ಕಲಬುರಗಿ: ಇಲ್ಲಿನ ಕೋರ್ಟ್ ಮಹಾ ಶಿವರಾತ್ರಿ ಹಿನ್ನೆಲೆಯಲ್ಲಿ ಜಿಲ್ಲೆಯ ಆಳಂದ ಲಾಡ್ಲೆ ಮಶಾಕ್ ದರ್ಗಾದಲ್ಲಿನ ಶಿವಲಿಂಗದ ಪೂಜೆಗೆ ಅನುಮತಿ ನೀಡಲಾಗಿದೆ ಎಂದು ಆದೇಶ ಹೊರಡಿಸಿದೆ.
ಈ ವಿಚಾರಕ್ಕೆ ಸಂಬಂಧಿಸಿದಂತೆ ಹಿಂದೂ ಮುಖಂಡರು, ದರ್ಗಾದಲ್ಲಿರುವ ಶಿವಲಿಂಗಕ್ಕೆ ಶಿವರಾತ್ರಿ ಹಿನ್ನೆಲೆಯಲ್ಲಿ ಪೂಜೆಗೆ ಅವಕಾಶ ನೀಡುವಂತೆ ಹೈಕೋರ್ಟ್ಗೆ ಮನವಿ ಮಾಡಿದ್ದರು. ಈ ಅರ್ಜಿಯನ್ನು ಇಂದು(ಫೆಬ್ರವರಿ.25) ಪರಿಗಣಿಸಿದ ಹೈಕೋರ್ಟ್ನ ವಿಭಾಗೀಯ ಪೀಠವೂ ನಾಳೆ (ಫೆಬ್ರವರಿ. 26) ಮಧ್ಯಾಹ್ನ 2 ಗಂಟೆಯಿಂದ ಸಂಜೆ 6 ಗಂಟೆಯವರೆಗೂ ದರ್ಗಾದಲ್ಲಿರುವ ಶಿವಲಿಂಗಕ್ಕೆ ಪೂಜೆ ಸಲ್ಲಿಸಲು ಅನುಮತಿ ನೀಡಲಾಗಿದೆ. ಆದರೆ ಈ ಪೂಜೆಯನ್ನು ಆಂದೋಲಾ ಸಿದ್ದಲಿಂಗ ಸ್ವಾಮೀಜಿ ಹೊರತುಪಡಿಸಿ 15 ಹಿಂದೂ ಮುಖಂಡರು ಮಾತ್ರ ಶಿವಲಿಂಗ ಪೂಜೆ ನೆರವೇರಿಸಬೇಕು ಎಂದು ಹೇಳಿದೆ.
ಇನ್ನು ಈ ವಿಚಾರಕ್ಕೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸಿರುವ ಅರ್ಜಿದಾರ ಸಿದ್ದರಾಮಯ್ಯ ಹಿರೇಮಠ ಸೇರಿದಂತೆ ಇನ್ನಿತರ 15 ಜನರು ಆಧಾರಕಾರ್ಡ್ನೊಂದಿಗೆ ಜಿಲ್ಲಾಡಳಿತಕ್ಕೆ ಲಿಸ್ಟ್ ನೀಡಬೇಕು ಎಂದು ಸೂಚಿಸಿದೆ.
ಏನಿದು ಪ್ರಕರಣ?
