ರಾಜ್ಯ

ಸಂಸದ ಪ್ರತಾಪ್‌ ಸಿಂಹ ಬಗ್ಗೆ ಹೇಳಿಕೆ ನೀಡದಂತೆ ʼಕೈʼ ವಕ್ತಾರ ಎಂ.ಲಕ್ಷ್ಮಣ್‌ಗೆ ಕೋರ್ಟ್‌ ನೋಟಿಸ್‌!

ಬೆಂಗಳೂರು: ಪದೇ ಪದೇ ಸಂಸದ ಪ್ರತಾಪ್ ಸಿಂಹ ವಿರುದ್ಧ ಹೇಳಿಕೆ ನೀಡುತ್ತಲೇ, ವಾಗ್ಧಾಳಿ ನಡೆಸುತ್ತಿದ್ದಂತ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಗೆ ಕೋರ್ಟ್ ಚಾಟಿ ಬೀಸಿದೆ. ಪ್ರತಾಪ್ ಸಿಂಹ ವಿರುದ್ಧ ಹೇಳಿಕೆ ನೀಡದಂತೆ ಕೋರ್ಟ್ ನೋಟಿಸ್ ನೀಡಿ ಸೂಚಿಸಿದೆ.

ಪ್ರತಾಪ್ ಸಿಂಹ ವಿರುದ್ಧ ವಾಗ್ಧಾಳಿ ನಡೆಸುತ್ತಿದ್ದಂತ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ವಿರುದ್ಧ ನ್ಯಾಯಾಲಯಕ್ಕೆ ದೂರು ನೀಡಲಾಗಿತ್ತು.

ಈ ದೂರನ್ನು ಪರಿಶೀಲಿಸಿದಂತ ಬೆಂಗಳೂರಿನ ಸಿಟಿ ಸಿವಿಲ್, ಸೆಷನ್ಸ್ ಕೋರ್ಟ್ ಈಗ ಮಧ್ಯಂತರ ತಡೆಯಾಜ್ಞೆಯನ್ನು ನೀಡಿದೆ.

ಪ್ರತಾಪ್ ಸಿಂಹ ವಿರುದ್ಧ ಸುದ್ದಿಗೋಷ್ಠಿ ನಡೆಸದಂತೆ ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಗೆ ಸೂಚಿಸಿದೆ. ಅಲ್ಲದೇ ಫೆಬ್ರವರಿ.13ರಂದು ನ್ಯಾಯಾಲಯಲ್ಕೆ ಹಾಜರಾಗುವಂತೆ ನೋಟೀಸ್ ನಲ್ಲಿ ತಿಳಿಸಿದೆ.

ಇನ್ನೂ ಪ್ರತಾಪ್ ಸಿಂಹ ವಿರುದ್ಧ ಯಾವುದೇ ಹೇಳಿಕೆ ನೀಡದಂತೆಯೂ ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ್ ಗೆ ತಿಳಿಸಲಾಗಿದೆ. ಈ ಮೂಲಕ ಸಂಸದ ಪ್ರತಾಪ್ ಸಿಂಹ ವಿರುದ್ಧ ಹರಿಹಾಯುತ್ತಿದ್ದಂತ ಎಂ.ಲಕ್ಷ್ಮಣ್ ಗೆ ಕೋರ್ಟ್ ಬಿಸಿ ಮುಟ್ಟಿಸಿದೆ.

andolanait

Recent Posts

ಐತಿಹಾಸಿಕ ಮಳವಳ್ಳಿ ಸಿಡಿ ಜಾತ್ರಾ ಮಹೋತ್ಸವ ಸಂಪನ್ನ

ಮಳವಳ್ಳಿ : ಪಟ್ಟಣದ ಗ್ರಾಮ ದೇವತೆಗಳಾದ ಶ್ರೀ ಪಟ್ಟಲದಮ್ಮ-ದಂಡಿನ ಮಾರಮ್ಮ ಶಕ್ತಿ ದೇವತೆಗಳ ಸಿಡಿ ಜಾತ್ರಾ ಮಹೋತ್ಸವ ಸಂಪನ್ನಗೊಂಡಿತು. ಜ.27ರಿಂದ…

3 mins ago

ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ : ತನಿಖೆಗೆ ಎಸ್‌ಐಟಿ ರಚನೆ

ಬೆಂಗಳೂರು : ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಛಿಡೆಂಟ್ ಗ್ರೂಪ್ ಅಧ್ಯಕ್ಷ ಮತ್ತು ಸಂಸ್ಥಾಪಕ ಸಿ.ಜೆ.ರಾಯ್ ಅವರು ಶುಕ್ರವಾರ ತಮ್ಮ…

20 mins ago

ಕುಸಿದ ಚಿನ್ನ, ಬೆಳ್ಳಿ ಬೆಲೆ

ಬೆಂಗಳೂರು : ಚಿನ್ನ ಮತ್ತು ಬೆಳ್ಳಿ ಬೆಲೆಗಳ ಮಹಾಕುಸಿತ ಮುಂದುವರಿದಿದೆ. ಶುಕ್ರವಾರ ಗ್ರಾಮ್‌ಗೆ 800 ರೂನಷ್ಟು ಕಡಿಮೆಗೊಂಡಿದ್ದ ಚಿನ್ನದ ಬೆಲೆ…

32 mins ago

ಸಿ.ಜೆ.ರಾಯ್ ಆತ್ಮಹತ್ಯೆ ಪ್ರಕರಣ : ಡೈರಿಯಲ್ಲಿ ಪ್ರಭಾವಿ ಶಾಸಕರು, ಚಿತ್ರರಂಗದವರ ಹೆಸರು

ಬೆಂಗಳೂರು : ಖ್ಯಾತ ಉದ್ಯಮಿ ಮತ್ತು ಕಾನ್ಛಿಡೆಂಟ್ ಗ್ರೂಪ್ ಮಾಲೀಕ ಸಿ.ಜೆ.ರಾಯ್ ಅವರ ಆತ್ಮಹತ್ಯೆ ಪ್ರಕರಣ ಕ್ಷಣ ಕ್ಷಣಕ್ಕೂ ಹೊಸ…

1 hour ago

ಮೈಸೂರಲ್ಲಿ ಡ್ರಗ್ಸ್‌ ಪತ್ತೆ | ಸರ್ಕಾರ, ಪೊಲೀಸ್‌ ಮತ್ತೇ ವಿಫಲ ; ಯದುವೀರ್‌ ಅಸಮಾಧಾನ

ಮೈಸೂರು : ನಗರದಲ್ಲಿ ಕೋಟ್ಯಾಂತರ ರೂ. ಮೊತ್ತದ ಡ್ರಗ್ಸ್ ತಯಾರಿಕೆ ನಡೆಯುತ್ತಿದ್ದರೂ ಪತ್ತೆ ಹಚ್ಚುವಲ್ಲಿ ನಗರದ ಪೊಲೀಸರು ಸಂಪೂರ್ಣ ವಿಫಲರಾಗಿದ್ದಾರೆ…

2 hours ago

ಮಹಾರಾಷ್ಟ್ರದ ಮೊದಲ ಮಹಿಳಾ ಉಪಮುಖ್ಯಮಂತ್ರಿ ಸುನೇತ್ರಾ ಪ್ರಮಾಣ ವಚನ

ಮುಂಬೈ : ಮಹಾರಾಷ್ಟ್ರದ ರಾಜಕೀಯದಲ್ಲಿ ಒಂದು ಐತಿಹಾಸಿಕ ಕ್ಷಣ. ಎನ್‌ಸಿಪಿ ನಾಯಕಿ ದಿ.ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್…

2 hours ago