Categories: ರಾಜ್ಯ

ಸಂಸತ್‌ ಅಧಿವೇಶನ: ಬಿಜೆಪಿ ಆರೋಪಕ್ಕೆ ಕೋವಿಡ್‌ ಹಗರಣದ ಕೌಂಟರ್‌ ಕೊಡಲು ಕಾಂಗ್ರೆಸ್‌ ತಯಾರಿ

ಬೆಂಗಳೂರು: ಮುಡಾ ಹಾಗೂ ವಾಲ್ಮೀಕಿ ಹಗರಣವನ್ನು ಪ್ರಸ್ತಾಪಿಸಿ ರಾಷ್ಟ್ರೀಯ ಮಟ್ಟದಲ್ಲಿ ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ತೀವ್ರ ಮುಜುಗರ ಉಂಟು ಮಾಡಿದ್ದ ಬಿಜೆಪಿಗೆ ಕೌಂಟರ್‌ ಕೊಡಲು ಕಾಂಗ್ರೆಸ್‌ ಸಿದ್ಧತೆ ಮಾಡಿಕೊಳ್ಳುತ್ತಿದೆ.

ಅದೇ ರೀತಿಯ ಅಸ್ತ್ರ ಪ್ರಯೋಗಿಸಲು ಕೈ ನಾಯಕರು ಸಿದ್ಧತೆ ನಡೆಸಿದ್ದು, ಕೋವಿಡ್‌ ಹಗರಣದ ವರದಿಯನ್ನು ಮುಂಬುವರು ಸಂಸತ್‌ ಅಧಿವೇಶ ಸಂಸತ್ತಿನಲ್ಲಿ ಪ್ರಸ್ತಾಪಿಸಲು ತಯಾರಿ ಮಾಡಿಕೊಳ್ಳುತ್ತಿದ್ದಾರೆ.

ನ್ಯಾ. ಮೈಕೆಲ್ ಡಿ ಕುನ್ಹಾ ಅವರ ವರದಿ ಆಧರಿಸಿ ಬಿಜಿಪಿ ಸಂಸದ ಬಸವರಾಜ ಬೊಮ್ಮಾಯಿ ಹಾಗೂ ಡಿ ಸುಧಾಕರ್‌ ಅವರನ್ನು ಟಾರ್ಗೆಟ್‌ ಮಾಡುವ ನೆಪದಲ್ಲಿ ಪ್ರಧಾನಿ ಮೋದಿಗೆ ಸವಾಲು ಹಾಕುವುದು ಕಾಂಗ್ರೆಸ್‌ನ ಮಂತ್ರವಾಗಿದೆ. ಜೊತೆಗೆ ಈಗಾಗಲೇ ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಶ್ರೀರಾಮುಲು ವಿರುದ್ಧದ ಕೋವಿಡ್‌ ಹಗರಣದ ತನಿಖೆಗೆ ಎಸ್‌ಐಟಿ ರಚನೆ ಮಾಡಲಾಗಿದೆ. ಮುಂದುವರಿದು ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ್‌ ಖರ್ಗೆ 7000 ಸಾವಿರ ಕೋಟಿಗೂ ಹೆಚ್ಚು ಹಗರಣ ನಡೆದಿದೆ ಎಂದು ಆರೋಪಿಸಿದ್ದು. ಇದನ್ನೆಲ್ಲಾ ಮುಂದಿಟ್ಟುಕೊಂಡು ಕಾಂಗ್ರೆಸ್‌ನ ನಾಯಕರು ರಾಷ್ಟ್ರ ಮಟ್ಟದಲ್ಲಿ ಬಿಜೆಪಿಗೆ ಕೌಂಟರ್‌ ಕೊಟಲು ಸಜ್ಜಾಗಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರು ನ್ಯಾ. ಮೈಕೆಲ್ ಡಿ ಕುನ್ಹಾ ಅವರನ್ನು ಭೇಟಿಯಾಗಿ ಕೋವಿಡ್‌ ಹಗರಣದ ಪೂರ್ಣ ಪ್ರಮಾಣದ ವರದಿ ನೀಡುವಂತೆ ಮನವಿ ಮಾಡಿದ್ದಾರೆ. ಹೀಗೆ ಪೂರ್ಣ ಪ್ರಮಾಣದ ವರದಿ ಬರ್ತಿದಂತೆ ಇದು ಬಿಜೆಪಿಗೆ ಸವಾಲಾಗಿ ಪರಿಣಮಿಸಲಿದೆ.

ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ನರೇಂದ್ರ ಮೋದಿಯವರು ಮುಡಾ, ವಾಲ್ಮೀಕಿ ಹಗರಣಗಳ ಕುರಿತು ಕಾಂಗ್ರೆಸ್‌ ಪಕ್ಷವನ್ನು ಟೀಕಿಸುತ್ತಿದ್ದರು. ಈಗ ಕೋವಿಡ್‌ ಹಗರಣವನ್ನು ಮುಂದಿಟ್ಟು ದೆಹಲಿ ಮಟ್ಟದಲ್ಲಿ ಬಿಜೆಪಿ ರಾಷ್ಟ್ರೀಯ ನಾಯಕರಿಗೆ ಮಖಭಂಗ ಉಂಟುಮಾಡಲು ಸಿಎಂ ಸಿದ್ದರಾಮಯ್ಯ ಸಿದ್ಧತೆ ನಡೆಸಿದ್ದಾರೆ. ಮುಂಬರುವ ಲೋಕಸಭೆ ಅಧಿವೇಶನದಲ್ಲಿ ಕೈ ಸಂಸದರ ಮೂಲಕ ಹಗರಣವನ್ನು ಸಂಸತ್ತಿನಲ್ಲಿ ಚರ್ಚಿಸುವ ಕುರಿತು ಯೋಚನೆ ಮಾಡಲಾಗಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಹನೂರಿನಲ್ಲಿ ಮೂವರ ಎನ್‌ಕೌಂಟರ್ ಪ್ರಕರಣ: ಘಟನಾ ಸ್ಥಳಕ್ಕೆ ತನಿಖಾ ತಂಡ ಭೇಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್‌ಕೌಂಟರ್ ಘಟನೆಯ…

14 mins ago

ವಿಚಾರಣೆ ಇಲ್ಲದೆ ಶಿಕ್ಷೆ ಕೊಡಲು ಸಂವಿಧಾನ ಒಪ್ಪುವುದಿಲ್ಲ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…

3 hours ago

ಆ ಮೂರು ಜೀವಗಳಿಗೂ ಬೆಲೆಯೇ ಇರಲಿಲ್ಲವೇ?

ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…

3 hours ago

ಅಸಮಾಧಾನದ ಬೇಗೆ: ಸಿಎಂ ಡಿಕೆಶಿಗೆ ಹೈಕಮಾಂಡ್ ‘ಎಸಿ’

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ರಾಜ್ಯ ಕಾಂಗ್ರೆಸ್‌ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…

3 hours ago

ನಾಲ್ಕು ಶೂಟೌಟ್ ಪ್ರಕರಣ; ಏಳು ಸಾವು

ಮಹಾದೇಶ ಎಂ ಗೌಡ ೨೦೧೪ರಿಂದ ೨೦೨೬ರವರೆಗೆ ನಡೆದ ಪ್ರಕರಣಗಳು ಹನೂರು: ತಾಲ್ಲೂಕಿನ ಕಾವೇರಿ ವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ…

3 hours ago