ರಾಜ್ಯ

ಹಸುಗಳ ಕೆಚ್ಚಲು ಕೊಯ್ದಿರುವ ವಿಚಾರ: ಸರ್ಕಾರದ ವಿರುದ್ಧ ಆರ್‌.ಅಶೋಕ್‌ ವಾಗ್ದಾಳಿ

ಬೆಂಗಳೂರು: ಸಂಕ್ರಾಂತಿ ಹಬ್ಬ ಬಂತೆಂದರೆ ಗೋ ಪೂಜೆ ಮಾಡುವುದು ಬಹಳ ಪವಿತ್ರವಾಗಿದೆ. ಆದರೆ ಕಾಂಗ್ರೆಸ್‌ ಸರ್ಕಾರ ಅಧಿಕಾರದ ಬಂದ ಮೇಲೆ ಸಂಕ್ರಾಂತಿ ಹಬ್ಬಕ್ಕೆ ಹಸುಗಳ ಕೆಚ್ಚಲು ಕೊಯ್ದಿರೋ ಘಟನೆಯನ್ನು ಗಿಫ್ಟ್‌ ಆಗಿ ನೀಡಿದೆ ಎಂದು ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ವಾಗ್ದಾಳಿ ನಡೆಸಿದ್ದಾರೆ.

ನಗರದ ಚಾಮರಾಜಪೇಟೆಯಲ್ಲಿ ರಾತ್ರೋರಾತ್ರಿ ದುಷ್ಕರ್ಮಿಗಳು ಹಸುಗಳ ಕೆಚ್ಚಲನ್ನು ಕೊಯ್ದಿದಿದ್ದು ಇಂದು ಆರ್‌.ಅಶೋಕ್‌ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ರಾಜ್ಯದಲ್ಲಿ ಹಸುವಿನ ಕೆಚ್ಚಲನ್ನು ಕತ್ತರಿಸುವಂತಹ ಜಿಹಾದಿ ಮನಸ್ಸುಗಳನ್ನು ಇಂದು ನಾವೆಲ್ಲಾ ನೋಡುತ್ತಿದ್ದೇವೆ. ಯಾರೂ ಕೂಡ ಇಂತಹ ಘಟನೆಯನ್ನು ಊಹಿಸಿರಲಿಲ್ಲ. ನಾನು ನನ್ನ ಜೀವನದಲ್ಲಿ ಇದೇ ಮೊದಲ ಬಾರಿಗೆ ಈ ಘಟನೆಯನ್ನು ವೀಕ್ಷಿಸುತ್ತಿದ್ದೇನೆ. ಇದಕ್ಕೆ ಪ್ರಮುಖ ಕಾರಣ ಕಾಂಗ್ರೆಸ್‌ ಸರ್ಕಾರ. ಈ ವರ್ಷದ ನ್ಯೂ ಇಯರ್‌ ಗಿಫ್ಟ್‌ ಆಗಿ ಬೆಲೆ ಏರಿಕೆ ಮಾಡಿದರು. ಇದೀಗ ಸಂಕ್ರಾಂತಿ ಹಬ್ಬದ ಅಂಗವಾಗಿ ಹಸುಗಳ ಕೆಚ್ಚಲನ್ನು ಕೊಯ್ದಿರುವ ಘಟನೆಯನ್ನು ಗಿಫ್ಟ್‌ ಆಗಿ ನೀಡಿದ್ದಾರೆ ಎಂದು ಕಿಡಿಕಾರಿದರು.

ಕೆಚ್ಚಲು ಕೊಯ್ದಿರೋ ಹಸುಗಳ ಮಾಲೀಕ ಆರ್‌ಎಸ್‌ಎಸ್‌ ಕಾರ್ಯಕರ್ತನಾಗಿದ್ದು, ಸ್ಥಳೀಯ ಪಶು ಆಸ್ಪತ್ರೆ ಉಳಿವಿಗಾಗಿ ಹಸುಗಳ ಮಾಲೀಕರು ಹೋರಾಟ ಮಾಡಿದ್ದರು. ಪಶು ಆಸ್ಪತ್ರೆಯ ಉಳಿವಿಗಾಗಿ ಈ ಹಸು ಪ್ರತಿಭಟನೆಯಲ್ಲಿ ಭಾಗಿಯಾಗಿತ್ತು ಎಂಬ ಕಾರಣಕ್ಕೆ ಅದನ್ನು ಸಹಿಸದಿರುವ ಜಿಹಾದಿ ಮನಸ್ಸುವುಳ್ಳವರು ಇಂತಹ ಕೆಲಸ ಮಾಡಿ, ಕೆಚ್ಚಲಿಗೆ ಹಾನಿ ಮಾಡಿದ್ದಾರೆ. ಸಂಕ್ರಾಂತಿ ಹಬ್ಬದ ಪ್ರಯುಕ್ತ ಈ ಸರ್ಕಾರ ಸಮಾಜಕ್ಕೆ ಯಾವ ರೀತಿ ಸಂದೇಶವನ್ನು ನೀಡುತ್ತಿದೆ. ಹಿಂದೂಗಳು ಈ ರಾಜ್ಯದಲ್ಲಿ ಜೀವನ ಮಾಡುವುದು ಹೇಗೆ? ರಾಜ್ಯ ಸರ್ಕಾರದ ನಾಯಕರು ಮಾತು ಎತ್ತಿದರೆ ದೇವಸ್ಥಾನಗಳಿಗೆ ಹೋಗಿ ಪೂಜೆ ಮತ್ತು ಹೋಮ ಮಾಡುತ್ತಾರೆ. ಅದೆಲ್ಲಾ ನಾಟಕ ಎಂಬಂತೆ ಬಿಂಬಿತವಾಗಿದೆ ಎಂದು ತಿಳಿಸಿದರು.

