ರಾಜ್ಯ

ಕೋವಿಡ್‌ ಹಣ ತಿಂದವರನ್ನು ಬಿಡಲ್ಲ: ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು: ಕೋವಿಡ್ ಅಕ್ರಮದಲ್ಲಿ ಕುನ್ಹಾ ಅವರ ಸಮಿತಿ ಶಿಫಾರಸ್ಸಿನಂತೆ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಕೋವಿಡ್ ಹಣ ತಿಂದವರನ್ನು ಬಿಡುವುದಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ನ್ಯಾಯಮೂರ್ತಿ ಮೈಖಲ್ ಕುನ್ಹ ವಿಚಾರಣೆ ಆಯೋಗದ ಶಿಫಾರಸ್ಸು ಬಗ್ಗೆ ಕೈಗೊಳ್ಳಬೇಕಾದ ಕ್ರಮಗಳ ಉಸ್ತುವಾರಿ ಹಾಗೂ ಅಧಿಕಾರಿಗಳ ಸಮಿತಿ ವರದಿ ಪರಾಮರ್ಶೆ ಹಾಗೂ ಶಿಫಾರಸ್ಸು ಕುರಿತು ವಿಧಾನಸೌಧದಲ್ಲಿ ಉಪಸಮಿತಿಯು ಶನಿವಾರ ಸಭೆ ನಡೆಸಿತು. ನಂತರ ಸಮಿತಿಯ ಮುಖ್ಯಸ್ಥರಾದ ಶಿವಕುಮಾರ್ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದರು.

ನಮ್ಮ ಸರ್ಕಾರ ಕೋವಿಡ್ ಅವಧಿಯಲ್ಲಿನ ಅಕ್ರಮದ ಕುರಿತ ನ್ಯಾ.ಜಾನ್ ಮೈಕಲ್ ಕುನ್ಹಾ ಅವರ ವರದಿಯನ್ನು ಸ್ವೀಕರಿಸಿದ್ದೇವೆ. ಈ ವರದಿಯ ಪರಿಶೀಲನೆಯನ್ನು ಮಾತ್ರ ನಾವು ಮಾಡುತ್ತಿದ್ದೇವೆ. ಉಳಿದಂತೆ ಸಮಿತಿ ವರದಿಯ ಶಿಫಾರಸ್ಸಿನಂತೆ ಕಾನೂನು ಚೌಕಟ್ಟಿನಲ್ಲಿ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇವೆ. ಮತ್ತೊಂದು ಕಡೆ ಇಲಾಖೆಯಲ್ಲಿ ಅಧಿಕಾರಿಗಳ ವಿರುದ್ಧವೂ ವಿಚಾರಣೆ ನಡೆಯಲಿದೆ. ಕೆಲವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ವರದಿಯಲ್ಲಿ ಶಿಫಾರಸ್ಸು ಮಾಡಲಾಗಿದೆ. ಹೀಗಾಗಿ ಎಷ್ಟು ಪ್ರಕರಣ ದಾಖಲಾಗುತ್ತವೋ ಗೊತ್ತಿಲ್ಲ ಎಂದು ತಿಳಿಸಿದರು.

ಚಾಮರಾಜನಗರ ಆಕ್ಸಿಜನ್‌ ದುರಂತ: ಪ್ರಕರಣ ಮತ್ತೆ ತನಿಖೆಗೆ
ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ತಪ್ಪು ನಡೆದಿಲ್ಲ ಎಂದು ವರದಿ ನೀಡಿದ್ದನ್ನು ನಮ್ಮ ಸರ್ಕಾರ ಒಪ್ಪುವುದಿಲ್ಲ. ಹೀಗಾಗಿ ಈ ಪ್ರಕರಣದ ಬಗ್ಗೆ ಮತ್ತೆ ತನಿಖೆಯಾಗಬೇಕು. ನಾನು ಹಾಗೂ ಸಿದ್ದರಾಮಯ್ಯ ಅವರೇ ಆ ಆಸ್ಪತ್ರೆಗೆ ಹೋಗಿ ಅಲ್ಲಿನ ಪರಿಸ್ಥಿತಿ ಅಲೋಕನ ಮಾಡಿದ್ದೆವು. 36 ಜನ ಸತ್ತರೆ, ಆಗಿನ ಸಚಿವರು ಕೇವಲ ಮೂರು ಮಂದಿ ಸತ್ತಿದ್ದರು ಎಂದು ಹೇಳಿದ್ದರು. ನಾನು ಮೃತಪಟ್ಟ 36 ಮಂದಿಯ ಮನೆಗಳಿಗೆ ಭೇಟಿ ನೀಡಿದ್ದೇನೆ. ಈ ವಿಚಾರವಾಗಿ ಬೆಳಗಾವಿಯಲ್ಲಿ ಸಭೆ ಮಾಡಿ ಈ ವಿಚಾರಣೆ ಪ್ರಕ್ರಿಯೆ ಪರಿಶೀಲಿಸುತ್ತೇವೆ. ಈ ಸಮಿತಿಯು ಅಧಿಕಾರಿಗಳ ವಿಚಾರಣೆ ಪ್ರಕ್ರಿಯೆಯಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ. ನಿಷ್ಪಕ್ಷಪಾತವಾಗಿ ತನಿಖೆ ಮಾಡುವಂತೆ ಅಧಿಕಾರಿಗಳಿಗೆ ಸ್ವಾತಂತ್ರ್ಯ ನೀಡಲಾಗಿದೆ ಎಂದರು.

