ರಾಜ್ಯ

ಕೇರಳದಲ್ಲಿ ಕೋವಿಡ್‌ ಹೆಚ್ಚಳ: ಮುನ್ನೆಚ್ಚರಿಕೆಗೆ ಕ್ರಮ

ಬೆಂಗಳೂರು:  ಪಕ್ಕದ ರಾಜ್ಯ ಕೇರಳದಲ್ಲಿ ಹೊಸ ತಳಿಯ ಕೋವಿಡ್​ ಪ್ರಕರಣ ದಾಖಲಾಗುತ್ತಿರುವ ಹಿನ್ನೆಲೆ ಮುನ್ನೆಚ್ಚರಿಕೆಯಾಗಿ ಕರ್ನಾಟಕದಲ್ಲಿ ಆರ್​ಟಿಪಿಸಿಆರ್​​ ಕಿಟ್​ಗಳಿಂದ ಹಿಡಿದು ಕೊರೊನಾ ಪರೀಕ್ಷೆ ತನಕ ಎಲ್ಲದರ ಸಿದ್ಧತೆಯನ್ನು ಈಗಲೇ ಆರೋಗ್ಯ ಇಲಾಖೆ ಮಾಡಿಕೊಳ್ಳಲು ಮುಂದಾಗಿದೆ.

ಈ ಹಿಂದೆ ಭಾರತ ಸೇರಿದಂತೆ ವಿಶ್ವದಲ್ಲಿ ತಲ್ಲಣವನ್ನುಂಟು ಮಾಡಿದ್ದ ಕೋವಿಡ್​ ವೈರಸ್​ ಮತ್ತೆ ಸದ್ದು ಮಾಡುತ್ತಿದೆ. ಪಕ್ಕದ ರಾಜ್ಯಕೇರಳದಲ್ಲಿ ಹೊಸ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಎಚ್ಚೆತ್ತುಕೊಂಡಿರುವ ಕರ್ನಾಟಕ ಸರ್ಕಾರ ರಾಜ್ಯದಲ್ಲಿನ ಆಸ್ಪತ್ರೆಗಳಲ್ಲಿ ಪೂರ್ವ ಸಿದ್ಧತೆಯ ಮಾಕ್‌ ಡ್ರಿಲ್ ಕೈಗೊಳ್ಳಲು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ವಿಕಾಸಸೌಧದಲ್ಲಿ ಕೋವಿಡ್ ಸಂಬಂಧ ಅಧಿಕಾರಿಗಳ ಜೊತೆ ಸಭೆ ನಡೆಸಿ ಬಳಿಕ ಮಾತನಾಡಿದ ಸಚಿವರು, ಆಸ್ಪತ್ರೆಗಳಲ್ಲಿ ಐಸಿಯು ಬೆಡ್‌ಗಳು, ಆಮ್ಲಜನಕದ ಲಭ್ಯತೆ ಮತ್ತು ಔಷಧಗಳು ಸೇರಿದಂತೆ ಹಾಸಿಗೆಗಳ ಸಾಮರ್ಥ್ಯ ಪರಿಶೀಲಿಸಲು ಎಲ್ಲಾ ಆಸ್ಪತ್ರೆಗಳಲ್ಲಿ ಪೂರ್ವ ಸಿದ್ಧತೆ ಪರಿಶೀಲನೆ ನಡೆಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಪರಿಸ್ಥಿತಿ ಆತಂಕಕಾರಿ ಆಗಿಲ್ಲದಿದ್ದರೂ ಅಂತಹ ಪರಿಸ್ಥಿತಿ ಮರುಕಳಿಸಿದರೆ ಸನ್ನದ್ಧರಾಗಿರಲು ಕ್ರಮ ಕೈಗೊಳ್ಳುತ್ತೇವೆ. ಯಾವುದೇ ಕೊರತೆಯಿದ್ದಲ್ಲಿ ಅದನ್ನು ಈಗಲೇ ಸರಿಪಡಿಸಲು ನಿರ್ದೇಶನ ನೀಡಿರುವುದಾಗಿ ತಿಳಿಸಿದರು.

andolanait

Recent Posts

ಹನೂರು: ಏಕಕಾಲದಲ್ಲೇ ಕಾಣಿಸಿಕೊಂಡ ಎರಡು ಚಿರತೆಗಳು

ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…

1 hour ago

ನಾಳೆಯೊಳಗೆ ಪ್ರಯಾಣಿಕರಿಗೆ ಮರುಪಾವತಿ ಮಾಡಿ: ಇಂಡಿಗೋ ಏರ್‌ಲೈನ್ಸ್‌ಗೆ ಗಡುವು ನೀಡಿದ ಕೇಂದ್ರ ಸರ್ಕಾರ

ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…

1 hour ago

ಡಿ.ಕೆ.ಶಿವಕುಮಾರ್‌ ಸಂಪುಟದಲ್ಲಿ ನನಗೆ ಸಚಿವ ಸ್ಥಾನ ಬೇಡ: ಮಾಜಿ ಸಚಿವ ಕೆ.ಎನ್.ರಾಜಣ್ಣ

ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…

2 hours ago

ನನ್ನನ್ನು ಹೆದರಿಸ್ತೀನಿ ಅಂದ್ರೆ ಅದು ಸಾಧ್ಯವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಹಾಸನ: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್‌ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…

3 hours ago

ಹೇಮಾವತಿ ಜಲಾಶಯದ ಬಳಿ ಉದ್ಯಾನವನ ನಿರ್ಮಿಸಲು ಸಿಎಂ ಸಿದ್ದರಾಮಯ್ಯ ಭರವಸೆ

ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…

3 hours ago

ಮೈಸೂರು| ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆ

ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…

3 hours ago