ರಾಜ್ಯ

ರಾಜ್ಯಕ್ಕೆ ಮುಂಗಾರು ಎಂಟ್ರಿಗೆ ಕ್ಷಣಗಣನೆ, ರೈತರಲ್ಲಿ ಮಂದಹಾಸ

ಮೈಸೂರು : ನೈಋತ್ಯ ಮುಂಗಾರು ಜೂನ್ 4 ರಂದು ಕೇರಳವನ್ನು ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ತನ್ನ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.

ಮುಂಗಾರು ಆರಂಭದ ಬೆನ್ನಲ್ಲೇ ಕೇರಳ, ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳಲ್ಲಿ ಮುಂದಿನ 6 ರಿಂದ 7 ದಿನಗಳ ಕಾಲ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಸಾಮಾನ್ಯವಾಗಿ ಜೂನ್ 1 ರ ವೇಳೆಗೆ ಕೇರಳ ತಲುಪಬೇಕಿದ್ದ ಮುಂಗಾರು ಈ ಬಾರಿ ಸಣ್ಣ ಬದಲಾವಣೆಗಳನ್ನು ಕಂಡಿದೆ. ಹವಾಮಾನ ಇಲಾಖೆಯು ಮುಂಗಾರು ಮಾರುತಗಳ ಅಧಿಕೃತ ಆಗಮನವನ್ನು ಘೋಷಿಸಲು ಕೆಲವು ಕಟ್ಟುನಿಟ್ಟಿನ ನಿಯಮಗಳನ್ನು ಪಾಲಿಸುತ್ತದೆ.

ಸದ್ಯ ಕೇರಳದಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ದಟ್ಟವಾದ ಮೋಡಗಳು ಕವಿದಿದ್ದರೂ, ಅರಬ್ಬಿ ಸಮುದ್ರದ ಮೇಲೆ ಬೀಸಬೇಕಾದ ಪಶ್ಚಿಮ ಮಾರುತಗಳ ವೇಗ ಇನ್ನು ಅಗತ್ಯ ಮಟ್ಟವನ್ನು ತಲುಪಿಲ್ಲ. ಈ ತಾಂತ್ರಿಕ ಕಾರಣಗಳಿಂದಾಗಿ ಆರಂಭದ ದಿನಾಂಕವನ್ನು ಮೇ 26 ರಿಂದ ಜೂನ್ 4 ಕ್ಕೆ ಪರಿಷ್ಕರಿಸಲಾಗಿದ್ದರೂ, ಜೂನ್ 8 ರೊಳಗಿನ ಆಗಮನವನ್ನು ಹವಾಮಾನ ತಜ್ಞರು ‘ಸಾಮಾನ್ಯ ಅವಧಿ’ ಎಂದೇ ಪರಿಗಣಿಸುತ್ತಾರೆ.

ಮುಂಗಾರು ಪ್ರವೇಶದ ಪ್ರಭಾವದಿಂದಾಗಿ ಕೇರಳದ ಹಲವು ಜಿಲ್ಲೆಗಳಿಗೆ ಈಗಾಗಲೇ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ. ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲೂ ಜೂನ್ 7 ರವರೆಗೆ ಭಾರಿ ಮಳೆಯಾಗುವ ಮುನ್ಸೂಚನೆ ಇರುವುದರಿಂದ ರೈತರು ಬಿತ್ತನೆ ಕಾರ್ಯಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬಹುದು.

ಆಂದೋಲನ ಡೆಸ್ಕ್

Recent Posts

ಖಾಸಗಿ ಆಸ್ಪತ್ರೆಗೆ ಸೋನಮ್‌ ವಾಂಗ್ಚುಕ್‌ ಸ್ಥಳಾಂತರಕ್ಕೆ ದೆಹಲಿ ಹೈಕೋರ್ಟ್‌ ಸೂಚನೆ

ನವದೆಹಲಿ: ಪರೀಕ್ಷಾ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ಜೂನ್.‌28ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸೋನಮ್‌ ವಾಂಗ್ಚುಕ್‌ ಅವರನ್ನು ಇಲ್ಲಿನ ಸಫ್ದರ್‌ಜಂಗ್‌…

14 mins ago

ಹಾರಂಗಿ ಜಲಾಶಯ ಭರ್ತಿಗೆ 8 ಅಡಿ ಬಾಕಿ: ಅನ್ನದಾತರ ಮೊಗದಲ್ಲಿ ಮಂದಹಾಸ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು, ಹಾರಂಗಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಹಾರಂಗಿ ಜಲಾಶಯಕ್ಕೆ 3 ಸಾವಿರಕ್ಕೂ…

1 hour ago

ಹುಣಸೂರು: ಇಬ್ಬರು ಮಕ್ಕಳು, ಹೆಂಡತಿಯನ್ನು ಕೊಂದು ಪತಿ ಆತ್ಮಹತ್ಯೆ

ಮೈಸೂರು: ಇಬ್ಬರು ಮಕ್ಕಳು ಹಾಗೂ ಹೆಂಡತಿಯನ್ನು ಕೊಂದು ಬಳಿಕ ಪತಿಯೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ನಡೆದಿದೆ.…

1 hour ago

ಇಂದು ಚಲೋ ಸಂಸದ್ ಮುಂದುವರಿಯಲಿದೆ: ಅಭಿಜಿತ್‌ ದೀಪ್ಕೆ ಘೋಷಣೆ

ನವದೆಹಲಿ: ಇಂದು ತಮ್ಮ ಪ್ರತಿಭಟನೆ ಹಾಗು ಚಲೋ ಸಂಸದ್‌ ಮುಂದುವರಿಯಲಿದೆ ಎಂದು ಕಾಕ್ರೋಚ್‌ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್‌ ದೀಪ್ಕೆ…

5 hours ago

ಓದುಗರ ಪತ್ರ: ಮಾದಾಪುರ ಪ್ರೌಢಶಾಲೆಗೆ ಇಂಗ್ಲಿಷ್ ಶಿಕ್ಷಕರನ್ನು ನೇಮಿಸಿ

ಹೆಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಇಂಗ್ಲಿಷ್ ಶಿಕ್ಷಕರು ಇಲ್ಲದೆ ವಿದ್ಯಾರ್ಥಿಗಳು ಈ ಪ್ರೌಢಶಾಲೆಗೆ ಸೇರಲು ಹಿಂದೇಟು ಹಾಕುತ್ತಿದ್ದಾರೆ.…

10 hours ago

ಓದುಗರ ಪತ್ರ: ದೇವೇಗೌಡರ ಹಿಂದಿನ ಶಕ್ತಿ ಚನ್ನಮ್ಮ

ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರ ಪತ್ನಿ ಚನ್ನಮ್ಮ ನವರು ಅವರ ರಾಜಕೀಯ ಜೀವನದಲ್ಲಿ ದೊಡ್ಡ ಶಕ್ತಿಯಾಗಿ ನಿಂತಿದ್ದರು. ಅಂದು ತಮ್ಮ…

10 hours ago