ಕುನ್ಹಾ ಅವರ ವರದಿ ಆಧಾರದ ಮೇಲೆ ಎಸ್‍ಐಟಿ ರಚನೆ ಪ್ರಕ್ರಿಯೆ ನಡೆಯುತ್ತಿದ್ದು, ಎಲ್ಲವೂ ಅಂತಿಮವಾದ ಬಳಿಕ ನಿಮಗೆ ಮಾಹಿತಿ ನೀಡುತ್ತೇವೆ. ಈ ವಿಚಾರವಾಗಿ ನಾವು ಬಿಜೆಪಿಯವರಿಗೆ ಉತ್ತರ ನೀಡುವ ಅವಶ್ಯಕತೆ ಇಲ್ಲ. ಸಮಿತಿ ಶಿಫಾರಸ್ಸು ಪರಿಶೀಲಿಸುತ್ತಿದ್ದು, ಅಧಿಕಾರಿಗಳಿಗೆ ವಿಚಾರಣೆಯ ನಡೆಸುವ ಸಂಪೂರ್ಣ ಅಧಿಕಾರ ನೀಡಿದ್ದೇವೆ ಎಂದು ತಿಳಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ: ಜೆಡಿಎಸ್‌ ಎಂಎಲ್‌ಸಿ ಸೂರಜ್‌ ರೇವಣ್ಣಗೆ ಬಿಗ್‌ ಶಾಕ್‌

ಬೆಂಗಳೂರು: ತಮ್ಮ ವಿರುದ್ಧ ದಾಖಲಾಗಿರುವ ಅಸಹಜ ಲೈಂಗಿಕ ಪ್ರಕರಣವನ್ನು ಕೈಬಿಡುವಂತೆ ಕೋರಿ, ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಹಾಗೂ ಮಾಜಿ…

5 hours ago

ಟಿ.ನರಸೀಪುರ| ಆನೆ ದಾಳಿಗೆ ರೈತ ಬಲಿ

ಟಿ.ನರಸೀಪುರ: ಕಾಡಾನೆ ದಾಳಿಗೆ ಸಿಲುಕಿ ರೈತರೊಬ್ಬರು ಬಲಿಯಾಗಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ತಲಕಾಡು ಪೊಲೀಸ್‌ ಠಾಣೆ ವ್ಯಾಪ್ತಿಯ…

8 hours ago

ಮೈಸೂರು ನಗರ ಸಿಸಿಬಿ ಪೊಲೀಸರ ಕಾರ್ಯಾಚರಣೆ: ಮಾದಕ ವಸ್ತು ಪೂರೈಸುತ್ತಿದ್ದ ಇಬ್ಬರ ಬಂಧನ

ಮೈಸೂರು: ಮೈಸೂರು ನಗರದ ಸಿಸಿಬಿ ಪೊಲೀಸರು ಇಂದು ಮಾದಕ ವಸ್ತುಗಳ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.…

9 hours ago

ಮಕ್ಕಳು ಪಠ್ಯೇತರ ಚಟುವಟಿಕೆಯಲ್ಲೂ ಆಸಕ್ತಿ ಬೆಳೆಸಿಕೊಳ್ಳಿ: ದಿನೇಶ್‌ ಗೂಳಿಗೌಡ

ಮಂಡ್ಯ: ಮಕ್ಕಳು ಪಠ್ಯೇತರ ಚಟುವಟಿಕೆಗಳಾದ ಚಿತ್ರಕಲೆ, ಸಂಗೀತ, ಕ್ರೀಡಾ ಆಸಕ್ತಿಯನ್ನು ಬೆಳೆಸಿಕೊಳ್ಳಬೇಕು ಎಂದು ವಿಧಾನಪರಿಷತ್‌ ಸದಸ್ಯ ಹಾಗೂ ಕರ್ನಾಟಕ ರಾಜ್ಯ…

9 hours ago

ಶಾಸಕರ ವಿದೇಶಿ ಪ್ರವಾಸಕ್ಕೂ ರಾಜಕೀಯ ಬೆಳವಣಿಗೆಗಳಿಗೂ ಸಂಬಂಧವಿಲ್ಲ: ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಶಾಸಕರ ವಿದೇಶಿ ಪ್ರವಾಸಕ್ಕೂ ರಾಜಕೀಯ ಬೆಳವಣಿಗೆಗಳಿಗೂ ಸಂಬಂಧವಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು.…

9 hours ago

ಸಿ.ಜೆ.ರಾಯ್‌ ಆತ್ಮಹತ್ಯೆ ಪ್ರಕರಣ: ಅಂತಿಮ ಹಂತಕ್ಕೆ ತಲುಪಿದ ಎಸ್‌ಐಟಿ ತನಿಖೆ

ಬೆಂಗಳೂರು: ಉದ್ಯಮಿ ಸಿ.ಜೆ.ರಾಯ್‌ ಆತ್ಮಹತ್ಯೆ ಪ್ರಕರಣದ ತನಿಖೆ ಅಂತಿಮ ಹಂತ ತಲುಪಿದ್ದು, ವಿಶೇಷ ತನಿಖಾ ತಂಡ ತನಿಖೆಯನ್ನು ಪೂರ್ಣಗೊಳಿಸಿ ವರದಿ…

9 hours ago