ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿರುವ ಚಿತ್ರನಟ ದರ್ಶನ್ಗೆ ಬೆಂಗಳೂರು ಬಿಟ್ಟು ತೆರಳದಂತೆ ಹೈಕೋರ್ಟ್ ವಿಧಿಸಿದ್ದ ಷರತ್ತನ್ನು ಸಡಲಿಕೆ ಮಾಡಿ ಆದೇಶ ನೀಡಿದೆ.
ಈ ಹಿಂದೆ ಇದೇ ಪ್ರಕರಣದಲ್ಲಿ ದರ್ಶನ್ ಹಾಗೂ ಇತರೆ ಆರೋಪಿಗಳಿಗೆ ಹೈಕೋರ್ಟ್ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ಅವರಿದ್ದ ಏಕಸದಸ್ಯ ಪೀಠ ಕೆಲವು ಷರತ್ತುಗಳನ್ನು ವಿಧಿಸಿ ಜಾಮೀನು ಮಂಜೂರು ಮಾಡಿತ್ತು. ಬೆಂಗಳೂರು ಬಿಟ್ಟು ತೆರಳಬಾರದು ಎಂಬುದು ಪ್ರಮುಖ ಷರತ್ತುಗಳಲ್ಲಿ ಒಂದಾಗಿತ್ತು.
ಷರತ್ತು ಸಡಿಲಿಸುವಂತೆ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದ ದರ್ಶನ್ ಮನವಿಗೆ ಸ್ಪಂದಿಸಿ ಸಡಿಲಿಕೆ ನೀಡಿದೆ. ಇದು ದರ್ಶನ್ಗೆ ಮಾತ್ರ ಅನ್ವಯವಾಗುತ್ತದೆ ಎಂದು ನ್ಯಾಯಮೂರ್ತಿ ಆದೇಶದಲ್ಲಿ ಸ್ಪಷ್ಟಪಡಿಸಿದ್ದಾರೆ.
ಚಿತ್ರೀಕರಣಕ್ಕಾಗಿ ಬೆಂಗಳೂರು ಬಿಟ್ಟು ಬೇರೆಡೆ ಹೋಗಲು ಅವಕಾಶಕ್ಕೆ ಮನವಿ ಮಾಡಿದ್ದ ದರ್ಶನ್ಗೆ ಸದ್ಯ ಬೆಂಗಳೂರು ಬಿಟ್ಟು ಹೋಗಲು ಹೈಕೋರ್ಟ್ ಅವಕಾಶ ನೀಡಿದೆ. ಕೋರ್ಟ್ ಅನುಮತಿಯಿಲ್ಲದೇ ದೇಶ ಬಿಟ್ಟು ತೆರಳುವಂತಿಲ್ಲ ಎಂದು ನ್ಯಾಯಾಲಯ ಹೇಳಿದೆ.
ಬಿ.ಟಿ.ಮೋಹನ್ ಕುಮಾರ್ ಮಂಡ್ಯ: ಮಂಡ್ಯ ವಿವಿ ಆರಂಭವಾದಾಗಿನಿಂದ ಒಂದಲ್ಲಾ ಒಂದು ಸಮಸ್ಯೆ ಎದುರಾಗುತ್ತಿದ್ದು, ವಿವಿಗೆ ೧೨ಬಿ ಮಾನ್ಯತೆ ಸಿಕ್ಕಿಲ್ಲದಿರುವುದು ಹಲವು…
ನವೀನ್ ಡಿಸೋಜ ಮಂಗಳೂರು ವಿವಿ ಅಧೀನದಲ್ಲಿದ್ದ ಕೊಡಗು ಈಗ ಪ್ರತ್ಯೇಕ ವಿವಿಯಾಗಿ ರೂಪುಗೊಂಡಿದೆ. ಆದರೆ, ಆಡಳಿತಾತ್ಮಕ ಹುದ್ದೆ ಭರ್ತಿಯಾಗದಿರುವುದು ಮತ್ತು…
ಚಾಮರಾಜನಗರ ವಿವಿ ಪ್ರಾರಂಭವಾಗಿ ೩ ವರ್ಷಗಳನ್ನು ಪೂರೈಸಿದೆ. ಈ ಬಾರಿ ಪ್ರಪ್ರಥಮ ಘಟಿಕೋತ್ಸವದ ಸಂಭ್ರಮದಲ್ಲಿದೆ. ಆದರೆ ಇನ್ನೂ ಅತಿಥಿ ಅಧ್ಯಾಪಕರು,…
ಗಿರೀಶ್ ಹುಣಸೂರು ರಾಜ್ಯದ ಮೊತ್ತ ಮೊದಲ ವಿವಿ ಎಂಬ ಹೆಗ್ಗಳಿಕೆಯ ಮೈಸೂರು ವಿವಿಗೆ ೧೧೦ ವರ್ಷಗಳಷ್ಟು ಹಿರಿತನವಿದೆ. ಆದರೆ, ಕೆಲವು…
ಮೈಸೂರು ವಿವಿ ಕ್ರಾಫರ್ಡ್ ಭವನದ ಎದುರಿನ ರಸ್ತೆ ಬದಿಯಲ್ಲಿರುವ ಮರ ಒಣಗಿದೆ. ಈ ಮಾರ್ಗದಲ್ಲಿ ಪ್ರತಿನಿತ್ಯ ನೂರಾರು ವಾಹನಗಳು ಹಾಗೂ…
ದಕ್ಷಿಣ ಭಾರತದ ಕೋಗಿಲೆ ಎಂದೇ ಜನಪ್ರಿಯರಾಗಿದ್ದ, ಎಸ್. ಜಾನಕಿಯವರು ತಮ್ಮ ಅಂತಿಮ ಇಚ್ಛೆಯಂತೆ ಕನ್ನಡದ ನೆಲದಲ್ಲಿ ಅದರಲ್ಲೂ ಸಾಂಸ್ಕೃತಿಕ ನಗರಿ…