ರಾಜ್ಯ

ದೇಶ ಅಂದರೆ, ದೇಶದೊಳಗಿರುವ ಜನ: ಸಿಎಂ ಸಿದ್ದರಾಮಯ್ಯ

ನಾನು ಸಂಗೊಳ್ಳಿ ರಾಯಣ್ಣ-ಕಿತ್ತೂರು ಚನ್ನಮ್ಮನ ಅಭಿಮಾನಿ: ಸಿ.ಎಂ.ಸಿದ್ದರಾಮಯ್ಯ

ಕಿತ್ತೂರು: ದೇಶ ಅಂದರೆ, ದೇಶದೊಳಗಿರುವ ಜನ. ಯಾವುದೇ ಧರ್ಮದವರಿರಲಿ, ಜಾತಿಯವರಿರಲಿ ಅವರನ್ನು ಪ್ರೀತಿಬೇಕು ಎನ್ನುವುದನ್ನು ಚನ್ನಮ್ಮ-ರಾಯಣ್ಣ ಕಲಿಸಿಕೊಟ್ಟಿದ್ದಾರೆ. ಇದನ್ನು ನಾವು-ನೀವೆಲ್ಲಾ ಪಾಲಿಸಬೇಕು ಎಂದು
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.

200ನೇ ವರ್ಷದ ಚನ್ನಮ್ಮನ ಕಿತ್ತೂರು ಉತ್ಸವವನ್ನು ವರ್ಣರಂಜಿತ ವೇದಿಕೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕಿತ್ತೂರು ರಾಣಿ ಚನ್ನಮ್ಮನ ಉತ್ಸವವನ್ನು ಸರ್ಕಾರ ಆಚರಿಸಬೇಕು ಎಂದು ಮೊದಲ ಬಾರಿಗೆ ಆದೇಶಿಸಿದ್ದು ನಮ್ಮ ಸರ್ಕಾರ. ಇವತ್ತಿನ‌ ಪೀಳಿಗೆಗೆ ಚನ್ನಮ್ಮನ ಇತಿಹಾಸ ಗೊತ್ತಾಗಬೇಕು ಎನ್ನುವ ಕಾರಣದಿಂದ ನಾವು ಈ ನಿರ್ಧಾರ ಮಾಡಿದೆವು. ಇತಿಹಾಸ ಗೊತ್ತಿಲ್ಲದವರು ಇತಿಹಾಸ ನಿರ್ಮಿಸಲಾಗದು ಎನ್ನುವ ಅಂಬೇಡ್ಕರ್ ಅವರ ಮಾತನ್ನು ಉಲ್ಲೇಖಿಸಿದರು.

ರಾಣಿ ಚನ್ನಮ್ಮ, ರಾಣಿ ಅಬ್ಬಕ್ಕ, ಸಂಗೊಳ್ಳಿ ರಾಯಣ್ಣ, ಝಾನ್ಸಿ ರಾಣಿ ಮುಂತಾದವರ ಹೋರಾಟ ಮತ್ತು ಆಶಯಗಳನ್ನು ನಾವು ಅರ್ಥ ಮಾಡಿಕೊಳ್ಳಬೇಕು. ಬ್ರಿಟೀಷರಿಗೆ ಸಿಂಹ ಸ್ವಪ್ನವಾಗಿದ್ದ ಹೋರಾಟಗಾರರಿಂದ ದೇಶದ ಜನರನ್ನು ಪ್ರೀತಿಸುವುದನ್ನು ನಾವು ಕಲಿಯಬೇಕು. ದೇಶ ಅಂದರೆ ದೇಶದ ಜನ. ಯಾವುದೇ ಧರ್ಮದವರಿರಲಿ, ಯಾವುದೇ ಜಾತಿಯವರಿರಲಿ ಎಲ್ಲರೂ ನಮ್ಮ ದೇಶದ ಜನ. ದೇಶದ ಜನರನ್ನು ಪ್ರೀತಿಸುವುದೇ ನಿಜವಾದ, ಸರಿಯಾದ ದೇಶಪ್ರೇಮ ಎಂದರು.

ಬಸವಣ್ಣನವರೂ ಇದನ್ನೇ ಹೇಳಿದ್ದರು. ಜಾತಿ, ಧರ್ಮದ ತಾರತಮ್ಯ ಇಲ್ಲದಂತೆ ಮನುಷ್ಯ ಪ್ರೀತಿಯನ್ನು ಸಾರಿದವರು ಬಸವಣ್ಣ. ಹೀಗಾಗಿ ನಮ್ಮ ಸರ್ಕಾರ ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸಿತು ಎಂದರು.

ಜಾತಿ, ಧರ್ಮದ ಅಸಮಾನತೆ ಸಮಾಜದಲ್ಲಿ ಇರುವಷ್ಟೂ ದಿನ ಸಾಮಾಜಿಕ ನ್ಯಾಯ ಬರಲು ಸಾಧ್ಯವಿಲ್ಲ. ಇದು ಸಾಧ್ಯವಾಗಬೇಕಾದರೆ ರಾಜಕೀಯ ಸ್ವಾತಂತ್ರ್ಯದ ಜೊತೆಗೆ ಸಾಮಾಜಿಕ ಮತ್ತು ಆರ್ಥಿಕ ಸ್ವಾತಂತ್ರ್ಯ ಎಲ್ಲಾ ಜಾತಿ, ಧರ್ಮ, ಎಲ್ಕಾ ವರ್ಗದವರಿಗೂ ಸಿಗಬೇಕು ಎಂದರು.

