ರಾಜ್ಯ

SSLC ಪೂರ್ವ ಸಿದ್ಧತಾ ಪರೀಕ್ಷೆಯ ವೆಚ್ಚ: ವಿದ್ಯಾರ್ಥಿಗಳಿಂದಲೇ ವಸೂಲಿ : ಸರ್ಕಾರದ ವಿರುದ್ಧ ಹೆಚ್‌ಡಿಕೆ ಗರಂ !

ಬೆಂಗಳೂರು: ಎಸ್ ಎಸ್ ಎಲ್ ಸಿ ಪೂರ್ವ ಸಿದ್ಧತಾ ಪರೀಕ್ಷೆಯ ವೆಚ್ಚದ ಹಣವನ್ನು ವಿದ್ಯಾರ್ಥಿಗಳಿಂದಲೇ ವಸೂಲಿ ಮಾಡಬೇಕು ಎಂದು ಆದೇಶ ಹೊರಡಿಸಿರುವ ರಾಜ್ಯ ಸರಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸರಕಾರವನ್ನು ಗತಿಗೆಟ್ಟ ಸರಕಾರ ಎಂದು ಕಟುವಾಗಿ ಟೀಕೆ ಮಾಡಿರುವ ಅವರು; ಕೂಡಲೇ ಈ ಆದೇಶವನ್ನು ವಾಪಸ್ ಪಡೆಯಬೇಕು, ಪರೀಕ್ಷಾ ವೆಚ್ಚವನ್ನು ಸರಕಾರವೇ ಭರಿಸಬೇಕು ಎಂದು ಅವರು ಒತ್ತಾಯ ಮಾಡಿದ್ದಾರೆ.

ಅಲ್ಲದೆ, ಸರಕಾರದ ಆದೇಶದ ಪ್ರತಿಯನ್ನು ಅವರು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಜನತೆಗೆ 5 ಗ್ಯಾರಂಟಿ ಕೊಟ್ಟೆವು ಎಂದು ಬಡಾಯಿ ಕೊಚ್ಚಿಕೊಳ್ಳುತ್ತಿರುವ ರಾಜ್ಯ ಕಾಂಗ್ರೆಸ್ ಸರಕಾರದ ಆಡಳಿತ ಅದೆಷ್ಟು ಅಧಃಪತನಕ್ಕೆ ಹೋಗಿದೆ ಎನ್ನುವುದಕ್ಕೆ ಸಾಕ್ಷ್ಯ ಇಲ್ಲಿದೆ.

ಒಂದು ಕೈಯ್ಯಲ್ಲಿ ಕೊಟ್ಟು ಹತ್ತು ಕೈಗಳಲ್ಲಿ ರಾವಣನಂತೆ ಕಸಿದುಕೊಳ್ಳುತ್ತಿರುವ ಸರಕಾರ, ಈಗ SSLC ಮಕ್ಕಳ ಕಿಸೆಗೂ ಕೈ ಹಾಕಿದೆ ಎಂದು ಅವರು ಕಿಡಿಕಾರಿದ್ದಾರೆ.

ಅಕ್ರಮ ಸುಲಿಗೆಯಲ್ಲಿ ‘ಸಿದ್ದಹಸ್ತ’ವಾಗಿರುವ ಸರಕಾರ, ಈಗ ಕಾನೂನು ಬದ್ಧವಾಗಿಯೇ ಸುಲಿಗೆ ಮಾಡುತ್ತಿದೆ, ಅದೂ ಲಜ್ಜೆಗೆಟ್ಟು. ಇದೇ ಫೆಬ್ರವರಿ 26ರಿಂದ ಮಾರ್ಚ್ 3ರವರೆಗೂ ನಡೆಯಲಿರುವ 2023-24ನೇ ಸಾಲಿನ SSLC ಪೂರ್ವ ಸಿದ್ಧತಾ ಪರೀಕ್ಷೆಗೆ ಆಗುವ ವೆಚ್ಚವನ್ನು ನಾಚಿಕೆಗೆಟ್ಟ ಸರಕಾರ ಮಕ್ಕಳಿಂದಲೇ ವಸೂಲಿ ಮಾಡಲು ಹೊರಟಿದೆ ಎಂದು ಅವರು ದೂರಿದ್ದಾರೆ.

ಪ್ರಶ್ನೆಪತ್ರಿಕೆ ತಯಾರಿ, ಮುದ್ರಣ, ಸಾಗಣೆ ವೆಚ್ಚವನ್ನು ವಿದ್ಯಾರ್ಥಿಗಳ ಮೇಲೆಯೇ ಹೇರಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷರು ಆದೇಶಿಸಿದ್ದಾರೆ.

ವೆಚ್ಚ ವಸೂಲಿ ಮಾಡುವಂತೆ ಎಲ್ಲಾ ಸರಕಾರಿ ಶಾಲೆಗಳ ಮುಖ್ಯ ಶಿಕ್ಷಕರಿಗೆ ಆದೇಶಿಸಿರುವುದು ಸರಕಾರ ಎಷ್ಟರ ಮಟ್ಟಿಗೆ ದಿವಾಳಿಯೆದ್ದು ಹೋಗಿದೆ ಎನ್ನುವುದಕ್ಕೆ ಉದಾಹರಣೆ ಎಂದು ಅವರು ಕಿಡಿಕಾರಿದ್ದಾರೆ.

ಸರಕಾರಿ ಶಾಲೆಗಳ ಮುಖ್ಯ ಶಿಕ್ಷಕರು ವೆಚ್ಚ ವಸೂಲಿ ಮಾಡಿ, ಆ ಮೊತ್ತವನ್ನು ಇಲಾಖೆ ಉಪ ನಿರ್ದೇಶಕರು (ಆಡಳಿತ), ಇವರ ಖಾತೆಗೆ ಜಮೆ ಮಾಡಬೇಕು ಎಂದು ಅವರು ಫರ್ಮಾನು ಹೊರಡಿಸಿದ್ದಾರೆ ಎಂದು ತರಾಟೆಗೆ ತೆಗೆದುಕೊಂಡಿರುವ ಅವರು, ಗ್ಯಾರಂಟಿ ಕೊಟ್ಟು ಬಡವರ ಉದ್ಧಾರ ಮಾಡುತ್ತಿದ್ದೇವೆ ಎಂದು ಬೀಗುವ ಸರಕಾರಕ್ಕೆ, ಅದೇ ಬಡಮಕ್ಕಳಿಗೆ 50 ರೂ. ಖರ್ಚು ಮಾಡಲು ಗತಿ ಇಲ್ಲವೇ? ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.

ಈಗಾಗಲೇ ಬರದಿಂದ ಕಂಗೆಟ್ಟಿರುವ ರಾಜ್ಯದ ಜನರಿಗೆ ಸರಕಾರ ಬರೆಯ ಮೇಲೆ ಬರೆ ಎಳೆಯುತ್ತಿದೆ. ಕೂಡಲೇ ಈ ಆದೇಶವನ್ನು ವಾಪಸ್ ಪಡೆಯಬೇಕು, ಪರೀಕ್ಷೆ ವೆಚ್ಚವನ್ನು ಸರಕಾರವೇ ಭರಿಸಬೇಕು ಎಂದು ಕುಮಾರಸ್ವಾಮಿ ಅವರು ಒತ್ತಾಯ ಮಾಡಿದ್ದಾರೆ.

andolanait

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

9 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

13 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

13 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

13 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

13 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

13 hours ago