ರಾಜ್ಯ

ವರದಿ ಬಂದ ಮೇಲೆ ಕೋವಿಡ್‌ ಹಗರಣದ ತನಿಖೆ ಶುರುವಾಗುತ್ತದೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಕೋವಿಡ್‌ ಹಗರಣದ ತನಿಖೆಗೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಕುನ್ಹಾ ಮಧ್ಯಂತರ ವರದಿ ಪರಿಶೀಲನೆ ಮಾಡಿದ್ದೇವೆ. ವರದಿ ಬಂದ ಬಳಿಕ ತನಿಖೆ ಆರಂಭ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಗರಣಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಕುನ್ಹಾ ಮಧ್ಯಂತರ ವರದಿ ಪರಿಶೀಲನೆ ಮಾಡಿದ್ದೇವೆ. ವರದಿ ಶಿಫಾರಸ್ಸಿನ ಮೇಲೆ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ತಿಳಿಸಿದ್ದೇನೆ. ಎಫ್‌ಐಆರ್‌ ಸೇರಿದಂತೆ ಪ್ರತಿಯೊಂದು ವಿಚಾರಣೆ ಮಾಡಬಹುದು. ಹಿಂದೆ ಚಾಮರಾಜನಗರಕ್ಕೂ ನಾನು ಹಾಗೂ ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿದ್ದೆವು. ಮುಂದೆ ಬೆಳಗಾವಿಯಲ್ಲಿ ಸಂಪುಟ ಸಭೆ ನಡೆಯಲಿದ್ದು, ಈ ಬಗ್ಗೆ ಸಂಪೂರ್ಣ ಚರ್ಚೆ ನಡೆಯಲಿದೆ ಎಂದು ಮಾಹಿತಿ ನೀಡಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಬೆಂಗಳೂರಿನಲ್ಲಿ 84 ಲಕ್ಷ ಆರ್‌ಟಿಪಿಸಿಆರ್‌ ಟೆಸ್ಟ್‌ ಮಾಡಿದ್ದಾರೆ. 84 ಲಕ್ಷ ಆರ್‌ಟಿಪಿಸಿಆರ್‌ ಟೆಸ್ಟ್‌ಗೆ 500 ಕೋಟಿ ರೂಪಾಯಿ ಆಗಿದೆ. ಈ ಸಂಬಂಧ 400 ಕೋಟಿ ಹಣ ಪಾವತಿ ಮಾಡಿದ್ದಾರೆ. ಅಧಿಕಾರಿಗಳೇ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಯಾರೆಲ್ಲಾ ಸಹಿ ಮತ್ತು ಆದೇಶ ಕೊಟ್ಟಿದ್ದಾರೋ ಆ ಬಗ್ಗೆ ಪರಿಶೀಲನೆ ಮಾಡುತ್ತಿದ್ದೇವೆ. ಕಾನೂನು ಬಾಹಿರವಾಗಿ ಏನೇನೂ ಆಗಿದೆಯೋ ಎಲ್ಲವನ್ನು ಈಗ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಹೇಳಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಎಲ್‌ಪಿಜಿ ಗ್ಯಾಸ್‌ ಸಮಸ್ಯೆ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ

ಕೊಪ್ಪಳ: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದಿಂದಾಗಿ ಆಟೋ ಎಲ್‌ಪಿಜಿ ಗ್ಯಾಸ್‌ ಸಮಸ್ಯೆ ಉಂಟಾಗಿದ್ದು, ಜನರಿಗೆ ತೊಂದರೆ ಆಗದಂತೆ ನೋಡಿಕೊಳ್ಳುವುದೇ ನಮ್ಮ ಧರ್ಮ…

53 seconds ago

ಧೋನಿ, ಕಪಿಲ್‌ ದೇವ್‌ಗೆ ಕ್ಷಮೆ ಕೇಳಿದ ಯುವರಾಜ್‌ ಸಿಂಗ್‌

ನವದೆಹಲಿ: ಭಾರತದ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್‌ ಭಾರತದ ವಿಶ್ವಕಪ್‌ ವಿಜೇತ ನಾಯಕರುಗಳಾದ ಮಹೇಂದ್ರ ಸಿಂಗ್‌ ಧೋನಿ ಹಾಗೂ ಕಪಿಲ್‌…

27 mins ago

ರಾಜ್ಯದಲ್ಲಿ ಇಂದು ಕೂಡ ಮುಂದುವರಿಯಲಿದೆ ಮಳೆ ಆರ್ಭಟ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ 22 ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ…

52 mins ago

ಕಬಿನಿ ಹಿನ್ನೀರಿನಲ್ಲಿ ಯಂಗ್ ಟೈಗರ್‌ ಕೂಲ್‌ ಕೂಲ್‌

ಎಚ್.ಡಿ.ಕೋಟೆ: ಕಬಿನಿ ಹಿನ್ನೀರಿನಲ್ಲಿ ಹುಲಿಯೊಂದು ನೀರಿನಲ್ಲಿ ಮುಳುಗಿ ವಿಶ್ರಮಿಸುತ್ತಿರುವ ದೃಶ್ಯ ಸೋಷಿಯಲ್‌ ಮೀಡಿಯಾದಲ್ಲಿ ಫುಲ್‌ ವೈರಲ್‌ ಆಗಿದೆ. ರಾಜ್ಯದಲ್ಲಿ ದಿನದಿಂದ…

1 hour ago

ಕಬಿನಿ ಹಿನ್ನೀರು ಪ್ರದೇಶದಲ್ಲಿ ವನ್ಯಜೀವಿ ಬೇಟೆಯಾಡುತ್ತಿದ್ದವರ ಬಂಧನ

ಎಚ್.ಡಿ.ಕೋಟೆ: ಕಬಿನಿ ಹಿನ್ನೀರಿನ ಕಾಡಂಚಿನ ಪ್ರದೇಶದಲ್ಲಿ ವನ್ಯಜಜೀವಿಗಳನ್ನು ಬೇಟೆಯಾಡುತ್ತಿದ್ದ ಇಬ್ಬರನ್ನು ಬಂಧಿಸಲಾಗಿದೆ. ಕೊಡಗು ಜಿಲ್ಲೆ ಸೋಮವಾರಪೇಟೆ ತಾಲ್ಲೂಕಿನ ಕೂತಿ ಗ್ರಾಮದ…

2 hours ago

ಪ್ರವಾಸಿ ಮಹಿಳೆ ನಾಪತ್ತೆ

ಮಡಿಕೇರಿಗೆ ಬಂದಿದ್ದ ಕೇರಳ ಮೂಲದ ಟ್ರೆಕ್ಕರ್ ಮಡಿಕೇರಿ: ಪ್ರವಾಸಕ್ಕೆ ಬಂದಿದ್ದ ಮಹಿಳೆಯೊಬ್ಬರು ಚಾರಣಕ್ಕೆ ತೆರಳಿದ್ದಾಗ ನಾಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆಯ…

5 hours ago