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ: ಎಸ್‌ಐಆರ್: ಶಿಕ್ಷಣ ಸಂಸ್ಥೆಗಳಿಗೆ ಸೂಕ್ತ ಮಾರ್ಗದರ್ಶನ ಅಗತ್ಯ

ಎಸ್‌ಐಆರ್ ಪ್ರಕ್ರಿಯೆ ಪ್ರಾರಂಭವಾದ ನಂತರ ಮಾಧ್ಯಮಗಳಲ್ಲಿ ಕೆಲವು ಬಿಎಲ್‌ಒಗಳು ನಿವಾಸಿಗಳ ಸ್ಥಳಕ್ಕೆ ಬಾರದೆ ಅವರಿದ್ದ ಕಡೆಗೇ ಕರೆಸಿಕೊಂಡು ಕೆಲಸ ನಿರ್ವಹಿಸುವ…

33 mins ago

ಓದುಗರ ಪತ್ರ: ದಸರಾದಲ್ಲಿ ಕಂಬಳ ಬೇಕೇ?

ಸಾಂಸ್ಕೃತಿಕ ನಗರ ಮೈಸೂರಿನಲ್ಲಿ ನಾಡಹಬ್ಬ ದಸರಾ ೧೬೧೦ ರಲ್ಲಿ ಪ್ರಾರಂಭವಾಗಿ, ಇಲ್ಲಿನ ಸಂಸ್ಕೃತಿಗಳನ್ನು ಅಳವಡಿಸಿಕೊಂಡು ಆಚರಿಸುತ್ತಿರುವುದು ಎಲ್ಲರಿಗೂ ತಿಳಿದಿರುವ ಸಂಗತಿ.ಇತ್ತೀಚಿನ…

39 mins ago

ಉಪನಗರ ಯೋಜನೆ ಖಂಡಿತ ಅಭಿವೃದ್ಧಿಯಲ್ಲ

ಆರ್.ಪಿ.ವೆಂಕಟೇಶಮೂರ್ತಿ ಬೆಂಗಳೂರು ಮತ್ತು ಸುತ್ತಮುತ್ತಲಿನ ದುಃಸ್ಥಿತಿಗೆ ಎಲ್ಲ ರಾಜಕೀಯ ಪಕ್ಷಗಳ ಕೊಡುಗೆ ಇದೆ, ರಾಜಕೀಯ ನಾಯಕರು ದಯಮಾಡಿ ಆತ್ಮಾವಲೋಕನ ಮಾಡಿಕೊಳ್ಳಬೇಕು.…

44 mins ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಬಗೆದಷ್ಟು ಬಹಿರಂಗ; ರಾಮಮಂದಿರ ಕಾಣಿಕೆ ಲೂಟಿ

ಹಲವು ದಶಕಗಳ ಹೋರಾಟದಿಂದ ಎರಡೂವರೆ ವರ್ಷಗಳ ಹಿಂದೆ ನನಸಾದ ಹಿಂದುಗಳ ಧಾರ್ಮಿಕ ಶ್ರದ್ಧಾ ಕೇಂದ್ರವಾದ ಶ್ರೀರಾಮ ಮಂದಿರದಗಿರುವ ಭಕ್ತರ ಕಾಣಿಕೆಯ…

49 mins ago

ಎಸ್‌ಐಆರ್: ಮಿಶ್ರ ಪ್ರತಿಕ್ರಿಯೆ

ಕೆ.ಎಸ್.ಚಂದ್ರಶೇಖರ ಮೂರ್ತಿ ‘ಸಂವಿಧಾನಬದ್ಧ ಪ್ರಕ್ರಿಯೆ; ಕಾರ್ಯವಿಧಾನದ ಬಗ್ಗೆ ಅಸಮಾಧಾನ’ ಸಾಹಿತಿಗಳು, ಗಣ್ಯರು, ಮುಖಂಡರ ಅಭಿಪ್ರಾಯ ಮೈಸೂರು: ಭಾರತೀಯ ಚುನಾವಣಾ ಆಯೋಗದ…

55 mins ago