ಬೆಂಗಳೂರು: ಜನರ ಸಾವು ಬದುಕಿನ ಸಮಯದಲ್ಲಿ ಬಿಜೆಪಿ ಸರ್ಕಾರ ಸಾವಿರಾರು ಕೋಟಿ ಲೂಟಿ ಹೊಡೆದಿದೆ ಎಂದು ಸಚಿವ ಎಂ.ಬಿ.ಪಾಟೀಲ್ ಗಂಭೀರ ಆರೋಪ ಮಾಡಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೋವಿಡ್ ಸಂದರ್ಭದಲ್ಲಿ ಸಾವಿರಾರು ಕೋಟಿ ಲೂಟಿ ಹೊಡೆಯುವ ಮೂಲಕ ದೊಡ್ಡ ಹಗರಣವನ್ನು ಸೃಷ್ಟಿ ಮಾಡಿದ್ದಾರೆ. ನಮ್ಮ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ನಾವು ಕಡಿಮೆ ದರದಲ್ಲಿ ಗುಣಮಟ್ಟದ ಚಿಕಿತ್ಸೆ ಕೊಟ್ಟಿದ್ದೇವೆ. ಅದು ನಮ್ಮ ಜವಾಬ್ದಾರಿ. ಕೋವಿಡ್ ಸಮಯದಲ್ಲಿ ಕಳಪೆ ಗುಣಮಟ್ಟದ ಉಪಕರಣಗಳನ್ನು ಬಳಕೆ ಮಾಡಿದ್ದಾರೆ ಎಂದು ಕಿಡಿಕಾರಿದರು.
ಕೆಲಸ ಮಾಡಬೇಕು ನಿಜ, ಆದರೆ ಲೂಟಿ ಹೊಡೆಯಬೇಕು ಎಂದೆನಿಲ್ಲಾ. ಆದರೆ ಕೋವಿಡ್ ಸಮಯದಲ್ಲಿ ಸಾವು-ಬದುಕಿನ ಸಂದರ್ಭದಲ್ಲಿ ಬಿಜೆಪಿ ನಾಯಕರು ಸಾವಿರಾರು ಕೋಟಿ ಲೂಟಿ ಹೊಡೆದಿದ್ದಾರೆ ಎಂದು ಕಿಡಿಕಾರಿದರು.
ಕೊರೊನಾ ಕಾಲದಲ್ಲಿ ಮಾನವೀಯತೆ ಮೆರೆಯಬೇಕಿತ್ತು. ಆದರೆ ಸಾವಿರಾರು ಕೋಟಿ ಲೂಟಿ ಹೊಡೆದು ದೊಡ್ಡ ಹಗರಣವನ್ನೇ ಸೃಷ್ಟಿ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಹಗರಣದಲ್ಲಿ ಡಾ.ಕೆ.ಸುಧಾಕರ್ ಭಾಗಿಯಾಗಿರುವುದು ನಿಶ್ಚಿತವಾಗಿದೆ. ನಾನು ರಿಪೋರ್ಟ್ ನೋಡಿಲ್ಲ. ಆದ್ರೆ ನಿಶ್ಚಿತವಾಗಿ ಭಾಗಿಯಾಗಿದ್ದಾರೆ. ಇದೆಲ್ಲದರ ಬಗ್ಗೆ ತನಿಖೆ ಆಗಲೇಬೇಕು. ಎಲ್ಲವನ್ನೂ ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುತ್ತೇವೆ ಎಂದರು.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…