ರಾಜ್ಯ

ಶಾಸಕ ವಿನಯ್‌ ಕುಲಕರ್ಣಿ ಸೇರಿ 17 ಅಪರಾಧಿಗಳಿಗೆ ನಾಳೆ ಶಿಕ್ಷೆ ಪ್ರಮಾಣ ಪ್ರಕಟ: ಆದೇಶ ಕಾಯ್ದಿರಿಸಿದ ಕೋರ್ಟ್‌

ಬೆಂಗಳೂರು: ಧಾರವಾಡದ ಹೆಬ್ಬಳ್ಳಿ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದ ಅಪರಾಧಿಗಳಿಗೆ ವಿಶೇಷ ನ್ಯಾಯಾಲಯ ನಾಳೆ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಲಿದೆ.

ಇಂದು ವಾದ-ಪ್ರತಿವಾದ ಆಲಿಸಿದ ಬೆಂಗಳೂರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರು ಅಪರಾಧಿಗಳ ಹೇಳಿಕೆಯನ್ನು ದಾಖಲಿಸಿಕೊಂಡು ಶಿಕ್ಷೆಯ ಪ್ರಮಾಣವನ್ನು ನಾಳೆ ಪ್ರಕಟಿಸುವುದಾಗಿ ಮುಂದೂಡಿದರು. ಹೀಗಾಗಿ ಯೋಗೀಶ್‍ಗೌಡ ಕೊಲೆ ಪ್ರಕರಣದ 17 ಅಪರಾಧಿಗಳಿಗೆ ನ್ಯಾಯಾಲಯ ನೀಡುವ ಶಿಕ್ಷೆ ಅತ್ಯಂತ ಮಹತ್ವವನ್ನು ಪಡೆದುಕೊಂಡಿದೆ.

ಇದಕ್ಕೂ ಮುನ್ನ ನ್ಯಾಯಾಲಯದಲ್ಲಿ ಎರಡೂ ಕಡೆ ಭಾರೀ ವಾದ ಮತ್ತು ಪ್ರತಿವಾದ ನಡೆಯಿತು. ಸಿಬಿಐ ಪರ ಹಿರಿಯ ವಕೀಲ ಎಸ್.ಪಿ.ರಾಜು, ಅಪರಾಧಿಗಳ ಪರ ಹಿರಿಯ ವಕೀಲರಾದ ಶಂಕರಪ್ಪ, ಶ್ಯಾಂಸುಂದರ್ ಮತ್ತು ಬಾಲನ್ ವಾದ ಮಂಡನೆ ಮಾಡಿದರು.

ಯೋಗೀಶ್ ಗೌಡ ಕೊಲೆ ಪ್ರಕರಣ ವಿಚಾರಣೆಯ ಅಂತಿಮ ಹಂತದಲ್ಲಿ, ಎಲ್ಲ ಆರೋಪಿಗಳಿಗೂ ತಮಗೆ ಸಂಬಂಧಿಸಿದಂತೆ ಏನಾದರೂ ಹೇಳಿಕೊಳ್ಳುವ ಅವಕಾಶ ನೀಡಲಾಗಿತ್ತು. ಈ ವೇಳೆ ಪ್ರಮುಖ ಆರೋಪಿ, ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿ ಎಲ್ಲಾ ಆರೋಪಿಗಳು ನ್ಯಾಯಾಧೀಶರ ಮುಂದೆ ಕೈಮುಗಿದು ಭಾವುಕರಾಗಿ ಮಾತನಾಡಿದರು.

ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಜಡ್ಜ್ ಮುಂದೆ ಕೈಮುಗಿದು ಕಣ್ಣೀರು ಹಾಕಿದ್ದಾರೆ. ನಾನು 27 ವರ್ಷಗಳಿಂದ ರಾಜಕೀಯದಲ್ಲಿ ಇದ್ದೇನೆ. ನಾನು ಯಾರಿಗೂ ತೊಂದರೆ ಮಾಡಿಲ್ಲ. ನನ್ನ ಕುಟುಂಬದಲ್ಲಿ ಇಬ್ಬರು ಹೆಣ್ಣು ಮಕ್ಕಳು, ಇಬ್ಬರು ಗಂಡು ಮಕ್ಕಳು ಇದ್ದಾರೆ. ನಾನು ಮೂರು ಬಾರಿ ಶಾಸಕರಾಗಿದ್ದೇನೆ. ರಾಜಕೀಯವಾಗಿ ನನ್ನನ್ನು ಸಹಿಸಲಾರದವರು ಪಿತೂರಿ ಮಾಡಿ ನನ್ನ ಮೇಲೆ ಪ್ರಕರಣ ಹಾಕಿಸಿದ್ದಾರೆ. ಬೇಕಾದರೆ ಧಾರವಾಡದಲ್ಲಿ ಯಾರನ್ನೆ? ಕೇಳಿ, ನಾನು ಯಾರಿಗೂ ಏನೂ ತೊಂದರೆ ಮಾಡಿಲ್ಲ. ನಾನು ಕೃಷಿಕ, ನನ್ನ ಬಳಿ ಸುಮಾರು 3 ಸಾವಿರ ಹಸುಗಳು ಇವೆ. ಅವುಗಳ ಪೋಷಣೆ ಮಾಡಬೇಕು. ನಾನು ತಪ್ಪು ಮಾಡಿಲ್ಲ ಸಾರ್ ಎಂದು ಕಣ್ಣಿ?ರು ಹಾಕುತ್ತಾ ನ್ಯಾಯಾಧೀಶರ ಎದುರು ಮನವಿ ಮಾಡಿಕೊಂಡರು.

 

ಆಂದೋಲನ ಡೆಸ್ಕ್

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

5 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

6 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

7 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

9 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

10 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

11 hours ago