ರಾಜ್ಯ

ಶಿವರಾತ್ರಿ ಸಂಭ್ರಮ: ಲಾಡ್ಲೆ ಮಶಾಕ್ ದರ್ಗಾದಲ್ಲಿನ ಶಿವಲಿಂಗ ಪೂಜೆಗೆ ಅನುಮತಿ ನೀಡಿದ ಕೋರ್ಟ್

ಕಲಬುರಗಿ: ಇಲ್ಲಿನ ಕೋರ್ಟ್‌ ಮಹಾ ಶಿವರಾತ್ರಿ ಹಿನ್ನೆಲೆಯಲ್ಲಿ ಜಿಲ್ಲೆಯ ಆಳಂದ ಲಾಡ್ಲೆ ಮಶಾಕ್ ದರ್ಗಾದಲ್ಲಿನ ಶಿವಲಿಂಗದ ಪೂಜೆಗೆ ಅನುಮತಿ ನೀಡಲಾಗಿದೆ ಎಂದು ಆದೇಶ ಹೊರಡಿಸಿದೆ.

ಈ ವಿಚಾರಕ್ಕೆ ಸಂಬಂಧಿಸಿದಂತೆ ಹಿಂದೂ ಮುಖಂಡರು, ದರ್ಗಾದಲ್ಲಿರುವ ಶಿವಲಿಂಗಕ್ಕೆ ಶಿವರಾತ್ರಿ ಹಿನ್ನೆಲೆಯಲ್ಲಿ ಪೂಜೆಗೆ ಅವಕಾಶ ನೀಡುವಂತೆ ಹೈಕೋರ್ಟ್​​ಗೆ ಮನವಿ ಮಾಡಿದ್ದರು. ಈ ಅರ್ಜಿಯನ್ನು ಇಂದು(ಫೆಬ್ರವರಿ.25) ಪರಿಗಣಿಸಿದ ಹೈಕೋರ್ಟ್‌ನ ವಿಭಾಗೀಯ ಪೀಠವೂ ನಾಳೆ (ಫೆಬ್ರವರಿ. 26) ಮಧ್ಯಾಹ್ನ 2 ಗಂಟೆಯಿಂದ ಸಂಜೆ 6 ಗಂಟೆಯವರೆಗೂ ದರ್ಗಾದಲ್ಲಿರುವ ಶಿವಲಿಂಗಕ್ಕೆ ಪೂಜೆ ಸಲ್ಲಿಸಲು ಅನುಮತಿ ನೀಡಲಾಗಿದೆ. ಆದರೆ ಈ ಪೂಜೆಯನ್ನು ಆಂದೋಲಾ ಸಿದ್ದಲಿಂಗ ಸ್ವಾಮೀಜಿ ಹೊರತುಪಡಿಸಿ 15 ಹಿಂದೂ ಮುಖಂಡರು ಮಾತ್ರ ಶಿವಲಿಂಗ ಪೂಜೆ ನೆರವೇರಿಸಬೇಕು ಎಂದು ಹೇಳಿದೆ.

ಇನ್ನು ಈ ವಿಚಾರಕ್ಕೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸಿರುವ ಅರ್ಜಿದಾರ ಸಿದ್ದರಾಮಯ್ಯ ಹಿರೇಮಠ ಸೇರಿದಂತೆ ಇನ್ನಿತರ 15 ಜನರು  ಆಧಾರಕಾರ್ಡ್‌ನೊಂದಿಗೆ  ಜಿಲ್ಲಾಡಳಿತಕ್ಕೆ ಲಿಸ್ಟ್ ನೀಡಬೇಕು ಎಂದು ಸೂಚಿಸಿದೆ.

ಏನಿದು ಪ್ರಕರಣ?