ದರ್ಗಾದ ಆವರಣದಲ್ಲಿ 15ನೇ ಶತಮಾನದಲ್ಲಿ ಆಗಿದ್ದ ಸಂತ ಶಿವಾಜಿ ಮಹಾರಾಜರ ಗುರು, ಸಮರ್ಥ ರಾಮದಾಸರ ರಾಘವ ಚೈತನ್ಯರ ಸಮಾಧಿ ಇದೆ. ಈ ಸಮಾಧಿಯ ಮೇಲೆ ಶಿವಲಿಂಗವಿದ್ದು, ಇಲ್ಲಿಗೆ ಹೋಗುತ್ತಿದ್ದ ಹಲವು ಹಿಂದೂ ಭಕ್ತರು, ರಾಘವ ಚೈತನ್ಯ ಸಮಾಧಿ ಹಾಗೂ ಶಿವಲಿಂಗಕ್ಕೆ ನಮಸ್ಕರಿಸಿ, ಪೂಜೆ ಸಲ್ಲಿಸಿ ಬರುತ್ತಿದ್ದರು. ಅಲ್ಲದೇ ಜೋಶಿ ಎಂಬ ಮನೆತನದವರು ಈ ಶಿವಲಿಂಗಕ್ಕೆ ಪ್ರತಿನಿತ್ಯ ಪೂಜೆ ಸಲ್ಲಿಸುತ್ತಿದ್ದರು. ಆ ಸ್ಥಳದಲ್ಲಿ ಇತ್ತೀಚಿನವರೆಗೆ ಅಲ್ಲಿ ಯಾವುದೇ ಸಮಸ್ಯೆ ಇರಲಿಲ್ಲ. ಹಿಂದೂ ಮುಸ್ಲಿಂ ನಡುವೆ ಸಾಮರಸ್ಯ ಇತ್ತು. ಆದರೆ ಕಳೆದ ವರ್ಷ ಶಿವಲಿಂಗದ ಮೇಲೆ ಯಾರೋ ಅನ್ಯ ಕೋಮಿನ ಕೆಲವರು ಮಲಮೂತ್ರ ವಿಸರ್ಜನೆ ಮಾಡಿದ್ದರು. ಇದು ಹಿಂದೂ ಧರ್ಮಿಯರ ಆಕ್ರೋಶಕ್ಕೆ ಕಾರಣವಾಗಿತ್ತು. ಶಿವಲಿಂಗದ ಮೇಲೆ ಮಲ-ಮೂತ್ರ ವಿಸರ್ಜನೆ ಮಾಡಿದ್ದನ್ನು ಆಳಂದ ಬಿಜೆಪಿ ಶಾಸಕ ಸುಭಾಷ್ ಗುತ್ತೇದಾರ್ ಅವರು 2021ರ ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಪ್ರಸ್ತಾಪಿಸಿ, ಇತಿಹಾಸ ಹಿನ್ನೆಲೆ ಹೊಂದಿರುವ ರಾಘವ ಚೈತನ್ಯ ಸಮಾಧಿ ಹಾಗೂ ಶಿವಲಿಂಗಕ್ಕೆ ರಕ್ಷಣೆ ನೀಡಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿದ್ದರು. ಈ ಒತ್ತಾಯವೇ ಮತ್ತೊಂದು ಕೋಮಿನ ಕೆಲವರ ಆಕ್ರೋಶಕ್ಕೆ ಕಾರಣವಾಗಿತ್ತು.
ಮೈಸೂರು: ನಗರದ ಸಾಂಸ್ಕೃತಿಕ ಹಬ್ಬಗಳಲ್ಲಿ ಒಂದಾದ 102 ನೇ ವರ್ಷದ ಮೈಸೂರು ಕರಗ ಮಹೋತ್ಸವದ ಅದ್ಧೂರಿ ಮೆರವಣಿಗೆಗೆ ಚಾಲನೆ ನೀಡಲಾಗಿದೆ.…
ಬೆಂಗಳೂರು: ಒಂದೆಡೆ ಗ್ಯಾರಂಟಿ ಯೋಜನೆಗಳನ್ನು ನೀಡುವ ರಾಜ್ಯ ಸರ್ಕಾರ ಇನ್ನೊಂದೆಡೆ ಬೆಲೆ ಏರಿಕೆಯನ್ನು ಮಾಡುತ್ತಲೇ ಬಂದಿದೆ ಎಂಬ ಸಾರ್ವಜನಿಕರ ಆರೋಪ…
ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಏಪ್ರಿಲ್ 2026ರ ಅಂತ್ಯದ ವೇಳೆಗೆ ಬಿಸಿಲಿನ ತಾಪಮಾನ ತೀವ್ರವಾಗಿ ಹೆಚ್ಚಾಗಿದೆ. ಇದು ಜನಜೀವನದ ಮೇಲೆ…
ಬೆಂಗಳೂರು: ನಟ ರಾಜ್ ಕುಮಾರ್ ಸಮಾಧಿ ವಿಚಾರವಾಗಿ ಹೇಳಿಕೆ ನೀಡಿದ್ದ ನಟ ಚೇತನ್ ಅಹಿಂಸಾ ಸಾರ್ವಜನಿಕವಾಗಿ ಕ್ಷಮೆ ಯಾಚಿಸಿದ್ದಾರೆ. ಡಾ.ರಾಜ್ಕುಮಾರ್…
ಬೆಳಗಾವಿ: ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲಲ್. ಅಧಿಕಾರ ಹಂಚಿಕೆ ವಿಚಾರವಾಗಿ ಏನೆಲ್ಲಾ ಮಾತುಕತೆ ಆಗಿದೆ ಎಂಬುದೂ ಗೊತ್ತಿಲ್ಲ ಎಂದು…
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿಯಾಗಿದ್ದು, ಕೆಂಗೇರಿ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಭೀಕರ…