ರಾಜ್ಯ

ಕೊವೀಡ್ ಭ್ರಷ್ಟಾಚಾರ | ಕುನ್ಹಾ ವರದಿ ಅಧ್ಯಯನಕ್ಕೆ ಅಧಿಕಾರಿಗಳ ಸಮಿತಿ

ಬೆಂಗಳೂರು: ಕೋವಿಡ್ ಸಂದರ್ಭದಲ್ಲಿ ರಾಜ್ಯದಲ್ಲಿ ವೈದ್ಯಕೀಯ ಪರಿಕರಗಳ ಖರೀದಿ, ವಿತರಣೆ ಮತ್ತು ಬಳಕೆ ವಿಷಯಗಳಲ್ಲಿ ನಡೆದಿರುವ ಭ್ರಷ್ಟಾಚಾರದ ಕುರಿತು ಸರ್ಕಾರ ನೇಮಿಸಿದ ನ್ಯಾಯಮೂರ್ತಿ  ಮೈಕೆಲ್ ಡಿ. ಕುನ್ಹಾ ನೇತೃತ್ವದ ನ್ಯಾಯಾಂಗ ಆಯೋಗ ಒಂದು ವರದಿಯನ್ನು ಸಲ್ಲಿಸಿದ್ದು, ವರದಿಯನ್ನು ವಿಶ್ಲೇಷಿಸಿ ಅಧ್ಯಯನ ಮಾಡಿ ಮುಂದಿನ ಕ್ರಮಗಳ ಬಗ್ಗೆ ಅಗತ್ಯದ ಶಿಫಾರಸ್ಸುಗಳನ್ನು ಮಾಡಲು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ  ಶಾಲಿನಿ ರಜನೀಶ್ ಹಾಗೂ ಮುಖ್ಯ ಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ  ಎಲ್.ಕೆ ಅತೀಕ್ ಅವರನ್ನೊಳಗೊಂಡ ಉನ್ನತಾಧಿಕಾರಿಗಳ ಸಮಿತಿಯನ್ನು ರಚಿಸಲಾಗಿದೆ ಎಂದು ಕಾನೂನು, ನ್ಯಾಯ ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರಾದ ಎಚ್ .ಕೆ. ಪಾಟೀಲ ಇಂದಿಲ್ಲಿ ಪ್ರಕಟಿಸಿದರು.

ಸಚಿವ ಸಂಪುಟದ ನಿರ್ಣಯಗಳನ್ನು ಮಾಧ್ಯಮ ಪ್ರತಿನಿಧಿಗಳಿಗೆ ವಿವರಿಸಿದ ಅವರು, ಕೋವಿಡ್ ಚಿಕಿತ್ಸೆಯ ಸಂದರ್ಭದಲ್ಲಿ ನೂರಾರು ಕೋಟಿ ರೂಪಾಯಿಗಳ ಭ್ರಷ್ಟಾಚಾರ ನಡೆದಿದೆ ಎಂದು ನ್ಯಾಯಾಂಗ ಆಯೋಗ ವರದಿ ಸಲ್ಲಿಸಿದೆ ಎಂದು ತಿಳಿಸಿದರು.

ನಾನು  ಮತ್ತು ರಾಮಲಿಂಗಾ ರೆಡ್ಡಿಯವರು ಸಾರ್ವಜನಿಕ ಲೆಕ್ಕಪತ್ರ ಸಮಿತಿಯ ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ ಕೋವಿಡ್ ಭ್ರಷ್ಟಾಚಾರದ ಕುರಿತು ವಿವರವಾದ ವರದಿಯನ್ನು ವಿಧಾನ ಮಂಡಲಕ್ಕೆ ಸಲ್ಲಿಸಲಾಗಿತ್ತು. ಆದರೆ ಬಿ.ಜೆ.ಪಿ. ಆಡಳಿತಾವಧಿಯಲ್ಲಿ ಅಂದಿನ ಸಭಾಧ್ಯಕ್ಷರು ವರದಿಯನ್ನು ವಿಧಾನ ಮಂಡಲದಲ್ಲಿ ಮಂಡಿಸಲಿಲ್ಲ ಎಂದು  ಹೇಳಿದರು.

ಕೋವಿಡ್ ಪರಿಕರಗಳ ಖರೀದಿಯಲ್ಲಿ ಬಹು ದೊಡ್ಡ ಭ್ರಷ್ಟಾಚಾರ ನಡೆದಿದೆ ಎಂದು ಸಾರ್ವಜನಿಕ ಲೆಕ್ಕಪತ್ರ ಸಮಿತಿ ನೀಡಿತ್ತು. ಈ ವರದಿಯ ನಂತರ  ಮೈಕೆಲ್ ಡಿ. ಕುನ್ಹಾ ನೇತೃತ್ವದ ಆಧಾರದ ಮೇಲೆ ನ್ಯಾಯಾಂಗ ಆಯೋಗ ರಚನೆಯಾಗಿತ್ತು. ಈ ಆಯೋಗ 7 ಸಂಪುಟದಲ್ಲಿ ವರದಿ ಸಲ್ಲಿಸಿದೆ. ನೂರಾರು ಕೋಟಿ ರೂಪಾಯಿಗಳ ಭ್ರಷ್ಠಾಚಾರ, ಸರ್ಕಾರಿ ಕಡತಗಳ ಕಾಣೆಯಾಗುವಿಕೆ ಬಹು ಪ್ರಮುಖವಾದ ಅಂಶವಾಗಿದೆ ಎಂದು ಸಚಿವರು ವಿವರಿಸಿದರು.

ಮುಡಾ ಹಗರಣದ ನಂತರ ಕೋವಿಡ್ ಭ್ರಷ್ಟಾಚಾರವನ್ನು ಪ್ರಸ್ತಾಪಿಸುತತಿರುವುದು ಪ್ರತಿಕಾರದ ಕ್ರಮವಲ್ಲವೇ ಎಂದು ಪತ್ರಕರ್ತರೊಬ್ಬರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು ಮುಡಾ ಎಂಬ ಹೆಸರಿನ ಹಗರಣವಲ್ಲದಿದ್ದರೂ ಪ್ರಸ್ತಾಪವಾಗಿ ಕೇವಲ ಎರಡು ತಿಂಗಳು ಗತಿಸಿದೆ. ಆದರೆ ಕೊವೀಡ್ ಭ್ರಷ್ಟಾಚಾರ ಕುರಿತು ನ್ಯಾಯಾಂಗ ಆಯೋಗ ರಚನೆಯಾಗಿ ಒಂದು ವರ್ಷ ಕಳೆದಿದೆ. ಪ್ರತಿಕಾರದ ಕ್ರಮ ಎಲ್ಲಿಂದ ಬಂತ್ತು ಎಂದು ಮರು ಪ್ರಶ್ನೆ ಮಾಡಿದರು. ಕೊವೀಡ್ ಭ್ರಷ್ಟಾಚಾರದ ಕುರಿತು ನ್ಯಾಯಾಂಗ ಆಯೋಗದ ವರದಿ ಕುರಿತು ಅಗತ್ಯ ಕ್ರಮ ಕೈಗೊಳ್ಳಲಾಗುವುದು  ಎಂದು ತಿಳಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ನೇಪಾಳದಲ್ಲಿ ಭೀಕರ ಪ್ರವಾಹ ; ಭಾರತೀಯರ ನೆರವಿಗೆ ಸಹಾಯವಾಣಿ ಆರಂಭ

ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…

10 mins ago

ಸಂಪುಟದಲ್ಲಿ ಚರ್ಚಿಸಿ ಬರ ಘೋಷಣೆ ; ಡಿಸಿಎಂ ಪರಮೇಶ್ವರ್‌

ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…

1 hour ago

ಸ್ವಚ್ಛತಾ ಅಭಿಯಾನ | ವಿವಿಧೆಡೆ 15 ಟನ್‌ ತ್ಯಾಜ್ಯ ವಿಲೇವಾರಿ

ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…

1 hour ago

ನೇಪಾಳ ಪ್ರವಾಹ | 105 ಭಾರತೀಯರು ಸೇರಿ 400 ಮಂದಿ ನಾಪತ್ತೆ

ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…

3 hours ago

ನೇಪಾಳದಲ್ಲಿ ಭೀಕರ ಪ್ರವಾಹ | ಹತ್ತಾರು ಹಳ್ಳಿಗಳು ಜಲಾವೃತ ; ನಾಪತ್ತೆಯಾದ ಪ್ರವಾಸಿಗರು

ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…

3 hours ago

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

7 hours ago