ಚಿಕ್ಕಮಗಳೂರು : ಮುಂಗಾರು ಮಳೆಗೆ ಜಿಲ್ಲೆಯಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ ನಲ್ಲಿ ಜಲವೈಭವ ಸೃಷ್ಠಿಯಾಗುತ್ತಿದ್ದು, ಪ್ರವಾಸಿಗರನ್ನ ತನ್ನತ್ತ ಕೈ ಬೀಸಿ ಕರೆಯುತ್ತಿದೆ. ಹಸಿರು ಬೆಟ್ಟ ಗುಡ್ಡಗಳ ನಡುವೆ ಹಾಲ್ನೊರೆಯಂತೆ ಧುಮ್ಮಿಕ್ಕಿ ಹರಿಯುತ್ತಿರುವ ಜಲಪಾತದ ಅದ್ಭುತ ದೃಶ್ಯವನ್ನು ನೋಡಲು ಎರಡು ಕಣ್ಣು ಸಾಲದಾಗಿದೆ. ೧೦೦ ಅಡಿ ಎತ್ತರದಿಂದ ಬೀಳುತ್ತಿರುವ ಜಲಧಾರೆಯ ವೈಭವಕ್ಕೆ ಪ್ರವಾಸಿಗರು ಫುಲ್ ಫಿದಾ ಆಗಿದ್ದಾರೆ. ಅಲ್ಲದೆ ರಸ್ತೆಯ ಉದ್ದಕ್ಕೂ ಮಿನಿ ಜಲಪಾತಗಳು ಕೂಡ ಸೃಷ್ಠಿಯಾಗಿದ್ದು, ರಸ್ತೆಯಲ್ಲಿ ನಿಂತು ಫೋಟೋ ಕ್ಲಿಕ್ಕಿಸಿಕೊಳ್ಳುತ್ತ ಪ್ರವಾಸಿಗರು ಫುಲ್ ಎಂಜಾಯ್ ಮಾಡುತ್ತಿದ್ದಾರೆ. ಇನ್ನು ಮುಂಜಾಗ್ರತಾ ಕ್ರಮವಾಗಿ ಜಲಪಾತಗಳ ಬಳಿ ಪೊಲೀಸರನ್ನ ನಿಯೋಜನೆ ಮಾಡಲಾಗಿದೆ.
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…