ಬೆಂಗಳೂರು: ಕೋವಿಡ್ ಹಗರಣ ಆರೋಪಕ್ಕೆ ಸಂಬಂಧಿಸಿದಂತೆ ಸಂಸದ ಡಾ.ಕೆ.ಸುಧಾಕರ್ ಪ್ರತಿಕ್ರಿಯೆ ನೀಡಿದ್ದು, ನಾನು ಯಾವುದೇ ಕಾನೂನು ಬಾಹಿರ ಕೆಲಸ ಮಾಡಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕೋವಿಡ್ ಸಂದರ್ಭದಲ್ಲಿ ನಾನು ವೈದ್ಯಕೀಯ ಸಚಿವನಾಗಿದ್ದೆ. ಆಗ ಯಾವುದೇ ರೀತಿಯ ಕಾನೂನು ಬಾಹಿರ ಕೆಲಸ ಮಾಡಲಿಲ್ಲ. ಅಂತಃಕರಣದಿಂದ ಕೆಲಸ ಮಾಡಿದ್ದೇನೆ ಎಂದರು.
ಕಳೆದ ರಾತ್ರಿ ರಾಜ್ಯ ಸರ್ಕಾರ ಮೈಕೆಲ್ ಡಿ ಕುನ್ಹಾ ನೇತೃತ್ವದ ಆಯೋಗದಿಂದ ಮಧ್ಯಂತರ ವರದಿ ಪಡೆದಿದೆ. ಎಲ್ಲರೂ ಸೇರಿ ವರದಿಯ ಬಗ್ಗೆ ಗುಣಾಕಾರ ಹಾಗೂ ಭಾಗಾಕಾರ ಲೆಕ್ಕ ಮಾಡಿದ್ದಾರೆ. ನಾನು ಕೋವಿಡ್ ಸಂದರ್ಭದಲ್ಲಿ ಯಾವುದೇ ಕಾನೂನು ಬಾಹಿರ ಕೆಲಸ ಮಾಡಿಲ್ಲ ಎಂದರು.
ಕೋವಿಡ್ ಸಮಯದಲ್ಲಿ ಯಡಿಯೂರಪ್ಪ ನೇತೃತ್ವದಲ್ಲಿ ಟಾಸ್ಕ್ಫೋರ್ಸ್ ರಚನೆ ಮಾಡಲಾಗಿತ್ತು. ಯಾವುದೇ ತೀರ್ಮಾನ ಇದ್ದರೂ ಟಾಸ್ಕ್ ಮೂಲಕ ತೆಗೆದುಕೊಳ್ಳುತ್ತಿದ್ದೆವು. ಹಿರಿಯ ಅಧಿಕಾರಿಗಳು ಹಾಗೂ ತಜ್ಞರು ಸಹ ಅದರಲ್ಲಿದ್ದರು. ವರದಿ ಬಗ್ಗೆ ಸರ್ಕಾರದ ಹೇಳಿಕೆ ಬರಲಿ. ಊಹಾಪೋಹಗಳಿಗೆ ನಾನು ಉತ್ತರ ಕೊಡಲ್ಲ ಎಂದು ಸರ್ಕಾರದ ವಿರುದ್ಧ ಕಿಡಿಕಾರಿದರು.
ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…
ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…
ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…
ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…
ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…