Categories: ರಾಜ್ಯ

ಸಂಸತ್‌ ಅಧಿವೇಶನ: ಬಿಜೆಪಿ ಆರೋಪಕ್ಕೆ ಕೋವಿಡ್‌ ಹಗರಣದ ಕೌಂಟರ್‌ ಕೊಡಲು ಕಾಂಗ್ರೆಸ್‌ ತಯಾರಿ

ಬೆಂಗಳೂರು: ಮುಡಾ ಹಾಗೂ ವಾಲ್ಮೀಕಿ ಹಗರಣವನ್ನು ಪ್ರಸ್ತಾಪಿಸಿ ರಾಷ್ಟ್ರೀಯ ಮಟ್ಟದಲ್ಲಿ ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ತೀವ್ರ ಮುಜುಗರ ಉಂಟು ಮಾಡಿದ್ದ ಬಿಜೆಪಿಗೆ ಕೌಂಟರ್‌ ಕೊಡಲು ಕಾಂಗ್ರೆಸ್‌ ಸಿದ್ಧತೆ ಮಾಡಿಕೊಳ್ಳುತ್ತಿದೆ.

ಅದೇ ರೀತಿಯ ಅಸ್ತ್ರ ಪ್ರಯೋಗಿಸಲು ಕೈ ನಾಯಕರು ಸಿದ್ಧತೆ ನಡೆಸಿದ್ದು, ಕೋವಿಡ್‌ ಹಗರಣದ ವರದಿಯನ್ನು ಮುಂಬುವರು ಸಂಸತ್‌ ಅಧಿವೇಶ ಸಂಸತ್ತಿನಲ್ಲಿ ಪ್ರಸ್ತಾಪಿಸಲು ತಯಾರಿ ಮಾಡಿಕೊಳ್ಳುತ್ತಿದ್ದಾರೆ.

ನ್ಯಾ. ಮೈಕೆಲ್ ಡಿ ಕುನ್ಹಾ ಅವರ ವರದಿ ಆಧರಿಸಿ ಬಿಜಿಪಿ ಸಂಸದ ಬಸವರಾಜ ಬೊಮ್ಮಾಯಿ ಹಾಗೂ ಡಿ ಸುಧಾಕರ್‌ ಅವರನ್ನು ಟಾರ್ಗೆಟ್‌ ಮಾಡುವ ನೆಪದಲ್ಲಿ ಪ್ರಧಾನಿ ಮೋದಿಗೆ ಸವಾಲು ಹಾಕುವುದು ಕಾಂಗ್ರೆಸ್‌ನ ಮಂತ್ರವಾಗಿದೆ. ಜೊತೆಗೆ ಈಗಾಗಲೇ ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಶ್ರೀರಾಮುಲು ವಿರುದ್ಧದ ಕೋವಿಡ್‌ ಹಗರಣದ ತನಿಖೆಗೆ ಎಸ್‌ಐಟಿ ರಚನೆ ಮಾಡಲಾಗಿದೆ. ಮುಂದುವರಿದು ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ್‌ ಖರ್ಗೆ 7000 ಸಾವಿರ ಕೋಟಿಗೂ ಹೆಚ್ಚು ಹಗರಣ ನಡೆದಿದೆ ಎಂದು ಆರೋಪಿಸಿದ್ದು. ಇದನ್ನೆಲ್ಲಾ ಮುಂದಿಟ್ಟುಕೊಂಡು ಕಾಂಗ್ರೆಸ್‌ನ ನಾಯಕರು ರಾಷ್ಟ್ರ ಮಟ್ಟದಲ್ಲಿ ಬಿಜೆಪಿಗೆ ಕೌಂಟರ್‌ ಕೊಟಲು ಸಜ್ಜಾಗಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರು ನ್ಯಾ. ಮೈಕೆಲ್ ಡಿ ಕುನ್ಹಾ ಅವರನ್ನು ಭೇಟಿಯಾಗಿ ಕೋವಿಡ್‌ ಹಗರಣದ ಪೂರ್ಣ ಪ್ರಮಾಣದ ವರದಿ ನೀಡುವಂತೆ ಮನವಿ ಮಾಡಿದ್ದಾರೆ. ಹೀಗೆ ಪೂರ್ಣ ಪ್ರಮಾಣದ ವರದಿ ಬರ್ತಿದಂತೆ ಇದು ಬಿಜೆಪಿಗೆ ಸವಾಲಾಗಿ ಪರಿಣಮಿಸಲಿದೆ.

ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ನರೇಂದ್ರ ಮೋದಿಯವರು ಮುಡಾ, ವಾಲ್ಮೀಕಿ ಹಗರಣಗಳ ಕುರಿತು ಕಾಂಗ್ರೆಸ್‌ ಪಕ್ಷವನ್ನು ಟೀಕಿಸುತ್ತಿದ್ದರು. ಈಗ ಕೋವಿಡ್‌ ಹಗರಣವನ್ನು ಮುಂದಿಟ್ಟು ದೆಹಲಿ ಮಟ್ಟದಲ್ಲಿ ಬಿಜೆಪಿ ರಾಷ್ಟ್ರೀಯ ನಾಯಕರಿಗೆ ಮಖಭಂಗ ಉಂಟುಮಾಡಲು ಸಿಎಂ ಸಿದ್ದರಾಮಯ್ಯ ಸಿದ್ಧತೆ ನಡೆಸಿದ್ದಾರೆ. ಮುಂಬರುವ ಲೋಕಸಭೆ ಅಧಿವೇಶನದಲ್ಲಿ ಕೈ ಸಂಸದರ ಮೂಲಕ ಹಗರಣವನ್ನು ಸಂಸತ್ತಿನಲ್ಲಿ ಚರ್ಚಿಸುವ ಕುರಿತು ಯೋಚನೆ ಮಾಡಲಾಗಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಭಾರತದ ಯೂರಿಯಾ ಘಟಕಗಳು ಅರ್ಧದಷ್ಟು ಸಾಮರ್ಥ್ಯದಲ್ಲಿ ಕಾರ್ಯ ನಿರ್ವಹಿಸುತ್ತಿವೆ: ಮೂಲಗಳಿಂದ ಮಾಹಿತಿ

ಹೊಸದಿಲ್ಲಿ: ಭಾರತದ ಯೂರಿಯಾ ಘಟಕಗಳು ಅರ್ಧದಷ್ಟು ಸಾಮರ್ಥ್ಯದಲ್ಲಿ ಕಾರ್ಯ ನಿರ್ವಹಿಸುತ್ತಿವೆ ಎಂದು ಮೂಲಗಳು ಹೇಳಿವೆ. ಪಶ್ಚಿಮ ಏಷ್ಯಾದಲ್ಲಿನ ಯುದ್ಧವು ಹೊರ್ಮುಜ್‌…

1 min ago

ಇಂಧನ ಸೌಲಭ್ಯಗಳ ಮೇಲೆ ದಾಳಿ ಮಾಡಿದರೆ, ಹೊರ್ಮುಜ್‌ ಸಂಪೂರ್ಣ ಮುಚ್ಚುತ್ತೇವೆ : ಅಮೆರಿಕಗೆ ಇರಾನ್‌ ಎಚ್ಚರಿಕೆ

ಟೆಹ್ರಾನ್ : ಪಶ್ಚಿಮ ಏಷ್ಯಾದಲ್ಲಿನ ಯುದ್ಧಕ್ಕೆ ಶೀಘ್ರವೇ ಅಂತ್ಯ ಹಾಡುವುದಾಗಿ ಶನಿವಾರವಷ್ಟೆ ಹೇಳಿದ್ದ ಟ್ರಂಪ್‌, ಈಗ ಇರಾನ್‌ ಮೇಲಿನ ದಾಳಿಗಳನ್ನು…

27 mins ago

ಇರಾನ್‌ ಕ್ಷಿಪಣಿಗಳನ್ನು ಹೊಡೆದುರುಳಿಸಿದ ಸೌದಿ ಅರೇಬಿಯಾ

ಸೌದಿ ಅರೇಬಿಯಾ : ಇರಾನ್-ಇಸ್ರೇಲ್ ಸಂಘರ್ಷದ ನಡುವೆ ಗಲ್ಫ್ ದೇಶಗಳ ಮೇಲಿನ ದಾಳಿಗಳು ಹೆಚ್ಚಾಗುತ್ತಿದ್ದು, ಇರಾನ್‌ನ ಎರಡು ಕ್ಷೀಪಣಿಗಳನ್ನು ಹೊಡೆದುರುಳಿಸಿರುವುದಾಗಿ…

1 hour ago

ಬಾಗಲಕೋಟೆ ಉಪಚುನಾವಣೆ : ನಾಮಪತ್ರ ಸಲ್ಲಿಸಿದ ಕಾಂಗ್ರೆಸ್‌ ಅಭ್ಯರ್ಥಿ ಉಮೇಶ್‌ ಮೇಟಿ

ಬಾಗಲಕೋಟೆ : ಬಾಗಲಕೋಟೆ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣಾ ಕಣ ರಂಗೇರಿದ್ದು, ಕಾಂಗ್ರೆಸ ಅಭ್ಯರ್ಥಿ ಉಮೇಶ್ ಮೇಟಿ ಅವರು ಇಂದು (ಮಾ.23)…

2 hours ago

ಆಕ್ರಮಣ ತಡೆಯಲು ಸಿದ್ದ : ಅಮೆರಿಕಗೆ ಕ್ಯೂಬಾ ಎಚ್ಚರಿಕೆ

ಹವಾನಾ : ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರ ಗೊಡ್ಡು ಬೆದರಿಕೆಗಳಿಗೆ ನಾವು ಜಗ್ಗುವುದಿಲ್ಲ ಎಂದು ಕ್ಯೂಬಾ ದೇಶದ ವಿದೇಶಾಂಗ…

2 hours ago

ಹನೂರು | ಇಂದಿರಾ ಕ್ಯಾಂಟೀನ್‌ಗೆ ದಿಢೀರ್‌ ಭೇಟಿ ನೀಡಿದ ಶಾಸಕ ಮಂಜುನಾಥ್‌

ಹನೂರು : ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಶಾಸಕ ಎಂ.ಆರ್ ಮಂಜುನಾಥ್ ದಿಢೀರ್ ಭೇಟಿ ನೀಡಿ ಗ್ರಾಹಕರಿಗೆ ತಯಾರಿಸಿದ್ದ ಅನ್ನ ಸಾಂಬಾರ್…

2 hours ago