಾರ, ಈಗ ಕಾನೂನು ಬದ್ಧವಾಗಿಯೇ ಸುಲಿಗೆ ಮಾಡುತ್ತಿದೆ, ಅದೂ ಲಜ್ಜೆಗೆಟ್ಟು. ಇದೇ ಫೆಬ್ರವರಿ 26ರಿಂದ ಮಾರ್ಚ್ 3ರವರೆಗೂ ನಡೆಯಲಿರುವ 2023-24ನೇ ಸಾಲಿನ SSLC ಪೂರ್ವ ಸಿದ್ಧತಾ ಪರೀಕ್ಷೆಗೆ ಆಗುವ ವೆಚ್ಚವನ್ನು ನಾಚಿಕೆಗೆಟ್ಟ ಸರಕಾರ ಮಕ್ಕಳಿಂದಲೇ ವಸೂಲಿ ಮಾಡಲು ಹೊರಟಿದೆ ಎಂದು ಅವರು ದೂರಿದ್ದಾರೆ.

ಪ್ರಶ್ನೆಪತ್ರಿಕೆ ತಯಾರಿ, ಮುದ್ರಣ, ಸಾಗಣೆ ವೆಚ್ಚವನ್ನು ವಿದ್ಯಾರ್ಥಿಗಳ ಮೇಲೆಯೇ ಹೇರಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷರು ಆದೇಶಿಸಿದ್ದಾರೆ.

ವೆಚ್ಚ ವಸೂಲಿ ಮಾಡುವಂತೆ ಎಲ್ಲಾ ಸರಕಾರಿ ಶಾಲೆಗಳ ಮುಖ್ಯ ಶಿಕ್ಷಕರಿಗೆ ಆದೇಶಿಸಿರುವುದು ಸರಕಾರ ಎಷ್ಟರ ಮಟ್ಟಿಗೆ ದಿವಾಳಿಯೆದ್ದು ಹೋಗಿದೆ ಎನ್ನುವುದಕ್ಕೆ ಉದಾಹರಣೆ ಎಂದು ಅವರು ಕಿಡಿಕಾರಿದ್ದಾರೆ.

ಸರಕಾರಿ ಶಾಲೆಗಳ ಮುಖ್ಯ ಶಿಕ್ಷಕರು ವೆಚ್ಚ ವಸೂಲಿ ಮಾಡಿ, ಆ ಮೊತ್ತವನ್ನು ಇಲಾಖೆ ಉಪ ನಿರ್ದೇಶಕರು (ಆಡಳಿತ), ಇವರ ಖಾತೆಗೆ ಜಮೆ ಮಾಡಬೇಕು ಎಂದು ಅವರು ಫರ್ಮಾನು ಹೊರಡಿಸಿದ್ದಾರೆ ಎಂದು ತರಾಟೆಗೆ ತೆಗೆದುಕೊಂಡಿರುವ ಅವರು, ಗ್ಯಾರಂಟಿ ಕೊಟ್ಟು ಬಡವರ ಉದ್ಧಾರ ಮಾಡುತ್ತಿದ್ದೇವೆ ಎಂದು ಬೀಗುವ ಸರಕಾರಕ್ಕೆ, ಅದೇ ಬಡಮಕ್ಕಳಿಗೆ 50 ರೂ. ಖರ್ಚು ಮಾಡಲು ಗತಿ ಇಲ್ಲವೇ? ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.

ಈಗಾಗಲೇ ಬರದಿಂದ ಕಂಗೆಟ್ಟಿರುವ ರಾಜ್ಯದ ಜನರಿಗೆ ಸರಕಾರ ಬರೆಯ ಮೇಲೆ ಬರೆ ಎಳೆಯುತ್ತಿದೆ. ಕೂಡಲೇ ಈ ಆದೇಶವನ್ನು ವಾಪಸ್ ಪಡೆಯಬೇಕು, ಪರೀಕ್ಷೆ ವೆಚ್ಚವನ್ನು ಸರಕಾರವೇ ಭರಿಸಬೇಕು ಎಂದು ಕುಮಾರಸ್ವಾಮಿ ಅವರು ಒತ್ತಾಯ ಮಾಡಿದ್ದಾರೆ.

