ಮಂಡ್ಯ: ನಾನು ಕೋವಿಡ್ ಹಗರಣದಲ್ಲಿ ಸಿಲುಕುವ ಪ್ರಮೇಯವೇ ಬರಲ್ಲ ಎಂದು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಾ.ಸಿ.ಎನ್.ಮಂಜುನಾಥ್ ಹೇಳಿದ್ದಾರೆ.
ಕೋವಿಡ್ ಹಗರಣ ಸಂಬಂಧ ಮಂಡ್ಯದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಕೋವಿಡ್-19 ಸಮಿತಿಯ ಮುಖ್ಯಸ್ಥನಲ್ಲ. ಆ ಸಮಿತಿಗೆ ಒಬ್ಬ ಸಲಹೆಗಾರ ಅಷ್ಟೆ. ನಾನು ಸಲಹೆಗಾರನಾಗಿ ಅಭಿಪ್ರಾಯ ಕೊಡುತ್ತಿದ್ದೆ ಅಷ್ಟೇ. ಈ ಹಗರಣದಲ್ಲಿ ಸಿಲುಕುವ ಪ್ರಮೇಯವೇ ಬರಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಇನ್ನು ನಿಮ್ಮ ವಿರುದ್ಧ ಬೆಡ್ ಖರೀದಿ ಬಗ್ಗೆ ಆರೋಪಗಳು ಕೇಳಿಬಂದಿವೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಆ ಸಮಿತಿಯಲ್ಲಿ ಅನೇಕ ತಜ್ಞರು ಹಾಗೂ ಇಲಾಖೆಗಳಿವೆ. ಹಾಗೇಯೇ ಅದು ಮೆಡಿಕಲ್ ಎಮರ್ಜೆನ್ಸಿ. ಪ್ರಪಂಚದಾದ್ಯಂತ ತುರ್ತು ಪರಿಸ್ಥಿತಿ ಇದ್ದ ಕಾರಣ ನಮ್ಮನ್ನು ಸ್ಪೆಷಲಿಸ್ಟ್ ಆಗಿ ನೇಮಕ ಮಾಡಿಕೊಂಡಿದ್ದರು ಅಷ್ಟೇ. ನಮಗೆ ನೇರ ಆಡಳಿತವಿರಲಿಲ್ಲ ಎಂದರು.
ಗುಂಡ್ಲುಪೇಟೆ: ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಪ್ರಾಣಿಗಳಿಗೆ ಕುಡಿಯುವ ನೀರಿನ ಸಮಸ್ಯೆಗೆ ಈಗ ಬ್ರೇಕ್ ಹಾಕಲಾಗಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಅರಣ್ಯಾಧಿಕಾರಿಗಳು…
ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜೀವ ರಕ್ಷಕ ಔಷಧಿಗಳ ಕೊರತೆಯಿರುವುದು ನಿಜ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.…
ಬೆಂಗಳೂರು: ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ನಟಿ ರನ್ಯಾರಾವ್ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದು, ಡಿಐಆರ್ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದೇಗೆ ಎಂಬ…
ಹಾಸನ: ಕೌಟುಂಬಿಕ ಕಲಹದಿಂದ ಬೇಸತ್ತು ತಾಯಿ-ಮಗ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಕಬ್ಬಳ್ಳಿ…
ಬೆಂಗಳೂರು: ಗ್ರೇಟರ್ ಬೆಂಗಳೂರು ವಿಧೇಯಕಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಂಪೂರ್ಣ ವಿರೋಧ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಈ…
ಸಮತೋಲನದ ಬಜೆಟ್!... ಮೂಡಿ ಬಂದಿದೆ ಸರ್ವರ ಹಿತ ಏಳ್ಗೆಯ ಕರ್ನಾಟಕದ ಮಾದರಿ ಜನಪರ ಬಜೆಟ್! ಮುಖ್ಯಮಂತ್ರಿಗಳ ಅನುಭವದ ಮೂಸೆಯಲಿ ಸುಸ್ಥಿರ…