ಬೆಂಗಳೂರು: ಜನರ ಸಾವು ಬದುಕಿನ ಸಮಯದಲ್ಲಿ ಬಿಜೆಪಿ ಸರ್ಕಾರ ಸಾವಿರಾರು ಕೋಟಿ ಲೂಟಿ ಹೊಡೆದಿದೆ ಎಂದು ಸಚಿವ ಎಂ.ಬಿ.ಪಾಟೀಲ್ ಗಂಭೀರ ಆರೋಪ ಮಾಡಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೋವಿಡ್ ಸಂದರ್ಭದಲ್ಲಿ ಸಾವಿರಾರು ಕೋಟಿ ಲೂಟಿ ಹೊಡೆಯುವ ಮೂಲಕ ದೊಡ್ಡ ಹಗರಣವನ್ನು ಸೃಷ್ಟಿ ಮಾಡಿದ್ದಾರೆ. ನಮ್ಮ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ನಾವು ಕಡಿಮೆ ದರದಲ್ಲಿ ಗುಣಮಟ್ಟದ ಚಿಕಿತ್ಸೆ ಕೊಟ್ಟಿದ್ದೇವೆ. ಅದು ನಮ್ಮ ಜವಾಬ್ದಾರಿ. ಕೋವಿಡ್ ಸಮಯದಲ್ಲಿ ಕಳಪೆ ಗುಣಮಟ್ಟದ ಉಪಕರಣಗಳನ್ನು ಬಳಕೆ ಮಾಡಿದ್ದಾರೆ ಎಂದು ಕಿಡಿಕಾರಿದರು.
ಕೆಲಸ ಮಾಡಬೇಕು ನಿಜ, ಆದರೆ ಲೂಟಿ ಹೊಡೆಯಬೇಕು ಎಂದೆನಿಲ್ಲಾ. ಆದರೆ ಕೋವಿಡ್ ಸಮಯದಲ್ಲಿ ಸಾವು-ಬದುಕಿನ ಸಂದರ್ಭದಲ್ಲಿ ಬಿಜೆಪಿ ನಾಯಕರು ಸಾವಿರಾರು ಕೋಟಿ ಲೂಟಿ ಹೊಡೆದಿದ್ದಾರೆ ಎಂದು ಕಿಡಿಕಾರಿದರು.
ಕೊರೊನಾ ಕಾಲದಲ್ಲಿ ಮಾನವೀಯತೆ ಮೆರೆಯಬೇಕಿತ್ತು. ಆದರೆ ಸಾವಿರಾರು ಕೋಟಿ ಲೂಟಿ ಹೊಡೆದು ದೊಡ್ಡ ಹಗರಣವನ್ನೇ ಸೃಷ್ಟಿ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಹಗರಣದಲ್ಲಿ ಡಾ.ಕೆ.ಸುಧಾಕರ್ ಭಾಗಿಯಾಗಿರುವುದು ನಿಶ್ಚಿತವಾಗಿದೆ. ನಾನು ರಿಪೋರ್ಟ್ ನೋಡಿಲ್ಲ. ಆದ್ರೆ ನಿಶ್ಚಿತವಾಗಿ ಭಾಗಿಯಾಗಿದ್ದಾರೆ. ಇದೆಲ್ಲದರ ಬಗ್ಗೆ ತನಿಖೆ ಆಗಲೇಬೇಕು. ಎಲ್ಲವನ್ನೂ ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುತ್ತೇವೆ ಎಂದರು.
ಮೈಸೂರು : ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪಿ.ಎಚ್.ಡಿ ಪ್ರವೇಶಾತಿ ಪಡೆದ ಸಂಶೋಧಕರುಗಳಿಗೆ ಶಿಷ್ಯ ವೇತನ ನೀಡುವಂತೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ…
ಚಾಮರಾಜನಗರ: ತಾಲ್ಲೂಕಿನ ಬಾಗಳಿ ಗ್ರಾಮದ ಜಮೀನೊಂದರಲ್ಲಿ ಹುಲಿ ಪ್ರತ್ಯಕ್ಷಗೊಂಡಿದ್ದು ರೈತರಲ್ಲಿ ಆತಂಕ ಮೂಡಿಸಿದೆ. ಗ್ರಾಮದ ಪುಟ್ಟಯ್ಯ ಎಂಬವರು ಸೋಮವಾರ ಬೆಳಿಗ್ಗೆ…
ವಾಷಿಂಗ್ಟನ್ : ಅಮೆರಿಕ-ಇರಾನ್ ಸಂಸಂಘರ್ಷವನ್ನು ಕೊನೆಗೊಳಿಸಲು ಮತ್ತು ಹಾರ್ಮುಜ್ ಜಲಸಂಧಿಯ ಮೂಲಕ ಸಾಗಣೆಯನ್ನು ಪುನಃಸ್ಥಾಪಿಸಲು ಪ್ರಾಥಮಿಕ ಒಪ್ಪಂದಕ್ಕೆ ಬಂದಿರುವುದಾಗಿ ಡೊನಾಲ್ಡ್…
ಬೆಂಗಳೂರು : ಆರ್ಎಸ್ಎಸ್ನ ಸಾಂಸ್ಥಿಕ ಮತ್ತು ಕಾನೂನುಬದ್ಧ ಸ್ಥಿತಿಗತಿ ಕುರಿತು ಸ್ಪಷ್ಟನೆ ನೀಡುವಂತೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು…
ಮೈಸೂರು : ಪಬ್ನಲ್ಲಿ ಅಗ್ನಿ ಅವಘಡ ಸಂಭವಿಸಿ ಇಬ್ಬರು ಸಜೀವ ದಹನವಾಗಿರುವ ಘಟನೆ ನಗರದ ದಟ್ಟಗಳ್ಳಿಯಲ್ಲಿ ನಡೆದಿದೆ. ನಗರದ ರಿಂಗ್…
ಬೆಂಗಳೂರು: ಕರ್ನಾಟಕದವರಿಗೆ, ವೋಟ್ ಇದ್ದವರಿಗೆ ಮಾತ್ರ ನಾವು ಗ್ಯಾರಂಟಿ ಕೊಡುತ್ತೇವೆ ಎಂದು ಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ…