Vinay Kulkarni
ಬೆಂಗಳೂರು: ಧಾರವಾಡದ ಹೆಬ್ಬಳ್ಳಿ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದ ಅಪರಾಧಿಗಳಿಗೆ ವಿಶೇಷ ನ್ಯಾಯಾಲಯ ನಾಳೆ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಲಿದೆ.
ಇಂದು ವಾದ-ಪ್ರತಿವಾದ ಆಲಿಸಿದ ಬೆಂಗಳೂರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರು ಅಪರಾಧಿಗಳ ಹೇಳಿಕೆಯನ್ನು ದಾಖಲಿಸಿಕೊಂಡು ಶಿಕ್ಷೆಯ ಪ್ರಮಾಣವನ್ನು ನಾಳೆ ಪ್ರಕಟಿಸುವುದಾಗಿ ಮುಂದೂಡಿದರು. ಹೀಗಾಗಿ ಯೋಗೀಶ್ಗೌಡ ಕೊಲೆ ಪ್ರಕರಣದ 17 ಅಪರಾಧಿಗಳಿಗೆ ನ್ಯಾಯಾಲಯ ನೀಡುವ ಶಿಕ್ಷೆ ಅತ್ಯಂತ ಮಹತ್ವವನ್ನು ಪಡೆದುಕೊಂಡಿದೆ.
ಇದಕ್ಕೂ ಮುನ್ನ ನ್ಯಾಯಾಲಯದಲ್ಲಿ ಎರಡೂ ಕಡೆ ಭಾರೀ ವಾದ ಮತ್ತು ಪ್ರತಿವಾದ ನಡೆಯಿತು. ಸಿಬಿಐ ಪರ ಹಿರಿಯ ವಕೀಲ ಎಸ್.ಪಿ.ರಾಜು, ಅಪರಾಧಿಗಳ ಪರ ಹಿರಿಯ ವಕೀಲರಾದ ಶಂಕರಪ್ಪ, ಶ್ಯಾಂಸುಂದರ್ ಮತ್ತು ಬಾಲನ್ ವಾದ ಮಂಡನೆ ಮಾಡಿದರು.
ಯೋಗೀಶ್ ಗೌಡ ಕೊಲೆ ಪ್ರಕರಣ ವಿಚಾರಣೆಯ ಅಂತಿಮ ಹಂತದಲ್ಲಿ, ಎಲ್ಲ ಆರೋಪಿಗಳಿಗೂ ತಮಗೆ ಸಂಬಂಧಿಸಿದಂತೆ ಏನಾದರೂ ಹೇಳಿಕೊಳ್ಳುವ ಅವಕಾಶ ನೀಡಲಾಗಿತ್ತು. ಈ ವೇಳೆ ಪ್ರಮುಖ ಆರೋಪಿ, ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿ ಎಲ್ಲಾ ಆರೋಪಿಗಳು ನ್ಯಾಯಾಧೀಶರ ಮುಂದೆ ಕೈಮುಗಿದು ಭಾವುಕರಾಗಿ ಮಾತನಾಡಿದರು.
ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಜಡ್ಜ್ ಮುಂದೆ ಕೈಮುಗಿದು ಕಣ್ಣೀರು ಹಾಕಿದ್ದಾರೆ. ನಾನು 27 ವರ್ಷಗಳಿಂದ ರಾಜಕೀಯದಲ್ಲಿ ಇದ್ದೇನೆ. ನಾನು ಯಾರಿಗೂ ತೊಂದರೆ ಮಾಡಿಲ್ಲ. ನನ್ನ ಕುಟುಂಬದಲ್ಲಿ ಇಬ್ಬರು ಹೆಣ್ಣು ಮಕ್ಕಳು, ಇಬ್ಬರು ಗಂಡು ಮಕ್ಕಳು ಇದ್ದಾರೆ. ನಾನು ಮೂರು ಬಾರಿ ಶಾಸಕರಾಗಿದ್ದೇನೆ. ರಾಜಕೀಯವಾಗಿ ನನ್ನನ್ನು ಸಹಿಸಲಾರದವರು ಪಿತೂರಿ ಮಾಡಿ ನನ್ನ ಮೇಲೆ ಪ್ರಕರಣ ಹಾಕಿಸಿದ್ದಾರೆ. ಬೇಕಾದರೆ ಧಾರವಾಡದಲ್ಲಿ ಯಾರನ್ನೆ? ಕೇಳಿ, ನಾನು ಯಾರಿಗೂ ಏನೂ ತೊಂದರೆ ಮಾಡಿಲ್ಲ. ನಾನು ಕೃಷಿಕ, ನನ್ನ ಬಳಿ ಸುಮಾರು 3 ಸಾವಿರ ಹಸುಗಳು ಇವೆ. ಅವುಗಳ ಪೋಷಣೆ ಮಾಡಬೇಕು. ನಾನು ತಪ್ಪು ಮಾಡಿಲ್ಲ ಸಾರ್ ಎಂದು ಕಣ್ಣಿ?ರು ಹಾಕುತ್ತಾ ನ್ಯಾಯಾಧೀಶರ ಎದುರು ಮನವಿ ಮಾಡಿಕೊಂಡರು.
ಮೈಸೂರು : ನಾವು ಪರಸ್ಪರ ಪ್ರೀತಿಸಿ ಮದುವೆಯಾಗಿದ್ದೇವೆ. ನಮಗೆ ಜೀವ ಬೆದರಿಕೆ ಇದ್ದು, ರಕ್ಷಣೆ ಕೊಡಿ ಎಂದು ತುಮಕೂರು ಮೂಲದ…
ಪ್ರಶಾಂತ್ ಎಸ್. ಮೈಸೂರು : ನಗರ ಹೊರವಲಯದ ಶ್ರೀರಾಂಪುರ ಪಟ್ಟಣ ಪಂಚಾಯಿತಿ ಹಾಗೂ ನಗರಪಾಲಿಕೆ ವ್ಯಾಪ್ತಿಯ ಕಂದಾಯ ಇಲಾಖೆ ನೌಕರರ…
ಚಾಮರಾಜನಗರ : ನೀರಿನ ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿರುವ ಕಾರಣಕ್ಕೆ ತಾಲ್ಲೂಕಿನ ಮೂರು ಗ್ರಾಮ ಪಂಚಾಯಿತಿ ಕಾರ್ಯಾಲಯಗಳ ವಿದ್ಯುತ್ ಸಂಪರ್ಕವನ್ನು…
ಇಸ್ರೇಲ್ : ಇಸ್ರೇಲ್-ಲೆಬನಾನ್ ಉದ್ವಿಗ್ನತೆಗೆ 10 ದಿನಗಳ ಕದನ ವಿರಾಮ ಘೋಷಿಸಲಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.…
ನವದೆಹಲಿ : ಉತ್ತರ, ದಕ್ಷಿಣ, ದೊಡ್ಡ ಅಥವಾ ಸಣ್ಣ ರಾಜ್ಯಗಳಾವುದೇ ಇರಲಿ ಕ್ಷೇತ್ರ ಪುನರ್ ವಿಂಗಡಣೆಯ ವಿಷಯಕ್ಕೆ ಬಂದಾಗ ರಾಜ್ಯಗಳ…