ಕಲಬುರಗಿ: ಇಲ್ಲಿನ ಕೋರ್ಟ್ ಮಹಾ ಶಿವರಾತ್ರಿ ಹಿನ್ನೆಲೆಯಲ್ಲಿ ಜಿಲ್ಲೆಯ ಆಳಂದ ಲಾಡ್ಲೆ ಮಶಾಕ್ ದರ್ಗಾದಲ್ಲಿನ ಶಿವಲಿಂಗದ ಪೂಜೆಗೆ ಅನುಮತಿ ನೀಡಲಾಗಿದೆ ಎಂದು ಆದೇಶ ಹೊರಡಿಸಿದೆ.
ಈ ವಿಚಾರಕ್ಕೆ ಸಂಬಂಧಿಸಿದಂತೆ ಹಿಂದೂ ಮುಖಂಡರು, ದರ್ಗಾದಲ್ಲಿರುವ ಶಿವಲಿಂಗಕ್ಕೆ ಶಿವರಾತ್ರಿ ಹಿನ್ನೆಲೆಯಲ್ಲಿ ಪೂಜೆಗೆ ಅವಕಾಶ ನೀಡುವಂತೆ ಹೈಕೋರ್ಟ್ಗೆ ಮನವಿ ಮಾಡಿದ್ದರು. ಈ ಅರ್ಜಿಯನ್ನು ಇಂದು(ಫೆಬ್ರವರಿ.25) ಪರಿಗಣಿಸಿದ ಹೈಕೋರ್ಟ್ನ ವಿಭಾಗೀಯ ಪೀಠವೂ ನಾಳೆ (ಫೆಬ್ರವರಿ. 26) ಮಧ್ಯಾಹ್ನ 2 ಗಂಟೆಯಿಂದ ಸಂಜೆ 6 ಗಂಟೆಯವರೆಗೂ ದರ್ಗಾದಲ್ಲಿರುವ ಶಿವಲಿಂಗಕ್ಕೆ ಪೂಜೆ ಸಲ್ಲಿಸಲು ಅನುಮತಿ ನೀಡಲಾಗಿದೆ. ಆದರೆ ಈ ಪೂಜೆಯನ್ನು ಆಂದೋಲಾ ಸಿದ್ದಲಿಂಗ ಸ್ವಾಮೀಜಿ ಹೊರತುಪಡಿಸಿ 15 ಹಿಂದೂ ಮುಖಂಡರು ಮಾತ್ರ ಶಿವಲಿಂಗ ಪೂಜೆ ನೆರವೇರಿಸಬೇಕು ಎಂದು ಹೇಳಿದೆ.
ಇನ್ನು ಈ ವಿಚಾರಕ್ಕೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸಿರುವ ಅರ್ಜಿದಾರ ಸಿದ್ದರಾಮಯ್ಯ ಹಿರೇಮಠ ಸೇರಿದಂತೆ ಇನ್ನಿತರ 15 ಜನರು ಆಧಾರಕಾರ್ಡ್ನೊಂದಿಗೆ ಜಿಲ್ಲಾಡಳಿತಕ್ಕೆ ಲಿಸ್ಟ್ ನೀಡಬೇಕು ಎಂದು ಸೂಚಿಸಿದೆ.
ಏನಿದು ಪ್ರಕರಣ?
ದರ್ಗಾದ ಆವರಣದಲ್ಲಿ 15ನೇ ಶತಮಾನದಲ್ಲಿ ಆಗಿದ್ದ ಸಂತ ಶಿವಾಜಿ ಮಹಾರಾಜರ ಗುರು, ಸಮರ್ಥ ರಾಮದಾಸರ ರಾಘವ ಚೈತನ್ಯರ ಸಮಾಧಿ ಇದೆ. ಈ ಸಮಾಧಿಯ ಮೇಲೆ ಶಿವಲಿಂಗವಿದ್ದು, ಇಲ್ಲಿಗೆ ಹೋಗುತ್ತಿದ್ದ ಹಲವು ಹಿಂದೂ ಭಕ್ತರು, ರಾಘವ ಚೈತನ್ಯ ಸಮಾಧಿ ಹಾಗೂ ಶಿವಲಿಂಗಕ್ಕೆ ನಮಸ್ಕರಿಸಿ, ಪೂಜೆ ಸಲ್ಲಿಸಿ ಬರುತ್ತಿದ್ದರು. ಅಲ್ಲದೇ ಜೋಶಿ ಎಂಬ ಮನೆತನದವರು ಈ ಶಿವಲಿಂಗಕ್ಕೆ ಪ್ರತಿನಿತ್ಯ ಪೂಜೆ ಸಲ್ಲಿಸುತ್ತಿದ್ದರು. ಆ ಸ್ಥಳದಲ್ಲಿ ಇತ್ತೀಚಿನವರೆಗೆ ಅಲ್ಲಿ ಯಾವುದೇ ಸಮಸ್ಯೆ ಇರಲಿಲ್ಲ. ಹಿಂದೂ ಮುಸ್ಲಿಂ ನಡುವೆ ಸಾಮರಸ್ಯ ಇತ್ತು. ಆದರೆ ಕಳೆದ ವರ್ಷ ಶಿವಲಿಂಗದ ಮೇಲೆ ಯಾರೋ ಅನ್ಯ ಕೋಮಿನ ಕೆಲವರು ಮಲಮೂತ್ರ ವಿಸರ್ಜನೆ ಮಾಡಿದ್ದರು. ಇದು ಹಿಂದೂ ಧರ್ಮಿಯರ ಆಕ್ರೋಶಕ್ಕೆ ಕಾರಣವಾಗಿತ್ತು. ಶಿವಲಿಂಗದ ಮೇಲೆ ಮಲ-ಮೂತ್ರ ವಿಸರ್ಜನೆ ಮಾಡಿದ್ದನ್ನು ಆಳಂದ ಬಿಜೆಪಿ ಶಾಸಕ ಸುಭಾಷ್ ಗುತ್ತೇದಾರ್ ಅವರು 2021ರ ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಪ್ರಸ್ತಾಪಿಸಿ, ಇತಿಹಾಸ ಹಿನ್ನೆಲೆ ಹೊಂದಿರುವ ರಾಘವ ಚೈತನ್ಯ ಸಮಾಧಿ ಹಾಗೂ ಶಿವಲಿಂಗಕ್ಕೆ ರಕ್ಷಣೆ ನೀಡಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿದ್ದರು. ಈ ಒತ್ತಾಯವೇ ಮತ್ತೊಂದು ಕೋಮಿನ ಕೆಲವರ ಆಕ್ರೋಶಕ್ಕೆ ಕಾರಣವಾಗಿತ್ತು.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…