ಬೆಂಗಳೂರು: ಜೆಡಿಎಸ್ ಪಕ್ಷದಿಂದ ಉಚ್ಚಾಟನೆಯಾದ ಸಿ ಎಂ ಇಬ್ರಾಹಿಂ ಅವರಿಗೆ ಜೆಡಿಎಸ್ ಪಕ್ಷದ ಯಾವುದೇ ಚಿಹ್ನೆಯನ್ನು ಬಳಸದಂತೆ ನ್ಯಾಯಾಲಯ ಆದೇಶ ನೀಡಿದೆ.
ಉಚ್ಚಾಟನೆಯಾದರೂ ಸಿಎಂ ಇಬ್ರಾಹಿಂ ಜೆಡಿಎಸ್ ಪಕ್ಷದ ಚಿನ್ನೆ ಬಳಸಿದ ವಿಚಾರವಾಗಿ ನ್ಯಾಯಾಲಯದ ಮಹತ್ವದ ಆದೇಶವನ್ನು ನೀಡಿದೆ. ಯಾವುದೇ ಪಕ್ಷದ ಚಿಹ್ನೆ ಬಳಸದಂತೆ ಕೋರ್ಟ್ ಆದೇಶ ನೀಡಿದ್ದು, ಜೆಡಿಎಸ್ ಪಕ್ಷದ ಚಿಹ್ನೆ, ಲೆಟರ್ ಹೆಡ್ ಬಳಕೆ ಮಾಡುವಂತಿಲ್ಲ ಹಾಗೂ ಪಕ್ಷದ ಕುರಿತಾಗಿ ಮಾಧ್ಯಮಗೋಷ್ಠಿ ನಡೆಸುವಂತಿಲ್ಲ. ಪದಾಧಿಕಾರಿಗಳನ್ನೂ ನೇಮಕ ಮಾಡುವಂತಿಲ್ಲ ಎಂದು ಸಿಟಿ ಸಿವಿಲ್ ಕೋರ್ಟ್ ಆದೇಶ ನೀಡಿದೆ.
ಸಿಎಂ ಇಬ್ರಾಹಿಂ ಉಚ್ಚಾಟನೆ ಬಳಿಕ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಅವರನ್ನು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ವಿಧಾನಸಭಾ ಚುನಾವಣೆಗೂ ಮುನ್ನ 8ನೇ ಸೆಪ್ಟೆಂಬರ್ 2022ರಂದು ನಡೆದ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಸಿಎಂ ಇಬ್ರಾಹಿಂ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ಘೋಷಣೆ ಮಾಡಲಾಗಿತ್ತು. 2023ರ ನವೆಂಬರ್ 16ರಂದು 2023ರಂದು ಪಕ್ಷದಿಂದ ಉಚ್ಚಾಟಿಸಲಾಗಿತ್ತು.
ನ್ಯೂಯಾರ್ಕ್: ಅಮೆರಿಕದ ಕ್ಯಾಲಿಫೋರ್ನಿಯಾದ ಬರ್ಕ್ಲಿಯಲ್ಲಿ ಕಾಣೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ (22) ಅವರ ಮೃತದೇಹ ಪತ್ತೆಯಾಗಿದೆ ಎಂದು ಸ್ಯಾನ್…
ಹೊಸದಿಲ್ಲಿ : ವಿವಾಹಪೂರ್ವ ದೈಹಿಕ ಸಂಬಂಧಗಳಲ್ಲಿ ಅತ್ಯಂತ ಜಾಗರೂಕತೆ ವಹಿಸಬೇಕು ಎಂದು ಸುಪ್ರೀಂ ಕೋರ್ಟ್ ಎಚ್ಚರಿಕೆ ನೀಡಿದೆ. ಮದುವೆಯ ಸುಳ್ಳು…
ಮೈಸೂರು : ಎಲಾನ್ ಮಸ್ಕ್ ಒಡೆತನದ ಸಾಮಾಜಿಕ ಜಾಲತಾಣ ಎಕ್ಸ್ (X, ಹಿಂದಿನ ಟ್ವಿಟರ್) ಇಂದು ಸಂಜೆ (ಫೆಬ್ರವರಿ 16)…
ಬೆಂಗಳೂರು : ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ರೈತರ ಮೇಲೆ ಪರಿಣಾಮ ಬೀರುವ ಭಾರತ-ಅಮೆರಿಕ ವ್ಯಾಪಾರ…
ಮಲ್ಕುಂಡಿ : ಕಾಡಾನೆಗಳ ದಾಳಿಯಿಂದ ಗುಡಿಸಲು ಹಾಗೂ ಸೋಲಾರ್ ತಂತಿ ಬೇಲಿ ನಾಶವಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ದೇವರಾಯಶೆಟ್ಟಿಪುರ ಗ್ರಾಮದಲ್ಲಿ…
ಮೈಸೂರು : ನಗರದಲ್ಲಿ ಅಪರಾಧ ನಿಯಂತ್ರಣ ಮತ್ತು ಪತ್ತೆ ಸಂಬಂಧ ರಾಜ್ಯ ಪೊಲೀಸ್ ಇಲಾಖೆಯ ಅಪರಾಧ ಮತ್ತು ತಾಂತ್ರಿಕ ಸೇವೆ…