Vinay Kulkarni
ಬೆಂಗಳೂರು: ಧಾರವಾಡದ ಹೆಬ್ಬಳ್ಳಿ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದ ಅಪರಾಧಿಗಳಿಗೆ ವಿಶೇಷ ನ್ಯಾಯಾಲಯ ನಾಳೆ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಲಿದೆ.
ಇಂದು ವಾದ-ಪ್ರತಿವಾದ ಆಲಿಸಿದ ಬೆಂಗಳೂರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರು ಅಪರಾಧಿಗಳ ಹೇಳಿಕೆಯನ್ನು ದಾಖಲಿಸಿಕೊಂಡು ಶಿಕ್ಷೆಯ ಪ್ರಮಾಣವನ್ನು ನಾಳೆ ಪ್ರಕಟಿಸುವುದಾಗಿ ಮುಂದೂಡಿದರು. ಹೀಗಾಗಿ ಯೋಗೀಶ್ಗೌಡ ಕೊಲೆ ಪ್ರಕರಣದ 17 ಅಪರಾಧಿಗಳಿಗೆ ನ್ಯಾಯಾಲಯ ನೀಡುವ ಶಿಕ್ಷೆ ಅತ್ಯಂತ ಮಹತ್ವವನ್ನು ಪಡೆದುಕೊಂಡಿದೆ.
ಇದಕ್ಕೂ ಮುನ್ನ ನ್ಯಾಯಾಲಯದಲ್ಲಿ ಎರಡೂ ಕಡೆ ಭಾರೀ ವಾದ ಮತ್ತು ಪ್ರತಿವಾದ ನಡೆಯಿತು. ಸಿಬಿಐ ಪರ ಹಿರಿಯ ವಕೀಲ ಎಸ್.ಪಿ.ರಾಜು, ಅಪರಾಧಿಗಳ ಪರ ಹಿರಿಯ ವಕೀಲರಾದ ಶಂಕರಪ್ಪ, ಶ್ಯಾಂಸುಂದರ್ ಮತ್ತು ಬಾಲನ್ ವಾದ ಮಂಡನೆ ಮಾಡಿದರು.
ಯೋಗೀಶ್ ಗೌಡ ಕೊಲೆ ಪ್ರಕರಣ ವಿಚಾರಣೆಯ ಅಂತಿಮ ಹಂತದಲ್ಲಿ, ಎಲ್ಲ ಆರೋಪಿಗಳಿಗೂ ತಮಗೆ ಸಂಬಂಧಿಸಿದಂತೆ ಏನಾದರೂ ಹೇಳಿಕೊಳ್ಳುವ ಅವಕಾಶ ನೀಡಲಾಗಿತ್ತು. ಈ ವೇಳೆ ಪ್ರಮುಖ ಆರೋಪಿ, ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿ ಎಲ್ಲಾ ಆರೋಪಿಗಳು ನ್ಯಾಯಾಧೀಶರ ಮುಂದೆ ಕೈಮುಗಿದು ಭಾವುಕರಾಗಿ ಮಾತನಾಡಿದರು.
ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಜಡ್ಜ್ ಮುಂದೆ ಕೈಮುಗಿದು ಕಣ್ಣೀರು ಹಾಕಿದ್ದಾರೆ. ನಾನು 27 ವರ್ಷಗಳಿಂದ ರಾಜಕೀಯದಲ್ಲಿ ಇದ್ದೇನೆ. ನಾನು ಯಾರಿಗೂ ತೊಂದರೆ ಮಾಡಿಲ್ಲ. ನನ್ನ ಕುಟುಂಬದಲ್ಲಿ ಇಬ್ಬರು ಹೆಣ್ಣು ಮಕ್ಕಳು, ಇಬ್ಬರು ಗಂಡು ಮಕ್ಕಳು ಇದ್ದಾರೆ. ನಾನು ಮೂರು ಬಾರಿ ಶಾಸಕರಾಗಿದ್ದೇನೆ. ರಾಜಕೀಯವಾಗಿ ನನ್ನನ್ನು ಸಹಿಸಲಾರದವರು ಪಿತೂರಿ ಮಾಡಿ ನನ್ನ ಮೇಲೆ ಪ್ರಕರಣ ಹಾಕಿಸಿದ್ದಾರೆ. ಬೇಕಾದರೆ ಧಾರವಾಡದಲ್ಲಿ ಯಾರನ್ನೆ? ಕೇಳಿ, ನಾನು ಯಾರಿಗೂ ಏನೂ ತೊಂದರೆ ಮಾಡಿಲ್ಲ. ನಾನು ಕೃಷಿಕ, ನನ್ನ ಬಳಿ ಸುಮಾರು 3 ಸಾವಿರ ಹಸುಗಳು ಇವೆ. ಅವುಗಳ ಪೋಷಣೆ ಮಾಡಬೇಕು. ನಾನು ತಪ್ಪು ಮಾಡಿಲ್ಲ ಸಾರ್ ಎಂದು ಕಣ್ಣಿ?ರು ಹಾಕುತ್ತಾ ನ್ಯಾಯಾಧೀಶರ ಎದುರು ಮನವಿ ಮಾಡಿಕೊಂಡರು.
ನವದೆಹಲಿ: ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯಿಸಿ ಸಿಜೆಪಿ ನಡೆಸಿದ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಮೇಲೆ…
ರೈಲ್ವೆ ಇಲಾಖೆಯಿಂದ ಅನುಮತಿ ಪಡೆದ ಮಾರಾಟಗಾರರು ಪ್ರತಿನಿತ್ಯ ರೈಲುಗಳಲ್ಲಿ ಕಾಫಿ, ಟೀ, ಇಡ್ಲಿ, ರೈಸ್ ಬಾತ್ ಮೊದಲಾದ ಆಹಾರ ಪದಾರ್ಥಗಳು,…
ಕರ್ನಾಟಕ ವಿದ್ಯುತ್ ಮಂಡಳಿಯು ರಾಜದ್ಯಂತ ಗೃಹ ಜ್ಯೋತಿ ಅರ್ಹ ಫಲಾನುಭವಿಗಳನ್ನು ಗುರುತಿಸಲು ಮನೆ ಬಾಗಿಲಿಗೆ ಬಂದು ಸಮೀಕ್ಷೆ ಕಾರ್ಯ ಮಾಡುತ್ತಿದೆ.…
ಕರ್ನಾಟಕದಲ್ಲಿ ಶೇ.೬೦ ಕ್ಕಿಂತ ಹೆಚ್ಚು ಮಳೆ ಕೊರತೆಯಾಗಿದ್ದು, ಮೈಸೂರು, ವಿಜಯಪುರ, ಧಾರವಾಡ, ಗದಗ, ಬೆಳಗಾವಿ, ಕೊಪ್ಪಳ, ಕಲಬುರಗಿ,ಬೀದರ್, ಹಾಸನ, ದಾವಣಗೆರೆ,…
ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಹೊಸದಿಲ್ಲಿಯಲ್ಲಿ ಕಾಕ್ರೋಚ್ ಜನತಾ ಪಕ್ಷ…
ಶುಭಾ ಖಟಾವಕರ ಮ್ಹೆತ್ರಸ್ ಸುಪ್ರೀಂ ಕೋರ್ಟ್ನಲ್ಲಿ ಸ್ವತಃ ಅಟಾರ್ನಿ ಜನರಲ್ ಹೇಳಿಕೆ! ೨೦೨೩ರ ನಂತರ ತಯಾರಾದ ವಾಹನಗಳಿಗೆ ಮಾತ್ರ ಇ-೨೦…