ರಾಜ್ಯ

ಕೋವಿಡ್‌ ಹಣ ತಿಂದವರನ್ನು ಬಿಡಲ್ಲ: ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು: ಕೋವಿಡ್ ಅಕ್ರಮದಲ್ಲಿ ಕುನ್ಹಾ ಅವರ ಸಮಿತಿ ಶಿಫಾರಸ್ಸಿನಂತೆ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಕೋವಿಡ್ ಹಣ ತಿಂದವರನ್ನು ಬಿಡುವುದಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ನ್ಯಾಯಮೂರ್ತಿ ಮೈಖಲ್ ಕುನ್ಹ ವಿಚಾರಣೆ ಆಯೋಗದ ಶಿಫಾರಸ್ಸು ಬಗ್ಗೆ ಕೈಗೊಳ್ಳಬೇಕಾದ ಕ್ರಮಗಳ ಉಸ್ತುವಾರಿ ಹಾಗೂ ಅಧಿಕಾರಿಗಳ ಸಮಿತಿ ವರದಿ ಪರಾಮರ್ಶೆ ಹಾಗೂ ಶಿಫಾರಸ್ಸು ಕುರಿತು ವಿಧಾನಸೌಧದಲ್ಲಿ ಉಪಸಮಿತಿಯು ಶನಿವಾರ ಸಭೆ ನಡೆಸಿತು. ನಂತರ ಸಮಿತಿಯ ಮುಖ್ಯಸ್ಥರಾದ ಶಿವಕುಮಾರ್ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದರು.

ನಮ್ಮ ಸರ್ಕಾರ ಕೋವಿಡ್ ಅವಧಿಯಲ್ಲಿನ ಅಕ್ರಮದ ಕುರಿತ ನ್ಯಾ.ಜಾನ್ ಮೈಕಲ್ ಕುನ್ಹಾ ಅವರ ವರದಿಯನ್ನು ಸ್ವೀಕರಿಸಿದ್ದೇವೆ. ಈ ವರದಿಯ ಪರಿಶೀಲನೆಯನ್ನು ಮಾತ್ರ ನಾವು ಮಾಡುತ್ತಿದ್ದೇವೆ. ಉಳಿದಂತೆ ಸಮಿತಿ ವರದಿಯ ಶಿಫಾರಸ್ಸಿನಂತೆ ಕಾನೂನು ಚೌಕಟ್ಟಿನಲ್ಲಿ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇವೆ. ಮತ್ತೊಂದು ಕಡೆ ಇಲಾಖೆಯಲ್ಲಿ ಅಧಿಕಾರಿಗಳ ವಿರುದ್ಧವೂ ವಿಚಾರಣೆ ನಡೆಯಲಿದೆ. ಕೆಲವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ವರದಿಯಲ್ಲಿ ಶಿಫಾರಸ್ಸು ಮಾಡಲಾಗಿದೆ. ಹೀಗಾಗಿ ಎಷ್ಟು ಪ್ರಕರಣ ದಾಖಲಾಗುತ್ತವೋ ಗೊತ್ತಿಲ್ಲ ಎಂದು ತಿಳಿಸಿದರು.

ಚಾಮರಾಜನಗರ ಆಕ್ಸಿಜನ್‌ ದುರಂತ: ಪ್ರಕರಣ ಮತ್ತೆ ತನಿಖೆಗೆ
ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ತಪ್ಪು ನಡೆದಿಲ್ಲ ಎಂದು ವರದಿ ನೀಡಿದ್ದನ್ನು ನಮ್ಮ ಸರ್ಕಾರ ಒಪ್ಪುವುದಿಲ್ಲ. ಹೀಗಾಗಿ ಈ ಪ್ರಕರಣದ ಬಗ್ಗೆ ಮತ್ತೆ ತನಿಖೆಯಾಗಬೇಕು. ನಾನು ಹಾಗೂ ಸಿದ್ದರಾಮಯ್ಯ ಅವರೇ ಆ ಆಸ್ಪತ್ರೆಗೆ ಹೋಗಿ ಅಲ್ಲಿನ ಪರಿಸ್ಥಿತಿ ಅಲೋಕನ ಮಾಡಿದ್ದೆವು. 36 ಜನ ಸತ್ತರೆ, ಆಗಿನ ಸಚಿವರು ಕೇವಲ ಮೂರು ಮಂದಿ ಸತ್ತಿದ್ದರು ಎಂದು ಹೇಳಿದ್ದರು. ನಾನು ಮೃತಪಟ್ಟ 36 ಮಂದಿಯ ಮನೆಗಳಿಗೆ ಭೇಟಿ ನೀಡಿದ್ದೇನೆ. ಈ ವಿಚಾರವಾಗಿ ಬೆಳಗಾವಿಯಲ್ಲಿ ಸಭೆ ಮಾಡಿ ಈ ವಿಚಾರಣೆ ಪ್ರಕ್ರಿಯೆ ಪರಿಶೀಲಿಸುತ್ತೇವೆ. ಈ ಸಮಿತಿಯು ಅಧಿಕಾರಿಗಳ ವಿಚಾರಣೆ ಪ್ರಕ್ರಿಯೆಯಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ. ನಿಷ್ಪಕ್ಷಪಾತವಾಗಿ ತನಿಖೆ ಮಾಡುವಂತೆ ಅಧಿಕಾರಿಗಳಿಗೆ ಸ್ವಾತಂತ್ರ್ಯ ನೀಡಲಾಗಿದೆ ಎಂದರು.

ಕುನ್ಹಾ ಅವರ ವರದಿ ಆಧಾರದ ಮೇಲೆ ಎಸ್‍ಐಟಿ ರಚನೆ ಪ್ರಕ್ರಿಯೆ ನಡೆಯುತ್ತಿದ್ದು, ಎಲ್ಲವೂ ಅಂತಿಮವಾದ ಬಳಿಕ ನಿಮಗೆ ಮಾಹಿತಿ ನೀಡುತ್ತೇವೆ. ಈ ವಿಚಾರವಾಗಿ ನಾವು ಬಿಜೆಪಿಯವರಿಗೆ ಉತ್ತರ ನೀಡುವ ಅವಶ್ಯಕತೆ ಇಲ್ಲ. ಸಮಿತಿ ಶಿಫಾರಸ್ಸು ಪರಿಶೀಲಿಸುತ್ತಿದ್ದು, ಅಧಿಕಾರಿಗಳಿಗೆ ವಿಚಾರಣೆಯ ನಡೆಸುವ ಸಂಪೂರ್ಣ ಅಧಿಕಾರ ನೀಡಿದ್ದೇವೆ ಎಂದು ತಿಳಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮಣಿಸಿದ ಜೆನ್ ಝೀ ಚಳವಳಿ

ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…

8 mins ago

ಸಂಪುಟ ವಿಸ್ತರಣೆ ವಿಳಂಬ; ಡಿಕೆಶಿ ಅಸಮಾಧಾನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…

11 mins ago

ಕೃಷಿಗೆ ನೀರಿಲ್ಲ ಎಂಬ ಆದೇಶದಿಂದ ರೈತರು ಕಂಗಾಲು

ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…

17 mins ago

ರಸ್ತೆ ಬದಿ ಅಗೆದು ಹಾಗೆಯೇ ಬಿಟ್ಟ ಗುತ್ತಿಗೆದಾರರು

ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…

23 mins ago

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

13 hours ago