andolanait

Recent Posts

ಓದುಗರ ಪತ್ರ: ಚುಟುಕು ಸಾಹಿತ್ಯ ಪ್ರಶಸ್ತಿ ಸೇರ್ಪಡೆ ಸ್ವಾಗತಾರ್ಹ

೨೦೨೫-೨೬ನೇ ಸಾಲಿಗೆ ಕನ್ನಡ ಪುಸ್ತಕ ಪ್ರಾಧಿಕಾರವು ಅರ್ಹ ಸಾಹಿತಿಗಳಿಗೆ ಪ್ರಶಸ್ತಿಯನ್ನು ಪ್ರಕಟಿಸಿದ್ದು ಅದರಲ್ಲಿ ಇದೇ ಮೊದಲ ಬಾರಿಗೆ ಚುಟುಕು ಸಾಹಿತ್ಯಕ್ಕೂ…

11 hours ago

ವೈಚಾರಿಕ ಕ್ರಾಂತಿಯ ವಚನಕಾರ ಹಡಪದ ಅಪ್ಪಣ್ಣ

ಎಚ್.ಹಾಲಪ್ಪ ಅಸಮಾನತೆ, ಶೋಷಣೆ, ಅಂಧಶ್ರದ್ಧೆ ವಿರುದ್ಧ ವಚನ ರಚಿಸಿದ ಹಡಪದ ಅಪ್ಪಣ್ಣ ಜಯಂತಿ ಇಂದು ೧೨ನೇ ಶತಮಾನದ ವಚನ ಚಳವಳಿ…

11 hours ago

ಹವಾಮಾನ ಬದಲಾವಣೆ; ಹುಲಿಗಳಿಗೆ ಹೊಸ ಅಪಾಯ?

ಶ್ರೇಯಸ್ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಜುಲೈ ೨೯ರಂದು ವಿಶ್ವ ಹುಲಿ ದಿನವನ್ನು ಆಚರಿಸುವಾಗ, ಭಾರತದ ಹುಲಿ ಸಂರಕ್ಷಣೆಯ ಯಶಸ್ಸನ್ನು ನಾವು…

11 hours ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಗೌರವ್ ಶುಕ್ಲಾ ಎಂಬ ‘ಸಮವಸ್ತ್ರವಿಲ್ಲದ ಸೈನಿಕ’

‘ಸಪೋರ‍್ಟ್ ಅವರ್ ಹೀರೋಸ್’ ಸರ್ಕಾರೇತರ ಸಂಸ್ಥೆ ಸ್ಥಾಪನೆ  ೩೬ವರ್ಷ ಪ್ರಾಯದ ಗೌರವ್ ಶುಕ್ಲಾ(ಕುಳಿತವರಲ್ಲಿ ಎಡ ಬದಿ)ರ ತಂದೆ ೨೮ ವರ್ಷಗಳ…

11 hours ago

ಮಲ್ಲಳ್ಳಿ ಜಲಪಾತದ ರೋಪ್‌ವೇ ಯೋಜನೆಗೆ ವೇಗ

ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ತಾಲ್ಲೂಕಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ ಮಲ್ಲಳ್ಳಿ ಜಲಪಾತದಲ್ಲಿ ಬಹುನಿರೀಕ್ಷಿತ ರೋಪ್‌ವೇ ಯೋಜನೆಗೆ ವೇಗ ದೊರೆತಿದೆ.…

11 hours ago

ಮೀನುಗಾರಿಕೆ ಉತ್ತೇಜನಕ್ಕೆ ಸಂಚಾರ ಮತ್ಸ್ಯ ವಾಹಿನಿ

ಕೆ.ಬಿ.ರಮೇಶನಾಯಕ ಮೈಸೂರು: ಹಲವು ರೋಗಗಳಿಗೆ ರಾಮಬಾಣವಾದ ಹಾಗೂ ಆರೋಗ್ಯಕ್ಕೆ ಹಿತಕರ ಎನ್ನಲಾಗಿರುವ ಮೀನು ಆಹಾರವನ್ನು ಜನಸಾಮಾನ್ಯರಿಗೆ ಸುಲಭವಾಗಿ ದೊರೆಯುವಂತೆ ಮಾಡಲು…

11 hours ago