ದೇಶದ ಜನರನ್ನು ಪ್ರೀತಿಸಿ, ದೇಶದ ಜನರ ಸ್ವಾತಂತ್ರ್ಯ ರಕ್ಷಣೆಗಾಗಿ ರಾಣಿ ಚನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣ ಪ್ರಾಣತ್ಯಾಗ ಮಾಡಿದ್ದಾರೆ. ಇದು ಅತ್ಯುನ್ನತವಾದ ತ್ಯಾಗ. ಇದನ್ನು ನಾವು, ನೀವು, ಇವತ್ತಿನ‌ ಪೀಳಿಗೆ ಪಾಲಿಸಬೇಕು ಎಂದರು.

ಮಡಿವಾಳ ರಾಜ ಯೋಗೀಂದ್ರ ಸ್ವಾಮೀಜಿ ಕಲ್ಮಠ, ನಿಚ್ಚಣಿಕೆಯ ಗುರು ಮಡಿವಾಳೇಶ್ವರ ಮಠದ ಪಂಚಾಕ್ಷರಿ ಮಹಾಸ್ವಾಮಿಗಳು, ಕೂಡಲ ಸಂಗಮದ ಪಂಚಮಸಾಲಿ ಜಗದ್ಗುರು ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಅವರ ದಿವ್ಯ ಸಾನ್ನಿಧ್ಯದಲ್ಲಿ ನಡೆದ ಸಮಾರಂಭದ ಅಧ್ಯಕ್ಷತೆಯನ್ನು ಶಾಸಕರಾದ ಬಾಬಾಸಾಹೇಬ ಪಾಟೀಲ ಅವರು ವಹಿಸಿದ್ದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ ತಂಗಡಗಿ, ಮುಖ್ಯ ಸಚೇತಕರಾದ ಅಶೋಕ ಮ.ಪಟ್ಟಣ, ಶಾಸಕರಾದ ಮಹಂತೇಶ ಕೌಜಲಗಿ, ಪ್ರಕಾಶ ಬಾ ಹುಕ್ಕೇರಿ, ಭರಮಗೌಡ ಕಾಗೆ, ವಿಶ್ವಾಸ್ ವೈದ್ಯ, ಆಸಿಫ್ ಸೇಠ್, ಬುಡಾ ಅಧ್ಯಕ್ಷರಾದ ಲಕ್ಷ್ಮಣ್ ರಾವ್ ಜಿಂಗಳೆ , ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪುರುಷೋತ್ತಮ ಬಿಳಿಮಲೆ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಬೆಳಗಾವಿಯಲ್ಲಿ ಮಳೆಗಾಲದ ಅಧಿವೇಶನ

ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…

48 mins ago

ಕಾಕ್ರೋಚ್‌ ಪಾರ್ಟಿಯ ಎಕ್ಸ್‌, ಇನ್‌ಸ್ಟಾ, ವೆಬ್‌ಸೈಟ್‌ಗೆ ತಡೆ ; ಅಭಿಜಿತ್‌ ದಿಪ್ಕೆ

ನವದೆಹಲಿ :  ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು  ಕಾಕ್ರೋಚ್​ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ.  ಈ…

2 hours ago

ಲಾರಿ ಹಾಗೂ ಕ್ರೂಸರ್‌ ವಾಹನದ ನಡುವೆ ಡಿಕ್ಕಿ: ಒಂದೇ ಕುಟುಂಬದ ಐವರು ಸಾವು

ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…

4 hours ago

ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ನಿಗಾ: ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌…

4 hours ago

ಚೀನಾದಲ್ಲಿ ಕಲ್ಲಿದ್ದಲು ಗಣಿ ಸ್ಫೋಟ: 82 ಜನರು ಸಾವು

ಬೀಜಿಂಗ್:‌ ಉತ್ತರ ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಅನಿಲ ಸ್ಫೋಟದಲ್ಲಿ 82 ಜನರು ಸಾವನ್ನಪ್ಪಿದ್ದಾರೆ. ಇದು ಇತ್ತೀಚಿನ ವರ್ಷಗಳಲ್ಲಿ ದೇಶದಲ್ಲಿ…

5 hours ago

ನಟ ದರ್ಶನ್‌ ಆತ್ಮಹತ್ಯೆಗೆ ಯತ್ನ ವದಂತಿ: ಸಚಿವ ಪರಮೇಶ್ವರ್‌ ಹೇಳಿದ್ದಿಷ್ಟು.!

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ನಟ ದರ್ಶನ್‌ ಜೈಲಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆಂಬ ವದಂತಿ ಕುರಿತು ಗೃಹ…

6 hours ago