ದರ್ಗಾದ ಆವರಣದಲ್ಲಿ 15ನೇ ಶತಮಾನದಲ್ಲಿ ಆಗಿದ್ದ ಸಂತ ಶಿವಾಜಿ ಮಹಾರಾಜರ ಗುರು, ಸಮರ್ಥ ರಾಮದಾಸರ ರಾಘವ ಚೈತನ್ಯರ ಸಮಾಧಿ ಇದೆ. ಈ ಸಮಾಧಿಯ ಮೇಲೆ ಶಿವಲಿಂಗವಿದ್ದು, ಇಲ್ಲಿಗೆ ಹೋಗುತ್ತಿದ್ದ ಹಲವು ಹಿಂದೂ ಭಕ್ತರು, ರಾಘವ ಚೈತನ್ಯ ಸಮಾಧಿ ಹಾಗೂ ಶಿವಲಿಂಗಕ್ಕೆ ನಮಸ್ಕರಿಸಿ, ಪೂಜೆ ಸಲ್ಲಿಸಿ ಬರುತ್ತಿದ್ದರು. ಅಲ್ಲದೇ ಜೋಶಿ ಎಂಬ ಮನೆತನದವರು ಈ ಶಿವಲಿಂಗಕ್ಕೆ ಪ್ರತಿನಿತ್ಯ ಪೂಜೆ ಸಲ್ಲಿಸುತ್ತಿದ್ದರು. ಆ ಸ್ಥಳದಲ್ಲಿ ಇತ್ತೀಚಿನವರೆಗೆ ಅಲ್ಲಿ ಯಾವುದೇ ಸಮಸ್ಯೆ ಇರಲಿಲ್ಲ. ಹಿಂದೂ ಮುಸ್ಲಿಂ ನಡುವೆ ಸಾಮರಸ್ಯ ಇತ್ತು. ಆದರೆ ಕಳೆದ ವರ್ಷ ಶಿವಲಿಂಗದ ಮೇಲೆ ಯಾರೋ ಅನ್ಯ ಕೋಮಿನ ಕೆಲವರು ಮಲಮೂತ್ರ ವಿಸರ್ಜನೆ ಮಾಡಿದ್ದರು. ಇದು ಹಿಂದೂ ಧರ್ಮಿಯರ ಆಕ್ರೋಶಕ್ಕೆ ಕಾರಣವಾಗಿತ್ತು. ಶಿವಲಿಂಗದ ಮೇಲೆ ಮಲ-ಮೂತ್ರ ವಿಸರ್ಜನೆ ಮಾಡಿದ್ದನ್ನು ಆಳಂದ ಬಿಜೆಪಿ ಶಾಸಕ ಸುಭಾಷ್ ಗುತ್ತೇದಾರ್ ಅವರು 2021ರ ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಪ್ರಸ್ತಾಪಿಸಿ, ಇತಿಹಾಸ ಹಿನ್ನೆಲೆ ಹೊಂದಿರುವ ರಾಘವ ಚೈತನ್ಯ ಸಮಾಧಿ ಹಾಗೂ ಶಿವಲಿಂಗಕ್ಕೆ ರಕ್ಷಣೆ ನೀಡಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿದ್ದರು. ಈ ಒತ್ತಾಯವೇ ಮತ್ತೊಂದು ಕೋಮಿನ ಕೆಲವರ ಆಕ್ರೋಶಕ್ಕೆ ಕಾರಣವಾಗಿತ್ತು.

ಅರ್ಚನ ಎಸ್‌ ಎಸ್

Recent Posts

ಮಳವಳ್ಳಿ | ಚಿರತೆ ಪ್ರತ್ಯಕ್ಷ ; ಆತಂಕ

ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…

10 hours ago

ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ

ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…

14 hours ago

ಮಲ್ಲಿಕಾರ್ಜುನ್‌ ಖರ್ಗೆ, ಎಂ.ನಾಗರಾಜ್‌ ಸಹಿತ ನಾಲ್ವರು ರಾಜ್ಯಸಭೆಗೆ ಅವಿರೋಧ ಆಯ್ಕೆ

ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಧೈವಾರ್ಷಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ.ಮಲ್ಲಿಕಾರ್ಜುನ…

14 hours ago

ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ 11ನೇ ನೀತಿ ಆಯೋಗದ ಸಭೆ

ಕರ್ನಾಟಕ ಸಿಎಂ ಡಿಕೆಶಿ ಸೇರಿ ಹಲವು ರಾಜ್ಯಗಳ ಸಿಎಂಗಳು ಭಾಗಿ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ರಾಷ್ಟ್ರ…

15 hours ago

ಕಾಂಗ್ರೆಸ್‌ ಶಾಸಕ ಷಡಕ್ಷರಿ ಆರೋಗ್ಯ ಸ್ಥಿತಿ ಗಂಭೀರ

ನವದೆಹಲಿ: ತಿಪಟೂರು ಕಾಂಗ್ರೆಸ್‌ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಪಕ್ಷದ…

19 hours ago

ಕೇರಳದಲ್ಲಿ ಮತ್ತೆ ನಿಫಾ ವೈರಸ್‌ ಪತ್ತೆ: ಆರೋಗ್ಯ ಇಲಾಖೆಯಿಂದ ಹೈಅಲರ್ಟ್‌

ಕೋಯಿಕ್ಕೋಡ್:‌ ವಯನಾಡು, ಕೋಯಿಕ್ಕೋಡ್‌ನಲ್ಲಿ ಶಿಗೆಲ್ಲಾ ವೈರಸ್‌ ಸೋಂಕು ಹರಡಿರುವ ನಡುವೆ ನಿಫಾ ವೈರಸ್‌ ಪತ್ತೆಯಾಗಿದೆ. 43 ವರ್ಷದ ವ್ಯಕ್ತಿಯೊಬ್ಬರಿಗೆ ನಿಫಾ…

19 hours ago